ಮುಖ್ಯಮಂತ್ರಿ ಚಂದ್ರುಗೆ 'ಧ್ವನಿ ಶ್ರೀರಂಗ' ಪ್ರಶಸ್ತಿ ಪ್ರದಾನ

ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರು ವಹಿಸಿದ್ದರು. ಧ್ವನಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರಶಸ್ತಿ ಸ್ವೀಕರಿಸಿದ ಮುಖ್ಯಮಂತ್ರಿ ಚಂದ್ರು ಅವರು, ಧ್ವನಿ ವಿದೇಶಿ ಮಣ್ಣಿನಲ್ಲಿ ನಡೆಸುವ ಕನ್ನಡ ಕೆಲಸವನ್ನು ಶ್ಲಾಘಿಸಿ, ವಿದೇಶದಲ್ಲಿ ನೆಲೆಸಿರುವ ಕನ್ನಡಿಗರು ತಮ್ಮ ಮಕ್ಕಳಿಗೆ ಕನ್ನಡ ಕಲಿಸುವುದರ ಮೂಲಕ ತಮ್ಮ ನಾಡು ನುಡಿಯ ಕೊಂಡಿ ಕಳಚದಂತೆ ನೋಡಿಕೊಂಡು ಮಕ್ಕಳಲ್ಲಿ ತಾಯಿನಾಡಿನ ಬಗ್ಗೆ ಪ್ರಿತಿಹುಟ್ಟಿಸಬಹುದೆಂದು ಆಭಿಪ್ರಾಯಪಟ್ಟರು. ತಾವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷತೆ ವಹಿಸಿದ ಮೇಲೆ ಸುಮಾರು ನಾಲ್ಕು ದೇಶದಲ್ಲಿ ಮಕ್ಕಳಿಗೆ ಕನ್ನಡ ಕಲಿಸುವ ತರಗತಿ ನಡೆಸುವಂತೆ ಪ್ರೋತ್ಸಾಹಿಸಿ, ಪ್ರಾಧಿಕಾರದ ಸಹಕಾರದೊಂದಿಗೆ ನಡೆಸುತ್ತಾ ಬರುತ್ತಿರುವುದನ್ನು ಸಭೆಗೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಡಾ.ನಲ್ಲೂರು ಪ್ರಸಾದ್ ಅವರು, ಪ್ರಕಾಶ್ ರಾವ್ ಪಯ್ಯಾರ್ ಅವರು ಕಟ್ಟಿ ಬೆಳೆಸಿದ ’ಧ್ವನಿ’ ಸತತ 27 ವರ್ಷಗಳಿಂದ ಹೊರನಾಡಿನಲ್ಲಿ ಕನ್ನಡ ಕೆಲಸ ನಡೆಸುತ್ತಾ ಬಂದಿರುವದು ಸಂತೋಷದ ವಿಷಯ. ಧ್ವನಿ ಇನ್ನಷ್ಟು ಕನ್ನಡದ ಕೆಲಸ ನಡೆಸುತ್ತಾ ಬರಲಿ ಎಂದು ಹರಸಿದರು. ಡಾ. ನಲ್ಲೂರು ಅವರನ್ನು ಯು.ಇ.ಎ.ಕನ್ನಡಿಗರ ಪರವಾಗಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಯು.ಎ.ಇ.ಯಲ್ಲಿ ಭಾರತೀಯ ರಾಯಭಾರಿ ಯಾಗಿರುವ ಕನ್ನಡಿಗ ಎಂ.ಕೆ.ಲೋಕೇಶ್ ಅವರು ಆಗಮಿಸಿದ್ದರು. ಸಮಾರಂಭದ ಪ್ರಮುಖ ಪ್ರಾಯೋಜಕರಾದ ಫಾರ್ಚುನ್ ಗ್ರೌಪ್ ಆಫ್ ಹೋಟೆಲ್ಸ್ ನ ಗ್ರೂಪ್ ಮ್ಯಾನೆಜಿಂಗ್ ಡೈರೆಕ್ಟರ್ ರವೀಶ್ ಗೌಡ, ಅರಬ್ ಉಡುಪಿ ಗ್ರೂಪ್ ಆಫ್ ರೇಸ್ಟೊರೆಂಟ್ ನ ಮಾಲೀಕ ಶೇಕರ್ ಬಿ.ಶೆಟ್ಟಿ, ಚಿಲ್ಲಿ ವಿಲ್ಲಿ ಗ್ರೂಪ್ ನ ಆಡಳಿತ ನಿರ್ದೇಶಕ ಸತೀಶ್ ವೆಂಕಟರಮಣ, ಸ್ಪ್ರೇಟೆಕ್ ಗ್ರೂಪ್ಸ್ ಆಡಳಿತ ನಿರ್ದೇಶಕ ರಾಮಚಂದ್ರ ಹೆಗ್ಡೆ ಹಾಗೂ ಮದನ್ ಗೌಡ ಗೌರವ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸರ್ವೋತ್ತಮ ಶೆಟ್ಟಿ ಅವರು ನಿರ್ವಹಿಸಿದರು. ಸಂಗೀತ ರಾಜೇಶ್ ಮತ್ತು ಅನನ್ಯ ಶ್ರಿಧರ್ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮ ಅರ್ಥರ್ ಪಿರೇರ ಅವರಾ ವಂದನೆಯೊಂದಿಗೆ ಮುಕ್ತಾಯಗೊಂಡಿತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications