'ಮುಖ್ಯಮಂತ್ರಿ' ಚಂದ್ರುಗೆ-ಶ್ರೀರಂಗ ರಂಗ ಪ್ರಶಸ್ತಿ

1970ರಿಂದ ನಾಟಕ ರಂಗದಲ್ಲಿ ಸಕ್ರಿಯರಾಗಿರುವ ಚಂದ್ರು ಅವರು ನಟನಾಗಿ, ನಿರ್ದೇಶಕನಾಗಿ, ತಂತ್ರಜ್ಞರಾಗಿ, ಸಂಘಟಕನಾಗಿ ರಂಗಭೂಮಿಯ ಸೇವೆಗೈದಿದ್ದಾರೆ. ನೂರಕ್ಕೂ ಹೆಚ್ಚು ನಾಟಕಗಳ ಮೂರು ಸಾವಿರಕ್ಕೂ ಮಿಕ್ಕಿ ಪ್ರದರ್ಶನಗಳಲ್ಲಿ ಅಭಿನಯಿಸಿದ ಕೀರ್ತಿ ಇವರದು. ಇವರಿಗೆ ಅತಿ ಹೆಚ್ಚು ಖ್ಯಾತಿ ತಂದುಕೊಟ್ಟ ’ಮುಖ್ಯಮಂತ್ರಿ’ ನಾಟಕದಲ್ಲಿ ಮುನ್ನೂರಕ್ಕೂ ಹೆಚ್ಚು ಸಲ ರಂಗವೇರಿದ್ದಾರೆ. ಹೆಸರಾಂತ ರಂಗ ನಿರ್ದೇಶಕರಾದ ಬಿ.ವಿ.ಕಾರಂತ, ಪ್ರೇಮಾ ಕಾರಂತ, ಬಿ. ಜಯಶ್ರೀ, ಟಿ.ಎನ್. ಸೀತಾರಾಮ್, ಬಿ.ವಿ.ರಾಜಾರಾಮ್, ಪ್ರಸನ್ನ ಮುಂತಾದವರ ನಿರ್ದೇಶನದಲ್ಲಿ ಅಭಿನಯಿಸಿದ ಕೀರ್ತಿ ಇವರದ್ದು.
ಮುಖ್ಯಮಂತ್ರಿ, ಗರ್ಭಗುಡಿ, ಭರತಪ್ಪನ ಸೊಂಟಕ್ಕೆ ಗಂಟೆ,ಕತ್ತಲ ದಾರಿ, ತಾಯಿ, ಕೇಳು ಜನಮೇಜಯ, ನಮ್ಮೊಳಗೊಬ್ಬ ನಾಜೂಕಯ್ಯ ಮುಂತಾದವು ಇವರು ನಟಿಸಿದ ಪ್ರಮುಖ ನಾಟಕಗಳು. ಸುಮಾರು ನಾಲ್ಕುನೂರ ಐವತ್ತಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿ ಕನ್ನಡಿಗರ ಮನೆ ಮಾತಾಗಿರುವವರು ಮುಖ್ಯಮಂತ್ರಿ ಚಂದ್ರು.
ಮಾರ್ಚ್ 30 ಶುಕ್ರವಾರ ಸಂಜೆ 5.30ಕ್ಕೆ ಎಮೆರೇಟ್ಸ್ ಥಿಯೇಟೆರ್, ದುಬೈನಲ್ಲಿ ಧ್ವನಿ ಪ್ರತಿಷ್ಠಾನದ 27ನೇ ವಾರ್ಷಿಕೋತ್ಸವ ’ಧ್ವನಿ ರಂಗ ಸಿರಿ-2012’ರಲ್ಲಿ ಪ್ರಶಸ್ತಿ ಪ್ರದಾನವನ್ನು ನೆರವೇರಿಸಲಾಗುವುದು. ಸಮಾರಂಭದ ಅಂಗವಾಗಿ ಪ್ರಕಾಶ್ ರಾವ್ ಪಯ್ಯಾರ್ ಅವರ ನಿರ್ದೇಶನದಲ್ಲಿ ’ಆಷಾಡದ ಒಂದು ದಿನ" (ಪಟ್ಟಣ ಶೆಟ್ಟಿಯವರು ಅನುವಾದಿಸಿರುವ ಕನ್ನಡ ನಾಟಕ)ವನ್ನು ಪ್ರದರ್ಶಿಸಲಾಗುವುದು. ನಾಟಕದ ಪ್ರಮುಖ ಭೂಮಿಕೆಯಲ್ಲಿ ಆಶಾ ಕೊರಿಯ, ಪ್ರತಿಮಾ ಶೆಟ್ಟಿ, ಡೊನಾಲ್ಡ್ ಕೊರಿಯ, ಪ್ರಭಾಕರ್ ಕಾಮತ್, ಸುದರ್ಶನ ಹೆಗ್ಡೆ, ಲವೀನಾ ಫ಼ೆರ್ನಾಡಿಸ್, ಅಶೋಕ್ ಅಂಚನ್, ಸಂತೋಷ ಪೂಜಾರಿ, ಸಂಪತ್ ಶೆಟ್ಟಿ, ರೇಶ್ಮಾ ಪಿರೇರಾ, ದೀಪಾ ರೋಹಿತ್, ಜಗನ್ನಾಥ್ ಬೆಳ್ಳಾರೆ, ಚಾರ್ಲ್ಸ್, ಐಶ್ವರ್ಯಾ ಮುಂತಾದವರು ಇರುವರು. ನಾಟಕಕ್ಕೆ ಪ್ರವೇಶ ಉಚಿತ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications