ಲಂಡನ್ನಿನಲ್ಲಿ ಹೆಗ್ಗಡೆ, ಬಸವಣ್ಣ ಪುತ್ಥಳಿ ಸ್ಥಾಪನೆಗೆ ಶ್ಲಾಘನೆ

ಐತಿಹಾಸಿಕ ಬ್ರಿಟಿಷ್ ಪಾರ್ಲಿಮೆಂಟಿನ ಎದುರುಗಡೆ, ಥೇಮ್ಸ್ ನದಿಯ ದಡದಲ್ಲಿ ಐತಿಹಾಸಿಕ ಅಲ್ಬರ್ಟ್ ಎಂಬ್ಯಾಂಕ್ಮೆಂಟ್ ಮೇಲೆ ಮತ್ತು ಬಿಗ್ ಬೆನ್ ಬಳಿಯಲ್ಲಿ ಕಂಚಿನಿಂದ ತಯಾರಿಸಲಾಗಿರುವ ಬಸವಣ್ಣನ ಬೃಹತ್ ಪುತ್ಥಳಿಯನ್ನು ಸ್ಥಾಪಿಸಲು, ಗ್ರಾನೈಟ್ ಅಡಿಪೀಠ ನಿರ್ಮಿಸಲು ಲ್ಯಾಂಬೆತ್ ಪುರಸಭೆ ಅನುಮತಿ ನೀಡಿದೆ. ಮೂರ್ತಿ ಸ್ಥಾಪನೆಗೆ ಸಂಸತ್ತಿನಿಂದ ಅನುಮತಿ ಸಿಗಬೇಕಾಗಿದೆ.
ಯುನೈಟೆಡ್ ಕಿಂಗ್ಡಂನಲ್ಲಿ ಬ್ರಿಟಿಷ್ ಮತ್ತು ಭಾರತ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು, "ಜಾತಿರಹಿತ ಸಮಾಜಕ್ಕಾಗಿ ಸಾಕಷ್ಟು ಹೋರಾಟ ನಡೆಸಿದ ಬಸವೇಶ್ವರ, ವೈಚಾರಿಕತೆಯಲ್ಲಿ ಯಾವಾಗಲೂ ಎಲ್ಲರಿಗಿಂತ ಮುಂದಿದ್ದರು. ವಚನಗಳ ಮುಖಾಂತರ ಅವರು ಮಾಡಿರುವ ಬೋಧನೆಗಳು ಜಾಗತಿಕ ಮಹತ್ವ ಪಡೆದಿವೆ ಮತ್ತು ಅತ್ಯಾಧುನಿಕ ಯುಗದಲ್ಲಿಯೂ ಅವರು ಪ್ರಸ್ತುತ" ಎಂದರು.
ಲಂಡನ್ನಿನಲ್ಲಿ ಬಸವಣ್ಣನವರ ಮೂರ್ತಿಯನ್ನು ಸ್ಥಾಪಿಸಲು ಇಲ್ಲಿನ ಕನ್ನಡಿಗರು ಶ್ರಮಿಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಥೇಮ್ಸ್ ನದಿಯ ದಡದಲ್ಲಿ, ಪಾರ್ಲಿಮೆಂಟಿನ ಎದಿರು ಇರುವ ತಾಣದಲ್ಲಿ ಸ್ಥಾಪಿಸುತ್ತಿರುವುದರಿಂದ ಈ ತಾಣದ ಸೌಂದರ್ಯ ಇನ್ನೂ ಹೆಚ್ಚಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಲ್ಯಾಂಬೆತ್ನ ನಿಕಟಪೂರ್ವ ಮೇಯರ್ ಡಾ. ನೀರಜ್ ಪಾಟೀಲ್ ಅವರು ಉಪಸ್ಥಿತರಿದ್ದರು.
ಮಾರ್ಚ್ 13ರಂದು ಸಭೆ ಸೇರಿದ 5 ಸದಸ್ಯರ ಸಮಿತಿ, ಹಿಂದಿನ ಲ್ಯಾಂಬೆತ್ ಮೇಯರ್ ಆಗಿದ್ದ ಕನ್ನಡಿಗ ಡಾ. ನೀರಜ್ ಪಾಟೀಲ್ ಅವರ ಅರ್ಜಿಯ ವಿಚಾರಣೆ ಮಾಡಿ, 12ನೇ ಶತಮಾನದಲ್ಲಿಯೇ ಜಾತಿ ತಾರತಮ್ಯ ಮತ್ತು ಗುಲಾಮಗಿರಿಯನ್ನು ತೊಡೆಯಲು ಹೋರಾಟ ಮಾಡಿದ್ದ ಬಸವಣ್ಣನ ಮೂರ್ತಿ ಸ್ಥಾಪನೆಗೆ ಅಂಗೀಕಾರ ನೀಡಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications