ದಕ್ಷಿಣ ಕೊರಿಯಾದಲ್ಲಿ ಮೊಳಗಿದ ಕನ್ನಡ ಕಹಳೆ
ಕನ್ನಡ ರಾಜ್ಯೋತ್ಸವವು ನವೆಂಬರ್ 4ರಂದು ದಕ್ಷಿಣ ಕೊರಿಯಾ ರಾಜಧಾನಿಯಾದ ಸಿಯೋಲ್ ನಗರದ ಇಂಡಿಯನ್ ಎಂಬಸ್ಸಿ'ಗೆ ಸೇರಿದ ಇಂಡಿಯನ್ ಕಲ್ಚರಲ್ ಸೆಂಟರ್' ನಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು 'ಕೊರಿಯ ಕನ್ನಡ ಕೂಟ' ಸಂಘ ಹಮ್ಮಿಕೊಂಡಿತ್ತು. ತುಂಬಾ ಉತ್ಸಾಹದಿಂದ 40ಕ್ಕೂ ಹೆಚ್ಚು ಕನ್ನಡಿಗರು ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು.
ದಕ್ಷಿಣ ಕೊರಿಯಾದ ವಿವಿಧ ಭಾಗಗಳಿಂದ ಕನ್ನಡಿಗರು ಕನ್ನಡ ರಾಜ್ಯೋತ್ಸವದ ಸಲುವಾಗಿ ಸಿಯೋಲ್ ನಗರಕ್ಕೆ ಆಗಮಿಸಿದ್ದರು. ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 10 ಗಂಟೆಗೆ ಶುರುವಾಗಿದ್ದ ಕಾರ್ಯಕ್ರಮಗಳು ಸಂಜೆ 4 ಗಂಟೆಯವರಗೆ ಜರುಗಿದವು. ಬಂದಿದ್ದ ಕನ್ನಡಿಗರೆಲ್ಲರಿಗೂ ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಗಿತ್ತು.

ರಾಜ್ಯೋತ್ಸವ ಕಾರ್ಯಕ್ರಮವು ಸಾಯಿಬಾಬು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮೊದಲಿಗೆ ಪ್ರಾರ್ಥನೆ ತದನಂತರ ಧ್ವಜಾರೋಹಣ ನಡೆಯಿತು. ಎಲ್ಲರೂ ಸೇರಿ ನಾಡಗೀತೆಯನ್ನು ಹಾಡಿದರು. ಸಾಯಿಬಾಬು ಅವರು ಕನ್ನಡದ ಬಗ್ಗೆ ಹಿತವಚನಗಳನ್ನು ನುಡಿದರು. ಕೆಲುವು ಕನ್ನಡಿಗರು ಭಾವಗೀತೆ ಮತ್ತು ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಿ ಪ್ರೇಕ್ಷಕರ ಮನರಂಜಿಸಿದರು. ಮಕ್ಕಳಿಂದ ಡಿ.ವಿ.ಜಿ ಅವರ 'ಮಂಕುತಿಮ್ಮನ ಕಗ್ಗ'ದ ಕೆಲುವು ಸಾಲುಗಳ ಪಠಣವಾಯಿತು. ಮಕ್ಕಳು ಸರ್.ಎಮ್.ವಿಶ್ವೇಶ್ವರಯ್ಯ, ಸಂಗೊಳ್ಳಿ ರಾಯಣ್ಣ ಮತ್ತು ಮಿಸ್ ಕರ್ನಾಟಕ ವೇಷಗಳನ್ನು ಹಾಕಿ ವೇಷ ಭೂಷಣ ಸ್ಪರ್ಧೆಯಲ್ಲಿ ಪಾಲ್ಗೊಂಡು ರಂಜಿಸಿದರು.
ಮಧ್ಯಾಹ್ನ ಭೋಜನಾನಂತರ ಎಲ್ಲರೂ ಉತ್ಸಾಹದಿಂದ ಕನ್ನಡ ಚಲನಚಿತ್ರದ ಬಗ್ಗೆ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದಂಪತಿಗಳ ಸ್ಪರ್ಧಾತ್ಮಕ ಆಟಗಳು ಪ್ರೇಕ್ಷಕರಿಗೆ ಮುದ ನೀಡಿದವು. ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. [ವಿಡಿಯೋ : ದಕ್ಷಿಣ ಕೊರಿಯಾದಲ್ಲಿ ರಾಜ್ಯೋತ್ಸವ]
ಕೊರಿಯಾ ಕನ್ನಡ ಕೂಟ ಪ್ರತಿ ವರ್ಷ ಹೀಗೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತದೆ ಹಾಗು ನಾನಾ ವಿವಿಧ ಕಾರ್ಯಕ್ರಮಗಳನ್ನು (ಕೊರಿಯಾದ ವಿವಿಧ ಭಾಗಗಳಿಗೆ ಪ್ರವಾಸ, ಕ್ರಿಕೆಟ್ ಪಂದ್ಯಾವಳಿ ಇತ್ಯಾದಿ) ಹಮ್ಮಿಕೊಳ್ಳುತ್ತದೆ. ಆಸಕ್ತಿ ಇದ್ಹವರು "[email protected]" ಅಥವಾ "ಕೊರಿಯಾ ಕನ್ನಡ ಕೂಟ/korea kannada koota" ಫೇಸ್ ಬುಕ್ ಗ್ರುಪ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications