ದಕ್ಷಿಣ ಕೊರಿಯಾದಲ್ಲಿ ಮೊಳಗಿದ ಕನ್ನಡ ಕಹಳೆ
ಕನ್ನಡ ರಾಜ್ಯೋತ್ಸವವು ನವೆಂಬರ್ 4ರಂದು ದಕ್ಷಿಣ ಕೊರಿಯಾ ರಾಜಧಾನಿಯಾದ ಸಿಯೋಲ್ ನಗರದ ಇಂಡಿಯನ್ ಎಂಬಸ್ಸಿ'ಗೆ ಸೇರಿದ ಇಂಡಿಯನ್ ಕಲ್ಚರಲ್ ಸೆಂಟರ್' ನಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು 'ಕೊರಿಯ ಕನ್ನಡ ಕೂಟ' ಸಂಘ ಹಮ್ಮಿಕೊಂಡಿತ್ತು. ತುಂಬಾ ಉತ್ಸಾಹದಿಂದ 40ಕ್ಕೂ ಹೆಚ್ಚು ಕನ್ನಡಿಗರು ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು.
ದಕ್ಷಿಣ ಕೊರಿಯಾದ ವಿವಿಧ ಭಾಗಗಳಿಂದ ಕನ್ನಡಿಗರು ಕನ್ನಡ ರಾಜ್ಯೋತ್ಸವದ ಸಲುವಾಗಿ ಸಿಯೋಲ್ ನಗರಕ್ಕೆ ಆಗಮಿಸಿದ್ದರು. ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 10 ಗಂಟೆಗೆ ಶುರುವಾಗಿದ್ದ ಕಾರ್ಯಕ್ರಮಗಳು ಸಂಜೆ 4 ಗಂಟೆಯವರಗೆ ಜರುಗಿದವು. ಬಂದಿದ್ದ ಕನ್ನಡಿಗರೆಲ್ಲರಿಗೂ ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಗಿತ್ತು.

ರಾಜ್ಯೋತ್ಸವ ಕಾರ್ಯಕ್ರಮವು ಸಾಯಿಬಾಬು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮೊದಲಿಗೆ ಪ್ರಾರ್ಥನೆ ತದನಂತರ ಧ್ವಜಾರೋಹಣ ನಡೆಯಿತು. ಎಲ್ಲರೂ ಸೇರಿ ನಾಡಗೀತೆಯನ್ನು ಹಾಡಿದರು. ಸಾಯಿಬಾಬು ಅವರು ಕನ್ನಡದ ಬಗ್ಗೆ ಹಿತವಚನಗಳನ್ನು ನುಡಿದರು. ಕೆಲುವು ಕನ್ನಡಿಗರು ಭಾವಗೀತೆ ಮತ್ತು ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಿ ಪ್ರೇಕ್ಷಕರ ಮನರಂಜಿಸಿದರು. ಮಕ್ಕಳಿಂದ ಡಿ.ವಿ.ಜಿ ಅವರ 'ಮಂಕುತಿಮ್ಮನ ಕಗ್ಗ'ದ ಕೆಲುವು ಸಾಲುಗಳ ಪಠಣವಾಯಿತು. ಮಕ್ಕಳು ಸರ್.ಎಮ್.ವಿಶ್ವೇಶ್ವರಯ್ಯ, ಸಂಗೊಳ್ಳಿ ರಾಯಣ್ಣ ಮತ್ತು ಮಿಸ್ ಕರ್ನಾಟಕ ವೇಷಗಳನ್ನು ಹಾಕಿ ವೇಷ ಭೂಷಣ ಸ್ಪರ್ಧೆಯಲ್ಲಿ ಪಾಲ್ಗೊಂಡು ರಂಜಿಸಿದರು.
ಮಧ್ಯಾಹ್ನ ಭೋಜನಾನಂತರ ಎಲ್ಲರೂ ಉತ್ಸಾಹದಿಂದ ಕನ್ನಡ ಚಲನಚಿತ್ರದ ಬಗ್ಗೆ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದಂಪತಿಗಳ ಸ್ಪರ್ಧಾತ್ಮಕ ಆಟಗಳು ಪ್ರೇಕ್ಷಕರಿಗೆ ಮುದ ನೀಡಿದವು. ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. [ವಿಡಿಯೋ : ದಕ್ಷಿಣ ಕೊರಿಯಾದಲ್ಲಿ ರಾಜ್ಯೋತ್ಸವ]
ಕೊರಿಯಾ ಕನ್ನಡ ಕೂಟ ಪ್ರತಿ ವರ್ಷ ಹೀಗೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತದೆ ಹಾಗು ನಾನಾ ವಿವಿಧ ಕಾರ್ಯಕ್ರಮಗಳನ್ನು (ಕೊರಿಯಾದ ವಿವಿಧ ಭಾಗಗಳಿಗೆ ಪ್ರವಾಸ, ಕ್ರಿಕೆಟ್ ಪಂದ್ಯಾವಳಿ ಇತ್ಯಾದಿ) ಹಮ್ಮಿಕೊಳ್ಳುತ್ತದೆ. ಆಸಕ್ತಿ ಇದ್ಹವರು "[email protected]" ಅಥವಾ "ಕೊರಿಯಾ ಕನ್ನಡ ಕೂಟ/korea kannada koota" ಫೇಸ್ ಬುಕ್ ಗ್ರುಪ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications