ಡಾ.ಪಂಡಿತಾರಾಧ್ಯ ಸ್ವಾಮಿಗೆ 'ಧ್ವನಿ ಶ್ರೀರಂಗ' ಪ್ರಶಸ್ತಿ

ಖ್ಯಾತ ಕನ್ನಡ ನಾಟಕಗಾರ ಶ್ರೀರಂಗ(ಆದ್ಯ ರಂಗಾಚಾರ್ಯ)ರ ನೆನಪಿನಲ್ಲಿ ರಂಗಕರ್ಮಿಗಳಿಗೆ 'ಧ್ವನಿ ಶ್ರೀರಂಗ' ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ರೂ. 25,000/- ನಗದು, ಸ್ಮರಣಿಕೆ ಹಾಗೂ ದುಬೈಯ ಪ್ರಯಾಣ ಹಾಗೂ ವಸತಿಯ ವೆಚ್ಚವನ್ನು ಒಳಗೊಂಡಿರುವುದು.
ಸಾಣೇಹಳ್ಳಿಯಂಥ ಕುಗ್ರಾಮ ನಾಡಿನ ಎಲ್ಲ ಬುದ್ಧಿವಂತರ ಗಮನ ಸೆಳೆಯಲು ಶ್ರೀಗಳ ರಂಗ ಚಟುವಟಿಕೆಗಳೇ ಕಾರಣ. ಸಾಣೇಹಳ್ಳಿಯಲ್ಲಿ "ಶ್ರೀ ಶಿವಕುಮಾರ ಕಲಾ ಸಂಘ", "ಶಿವ ಸಂಚಾರ" ರಂಗತಿರುಗಾಟದ ತಂಡವನ್ನು ಕಟ್ಟಿ ತಮ್ಮನ್ನು ರಂಗ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಪಂಡಿತಾರಾಧ್ಯ ಅವರು. ಸಾಣೇಹಳ್ಳಿಯಲ್ಲಿ ಇರುವ ಗ್ರೀಕ್ ಮಾದರಿಯ ಸುಮಾರು ನಾಲ್ಕು ಸಾವಿರ ಜನರು ಕೂರುವ ರಂಗಮಂದಿರ ಇವರ ಕನಸಿನ ಕೂಸು.
ಮಾರ್ಚ್ 22 ಶುಕ್ರವಾರ ಸಂಜೆ 5.30ಕ್ಕೆ ಎಮಿರೇಟ್ಸ್ ಥಿಯೇಟರ್ , ದುಬೈಯಲ್ಲಿ ಧ್ವನಿ ಪ್ರತಿಷ್ಠಾನದ 28ನೇ ವಾರ್ಷಿಕೋತ್ಸವ 'ಧ್ವನಿ ರಂಗ ಸಿರಿ-2013'ರಲ್ಲಿ ಪ್ರಶಸ್ತಿ ಪ್ರದಾನ ನೆರವೇರಿಸಲಾಗುವುದು. ಸಮಾರಂಭದ ಅಂಗವಾಗಿ ಧ್ವನಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರ ನಿರ್ದೇಶನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡರ ಅಂತಾರಾಷ್ಟ್ರೀಯ ಖ್ಯಾತಿಯ 'ಬಲಿ' ಕನ್ನಡ ನಾಟಕವನ್ನು ಪ್ರದರ್ಶಿಸಲಾಗುವುದು. ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು ಸಮಸ್ತ ಕನ್ನಡಿಗರಿಗೆ ಆಡಳಿತ ಮಂಡಳಿಯಿಂದ ಸ್ವಾಗತ ಕೋರಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications