ಕುವೈತ್ ಕನ್ನಡ ಕೂಟದಿಂದ ದಾಸ ಜಯಂತಿ ಆಚರಣೆ

ಈ ಸಲದ ಮುಖ್ಯ ಆಕರ್ಷಣೆಯಾಗಿ ಖ್ಯಾತ ಹಿಂದೂಸ್ತಾನಿ ಗಾಯಕ ಶಂಕರ್ ಶಾನಭಾಗ್ ಅವರ ದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮ ನಡೆಯಿತು. ಇವರಿಗೆ ನರೇಂದ್ರ ನಾಯಕ್ ಹಾರ್ಮೋನಿಯಂ, ತೋನ್ಸೆ ರಂಗ ಪೈ ತಬಲಾ ಹಾಗೂ ಕೆ. ಜಯಂತ್ ನಾಯಕ್ ಮತ್ತು ಕಮಲಾಕ್ಷ ಕಿಣಿ ತಾಳದಲ್ಲಿ ಸಹಕರಿಸಿದರು.
ಈ ಗಾಯನ ಕಾರ್ಯಕ್ರಮ ನೆರೆದ ಪ್ರೇಕ್ಷಕ ವೃಂದದ ಪ್ರಶಂಷೆಗೆ ಪಾತ್ರವಾಯಿತು. ಕೂಟದ ಸದಸ್ಯರು ರಾಧಾ ಕಲ್ಯಾಣವನ್ನು ಶಾಸ್ತೋಕ್ತವಾಗಿ ಕರ್ನಾಟಕ ಸಂಗೀತ ಗಾಯನದೊಂದಿಗೆ ವಧುವರರ ಮೆರವಣಿಗೆ, ನರ್ತನಗಳೊಂದಿಗೆ ನಡೆಸಿದರು. ವಿಶೇಷವಾಗಿ ಆಮಂತ್ರಿತರಾಗಿದ್ದ ಕರ್ನಾಟಕ ಸಂಗೀತ ವಿದುಷಿ ಬೆಂಗಳೂರಿನ ಸುಮಾ ವೆಂಕಟೇಶ್ ರ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಿತ್ತು.
ಕೂಟದ ಚಿಣ್ಣರು ರಂಗು ರಂಗಿನ ವೇಷ ಭೂಷಣಗಳಿಂದ ರಾಧಾ ಕೃಷ್ಣರಾಗಿ ಛದ್ಮ ವೇಷ ಸ್ಪರ್ಧೆಯಲ್ಲಿ ಕಾಣಿಸಿಕೊಂಡರು. ಕನ್ನಡ ಕೂಟದ ಅದ್ಯಕ್ಷ ಡಾ. ಸುರೇಂದ್ರ ನಾಯಕ್ ಕೆ. ಸ್ವಾಗತಿಸಿದರು. ಕಾರ್ಯದರ್ಶಿ ರಾಮ ಕುಮಾರ್ ವಂದಿಸಿದರು. ಪುಷ್ಕಳ ಗಣೇಶನ್, ರಾಮಚಂದ್ರ ಭಟ್, ರೇಖಾ ದಾಮೋದರ್, ಮಲ್ಲಿಕಾ ರವಿ, ಅನಿಲ್ ಪ್ರಭು, ರಮೇಶ್ ಚಿಕ್ಕಣ್ಣ, ಡಾ.ಯೋಗೇಶ್ ಸಹಕರಿಸಿದರು. ರಾಧಾ ಕಲ್ಯಾಣದ ಅಂಗವಾಗಿ ಮಂಗಳೂರು ಶೈಲಿಯ ಬಾಳೆಎಲೆ ಪ್ರಸಾದವನ್ನು ವಿತರಿಸಲಾಯಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications