ಅಟ್ಲಾಂಟಾ ಅಕ್ಕ ಕನ್ನಡ ಸಮ್ಮೇಳನಕ್ಕೆ ಡಿವಿ 'ಯಸ್'

ಎರಡು ವರ್ಷಗಳಿಗೊಮ್ಮೆ ವಿಶ್ವ ಕನ್ನಡಿಗರನ್ನು ಒಗ್ಗೂಡಿಸುವ ಈ ಸಂಭ್ರಮದ ಕನ್ನಡ ಸಮ್ಮೇಳನ ಮೂರು ದಿನಗಳ ಕಾಲ ಜಾರ್ಜಿಯಾ ಇಂಟರ್ನ್ಯಾಷನಲ್ ಕನ್ವೆಷನ್ ಸೆಂಟರ್ ನಡೆಯಲಿದೆ. ಈ ಕನ್ನಡ ಹಬ್ಬಕ್ಕೆ ಸದಾನಂದ ಗೌಡರನ್ನು ಆಮಂತ್ರಿಸಲೆಂದು ಅಮೆರಿಕದಿಂದ ಅಕ್ಕ ಅಧ್ಯಕ್ಷ ದಯಾನಂದ ಅಡಪ, ಉಪಾಧ್ಯಕ್ಷ ಶಿವಮೂರ್ತಿ ಕೀಲಾರ, ಅಮರನಾಥ ಗೌಡ, ತಿಮ್ಮಪ್ಪ ಮುಂತಾದವರು ಆಗಮಿಸಿದ್ದರು.
ಗೌಡರ ಜೊತೆಗೆ ಗಣ್ಯ ರಾಜಕಾರಣಿಗಳ ತಂಡ ಕೂಡ ಈ ಸಮ್ಮೇಳನದಲ್ಲಿ ಭಾಗವಹಿಸಲಿದೆ. ಅವರಲ್ಲಿ ಪ್ರಮುಖರೆಂದರೆ, ಗೃಹ ಸಚಿವ ಆರ್ ಅಶೋಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿಎಂ ಉದಾಸಿ ಮುಂತಾದವರು.
ಅಕ್ಕ ಬಗ್ಗೆ : 1998ರಲ್ಲಿ ಸ್ಥಾಪಿತವಾದ ಅಮೆರಿಕ ಕನ್ನಡ ಕೂಟಗಳ ಆಗರ (ಅಕ್ಕ) ಉತ್ತರ ಅಮೆರಿಕಾದಲ್ಲಿರುವ ಒಂದೂವರೆ ಲಕ್ಷಕ್ಕೂ ಹೆಚ್ಚಿರುವ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ತಂದು ಅಮೆರಿಕದಲ್ಲಿಯೂ ಕನ್ನಡತನವನ್ನು ಜೀವಂತವಾಗಿಡಲು ಶ್ರಮಿಸುತ್ತಿದೆ. 'ಅಕ್ಕ' ಸಂಸ್ಥೆ ಅಮೆರಿಕನ್ನಡಿಗರು ಮತ್ತು ಕರ್ನಾಟಕದಲ್ಲಿರುವ ಕನ್ನಡಿಗರ ನಡುವಿನ ಸಾಂಸ್ಕೃತಿಕ ಸೇತುವೆಯಾಗಿದೆ.
ಸಾಂಸ್ಕೃತಿಕ, ಸಾಹಿತ್ಯಿಕ ಕಾರ್ಯಕ್ರಮಗಳನ್ನು ಮಾಡುವುದು ಮಾತ್ರವಲ್ಲದೆ, ಕರ್ನಾಟಕದಲ್ಲಿನ ಶಾಲೆಗಳಿಗೆ ಕಟ್ಟಡ ನಿರ್ಮಿಸುವ ಮುಖಾಂತರ, ನೆರೆ ಸಂತ್ರಸ್ತರಿಗೆ ಹಣ ಸಂಗ್ರಹಿಸುವ ಮುಖಾಂತರ, ಹಳ್ಳಿಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸುವ ಮುಖಾಂತರ, ಅನೇಕ ಪ್ರತಿಭಾವಂತ ಬಡವರಿಗೆ ಸ್ಕಾಲರ್ಶಿಪ್ ನೀಡುವ ಮುಖಾಂತರ ಅನೇಕ ಸಾಮಾಜಿಕ ಕಾರ್ಯದಲ್ಲಿಯೂ ತೊಡಗಿಕೊಂಡಿದೆ.
ಸಂಸ್ಕೃತಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಎರಡು ವರ್ಷಗಳಿಗೊಮ್ಮೆ ವಿಶ್ವ ಕನ್ನಡ ಸಮ್ಮೇಳನವನ್ನು ಅಕ್ಕ ಆಯೋಜಿಸುತ್ತ ಬಂದಿದೆ. ಈ ಬಾರಿ 5 ಸಾವಿರಕ್ಕೂ ಹೆಚ್ಚಿನ ಕನ್ನಡಿಗರು ಆಗಮಿಸುವ ಸಂಭವನೀಯತೆಯಿದೆ. ಕರ್ನಾಟಕದಿಂದಲೂ ಅನೇಕ ಕಲಾವಿದರು ಕಲಾ ಪ್ರದರ್ಶನ ನೀಡಲಿದ್ದಾರೆ. ಸಮ್ಮೇಳನದಲ್ಲಿ ಭಾಗವಹಿಸುವವರಿಗಾಗಿ ನೊಂದಾವಣಿ ಈಗಾಗಲೆ ಆರಂಭವಾಗಿದ್ದು, ಏಪ್ರಿಲ್ 30ರೊಳಗೆ ನೊಂದಾವಣಿ ಮಾಡಿಕೊಳ್ಳುವವರಿಗೆ ವಿಶೇಷ ರಿಯಾಯಿತಿಯಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications