'ಸಿಂಚನ'ಕ್ಕೆ ಲೇಖನ ಕಳಿಸಿ ಬಹುಮಾನ ಗೆಲ್ಲಿರಿ!

ಒಂದು ವರುಷ ತುಂಬಿದ ಈ ಹರುಷಕ್ಕಾಗಿ ಬರ್ತ್ಡೇ ಆಚರಿಸಿಕೊಳ್ಳುವ ಆಸೆ. ಅದಕ್ಕಾಗಿ ನವೆಂಬರ್ 2012ರಲ್ಲಿ ಅಲಂಕರಿಸಿಕೊಂಡು ಬಿಡುಗಡೆಗೊಳ್ಳಲು ಸಿದ್ದವಾಗುವ ತವಕದಲ್ಲಿರುವ ಸಿಂಚನದ ವಿಶೇಷ ಸಂಚಿಕೆಗಾಗಿ ನಿಮ್ಮ ಬರಹಗಳಿಂದ ಇನ್ನಷ್ಟು ಸುಂದರವಾಗಿ ಕಾಣುವ ಆಸೆ, ಅದಕ್ಕಾಗಿಯೇ ಈ ಆಹ್ವಾನ, ಆಮಂತ್ರಣ.
ಅಂಕಣ, ಕಥೆ ಮತ್ತು ಕವನವನ್ನು ಒಳಗೊಂಡ ಮೂರು ವರ್ಗಗಳಿಗೆ ನಿಮ್ಮ ಬರಹಗಳನ್ನು ಕಳುಹಿಸಬಹುದು. ವರ್ಗಗಳ ವಿವರಗಳನ್ನು ಕೆಳಗೆ ನೀಡಲಾಗಿದೆ. ಪ್ರತೀ ವರ್ಗದಲ್ಲೂ ಆಯ್ದ 3 ಉತ್ತಮ ಬರಹಗಳಿಗೆ ಬಹುಮಾನ ಕೂಡ ಇದೆ. ಇನ್ನೇಕೆ ತಡ? ನಿಮ್ಮ ಬರಹಗಳನ್ನು ಆದಷ್ಟು ಬೇಗ ನಮಗೆ ಕಳುಹಿಸುತ್ತೀರಾ ತಾನೆ?
ವರ್ಗ - 1
ವಿಷಯ ಆಧಾರಿತ ಅಂಕಣ (ಮಿತಿ - 1 ಪುಟ, ತುಂಗ ಅಕ್ಷರ ಶೈಲಿ, ಗಾತ್ರ 9ರಲ್ಲಿ)
ವಿಷಯ : "ಸ್ಥಳೀಯ ಕನ್ನಡ ಸಂಘ ಮತ್ತು ನಾನು" ಅಥವಾ "ಹೊರದೇಶದಲ್ಲಿ ನಾನು ಕಂಡದ್ದು ಕಲಿತದ್ದು"
ವರ್ಗ - 2
ಸಣ್ಣ ಕಥೆ : (ಮಿತಿ - 2 ಪುಟಗಳು, ತುಂಗ ಅಕ್ಷರ ಶೈಲಿ, ಗಾತ್ರ 9ರಲ್ಲಿ)
ವರ್ಗ - 3
ಕವನ, ಹನಿಗವನ : (ಮಿತಿ - 1 ಪುಟ, ತುಂಗ ಅಕ್ಷರ ಶೈಲಿ, ಗಾತ್ರ 9ರಲ್ಲಿ)
ಬರಹಗಾರರ ಗಮನಕ್ಕೆ...
1. "ಸಿಂಚನ" ವಿಶೇಷ ಸಂಚಿಕೆಗೆ ಕಳಿಸುವ ಕಥೆ, ಅಂಕಣ, ಕವನಗಳು ಸ್ವಂತದ್ದಾಗಿರಬೇಕು ಮತ್ತು ಬೇರೆಲ್ಲೂ (ಅಂತರ್ಜಾಲ ಮತ್ತು ಮುದ್ರಿತ ಮಾಧ್ಯಮ) ಪ್ರಕಟವಾಗಿರಬಾರದು.
2. ಅಂಕಣ, ಕಥೆ ಮತ್ತು ಕವನಗಳು "ಬರಹ" ದಲ್ಲಿರಬೇಕು. ಕೈ ಬರಹದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.
3. ಪ್ರತೀ ವರ್ಗದಲ್ಲಿ ಆಯ್ದ 3 ಉತ್ತಮ ಕೃತಿಗಳಿಗೆ ಬಹುಮಾನವಿರುತ್ತದೆ. ಬಹುಮಾನದ ವಿವರಗಳನ್ನು ಮುಂಬರುವ "ಸಿಂಚನ" ಸಂಚಿಕೆಯಲ್ಲಿ ನಿರೀಕ್ಷಿಸಿ.
4. ಬಹುಮಾನಿತ ಕೃತಿಗಳನ್ನು "ಸಿಂಚನ" ನವೆಂಬರ್-2012ರ ವಿಶೇಷ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು. ಮಿಕ್ಕ ಕೃತಿಗಳನ್ನು ಯೋಗ್ಯವಾಗಿದ್ದಲ್ಲಿ "ಸಿಂಚನ" ಮಾಸ ಪತ್ರಿಕೆಯಲ್ಲಿ ಬಳಸಲಾಗುವುದು.
5. "ಸಿಂಚನ" ಸಂಪಾದಕ ಸಮಿತಿಯ ತೀರ್ಮಾನವೇ ಅಂತಿಮ. ಅಂಕಣಗಳನ್ನು ಪರಿಷ್ಕರಿಸಿ ಪ್ರಕಟಿಸುವ ಹಕ್ಕು "ಸಿಂಚನ" ಸಂಪಾದಕ ಸಮಿತಿಗೆ ಸೇರಿದ್ದು. ಬಹುಮಾನ ವಿಜೇತರಿಗೆ ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಮಿಂಚಂಚೆ ಮೂಲಕ ತಿಳಿಸಲಾಗುವುದು.
6. ಬರಹಗಾರರು ತಮ್ಮ ಕೃತಿಯ ಜೊತೆಗೆ ತಮ್ಮ ಸಂಪೂರ್ಣ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ವಯಸ್ಸು, ಭಾವಚಿತ್ರ ಮತ್ತು email IDಯನ್ನು ಕಳುಹಿಸಬೇಕು.
7. ಎಲ್ಲಾ ವರ್ಗಗಳಿಗೂ ಬರಹಗಳನ್ನು ಕಳುಹಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 15, 2012. ನಂತರ ಬಂದ ಬರಹಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
8. ನಿಮ್ಮ ಬರಹಗಳನ್ನು [email protected]ಗೆ ಮಿಂಚಂಚೆ ಮೂಲಕ ಕಳುಹಿಸಿ.
9. ವಿಶ್ವಕನ್ನಡಿಗರೆಲ್ಲರಿಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ.
ಸಿಂಚನ ಮಾಸಪತ್ರಿಕೆಯ ಎಲ್ಲ ಸಂಚಿಕೆಗಳನ್ನೂ ಈ ಅಂತರ್ಜಾಲ ಕೊಂಡಿಯಲ್ಲಿ ಓದಿ ಆನಂದಿಸಿ, ನಿಮ್ಮ ಪ್ರತಿಕ್ರಿಯೆಯನ್ನು [email protected]ಗೆ ಬರೆದು ತಿಳಿಸಿ. ಕನ್ನಡ ಸಂಘ (ಸಿಂಗಪುರ)ದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು www.singara.org ಅಂತರ್ಜಾಲ ತಾಣಕ್ಕೆ ಭೇಟಿ ಕೊಡಿ.
-ವೆಂಕಟ್, ಕಾರ್ಯದರ್ಶಿ, ಕನ್ನಡ ಸಂಘ (ಸಿಂಗಪುರ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications