ಅಮೆರಿಕನ್ನಡ ಬರಹಗಾರರಿಗೆ ಮತ್ತೊಂದು ಕರೆಯೋಲೆ

ಈ ಬಾರಿ ನಮ್ಮ ವಿಷಯ, ಸ್ಥೂಲವಾಗಿ : ಅಮೆರಿಕಾದಲ್ಲಿ ನಮ್ಮ ಬದುಕು.
ಈಗಾಗಲೇ ಹಲವಾರು ಕಡೆಗಳಲ್ಲಿ, ಕೆಲವಾರು ರೀತಿಯಲ್ಲಿ, ಹತ್ತಾರು ಲೇಖಕರಿಂದ ಈ ಭಾವ-ಬಣ್ಣಗಳು ಬಣ್ಣಿಸಲ್ಪಟ್ಟಿರಬಹುದು. 'ಅದನ್ನೇ ಮತ್ತೆ ಮತ್ತೆ ಏನು ಬರೆಯೋದು' ಅನ್ನುವ ಔದಾಸೀನ್ಯ ಬದಿಗಿರಿಸಿ, ನಮ್ಮ ವಲಸೆ-ಜೀವನದ ಆಸು-ಪಾಸುಗಳನ್ನು ಹತ್ತು ಹಲವು ಮಗ್ಗಲುಗಳನ್ನು ಒಂದೇ ಧಾರೆಯಲ್ಲಿ ಎರಡು ರಟ್ಟುಗಳ ನಡುವೆ ದಾಖಲಿಸೋಣ. ನಾವೆಲ್ಲ ಯಾವ್ಯಾವುದೋ ಕಾಲ ಘಟ್ಟಗಳಲ್ಲಿ ಪೆಟ್ಟಿಗೆ ಹೊತ್ತು, ಹೊಸ ಪಟ್ಟು ಕಲಿಯುವ ಜಟ್ಟಿಗಳಾಗಿ, ಹೊಸ ದೇಶದ ಹೊಸ ನೆಲವನ್ನು ಮುಟ್ಟಿದವರು. ನಮ್ಮೆಲ್ಲರ ಅನುಭವ-ಅನುಭಾವಗಳೂ ಅಷ್ಟೇ ವಿಭಿನ್ನ, ವೈವಿಧ್ಯತರ. ಅಂತೆಯೇ, ನಮ್ಮೆಲ್ಲರ ಅಭಿವ್ಯಕ್ತಿಯ ದಾರಿಗಳೂ ಭಿನ್ನ. ಆ ಭಿನ್ನತೆಗೆ ಅನುಗುಣವಾಗಿಯೇ ಅಭಿವ್ಯಕ್ತಿಸೋಣ. ಈ ವೈವಿಧ್ಯವೇ ಈ ಗ್ರಂಥದ ವಿಶೇಷವಾಗಲಿ. ಸಾಮಾಜಿಕವಾಗಿ ಮತ್ತು ಚಾರಿತ್ರಿಕವಾಗಿ ಅಮೆರಿಕನ್ನಡ ವಲಸೆಯ ಈ ಭಾವಗಳು, ಸ್ವರಗಳು, ಮುಖಗಳು ಅತಿ ಮುಖ್ಯವಾಗಲಿವೆ.
ನಮ್ಮ ನಿತ್ಯ ಜೀವನ, ವೃತ್ತಿ ಜೀವನ, ಮನೆ/ನೆರೆಹೊರೆ, ಶಾಲೆ/ಕಾಲೇಜು ಪರಿಸರ, ಕಂಡದ್ದು, ಕೇಳಿದ್ದು, ಆಡಿದ್ದು, ಹಾಡಿದ್ದು, ತಿರುಗಿದ್ದು, ಮರುಗಿದ್ದು, ಹೊರಳಿದ್ದು, ನರಳಿದ್ದು, ಬಿದ್ದದ್ದು, ಎದ್ದದ್ದು... ಇನ್ನೂ ಏನೇನನ್ನು ಮಾಡಿದ್ದೇವೆ ಯಾ ಮಾಡಿಲ್ಲ! ಈ ಹೊಸ ನೆಲೆಯಿಂದ ನಾವು ಪಡೆದದ್ದೆಷ್ಟು, ನಮ್ಮ ಹೊಸ ಬೇರೂರಲು ಬೆಲೆ ತೆತ್ತದ್ದೆಷ್ಟು! ಎಲ್ಲವನ್ನೂ ಪ್ರಾಮಾಣಿಕವಾಗಿಯೂ ರಸವತ್ತಾಗಿಯೂ ತೆರೆದಿಡೋಣ. ಇದಂತೂ ನಮ್ಮದೇ ಚಾವಡಿ. ಇಲ್ಲಿ ನಮ್ಮದೇ ಕಲರವ. ಹರಟೆ, ಪ್ರಬಂಧ, ಕಥೆ, ಕವನ- ಯಾವ ಪ್ರಕಾರವಾದರೂ ಸರಿಯೇ, ಬರವಣಿಗೆ ಹರಿದು ಬರಲಿ. ಬನ್ನಿ, ಮನದ ಪಟಲ ತೆರೆದು, ನೆನಪ ಖಜಾನೆ ಕೆದಕಿ, ಸುರುಳಿ ಬಿಡಿಸಿ ನಿನ್ನೆಯನ್ನು ಇಂದಿನ ಅಕ್ಷರವಾಗಿಸೋಣ.
ನಿಮ್ಮ ಈ ಜೀವನಚಿತ್ರಗಳ ಕಡತ ಸಂಪಾದಕರ ಕೈಸೇರಲು ಇದೇ ವರ್ಷ- 2012- ನವೆಂಬರ್ 30ನೇ ತಾರೀಕು ಕೊನೆಯ ದಿನಾಂಕ; ಸಾಕಷ್ಟು ಸಮಯವನ್ನೇ ನೀಡುತ್ತಿದ್ದೇವೆ. ಅದಕ್ಕೂ ಮುಂಚಿತವಾಗಿ ಕಳುಹಿಸಿದರೆ ವಿವರಣೆ-ವಿಶ್ಲೇಷಣೆಗಳು ಬೇಕಾದಲ್ಲಿ ಅವಕಾಶವಿರುತ್ತದೆ. ಹಾಗೇ, ಅದರೊಂದಿಗೇ ನಿಮ್ಮ ಪುಟ್ಟ ಪರಿಚಯ ಪತ್ರವನ್ನೂ, ಭಾವಚಿತ್ರವನ್ನೂ ಕಳುಹಿಸಿಕೊಡಿ.
ಮತ್ತೆ ಮತ್ತೆ ಹೇಳಿಸಿಕೊಳ್ಳದೇ ಕೀಲಿಮಣೆಯಲ್ಲಿ ಬೆರಳತುದಿಯಾಡಿಸಿ; ಕಡತ ನಮಗೆ ಕಳಿಸಿ.
* ವಿಷಯ : ಅಮೆರಿಕದ ನೆಲದಲ್ಲಿ ವಲಸಿಗರಾಗಿ ನಮ್ಮ ಬದುಕು
* ಅಕ್ಷರದ ಗಾತ್ರ 14ರಲ್ಲಿ ಸುಮಾರು ಎಂಟು ಹತ್ತು ಪುಟಗಳ ಬರಹ ಅಥವಾ ಎಮ್.ಎಸ್.ವರ್ಡ್ ಕಡತ.
* ನವೆಂಬರ್ 30, 2012 - ಕೊನೆಯ ದಿನಾಂಕ.
* ಸಂಪಾದಕರ ಆಯ್ಕೆಯೇ ಅಂತಿಮ.
* ಕಡತಗಳನ್ನು ಕಳುಹಿಸಬೇಕಾಗಿರುವ ವಿಳಾಸ: [email protected]
* ಹೆಚ್ಚಿನ ಮಾಹಿತಿಗಾಗಿ ಸಂಪರ್ಕ : ಗುರು ಕಾಗಿನೆಲೆ ([email protected]), ತ್ರಿವೇಣಿ ಶ್ರೀನಿವಾಸ ರಾವ್ ([email protected]), ಜ್ಯೋತಿ ಮಹಾದೇವ್ ([email protected])
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications