ಅಮೆರಿಕಾದಲ್ಲಿ ಕನ್ನಡ ನಾಟಕ 'ಸಂಸಾರದಲ್ಲಿ ಸನಿದಪ'

ಈ ನಾಟಕವನ್ನು ಕನ್ನಡ ಕೂಟ ಉತ್ತರ ಕ್ಯಾಲಿಫೋರ್ನಿಯಾ(ಕೆಕೆಎನ್ಸಿ)ಯ ಮಾಜಿ ಅಧ್ಯಕ್ಷೆ ಪದ್ಮಾ ರಾವ್ ಅವರು ನಿರ್ದೇಶಿಸಿದ್ದಾರೆ. ಈ ಪ್ರಸಿದ್ಧ ಇಟಾಲಿಯನ್ ನಾಟಕವನ್ನು ಕನ್ನಡದ ರಂಗಕರ್ಮಿ ಕೆ.ವಿ. ಅಕ್ಷರ ಅವರು ರೂಪಾಂತರಿಸಿದ್ದಾರೆ. ಆ.24ರ ಸಂಜೆ 5.30ಕ್ಕೆ ಈ ನಾಟಕವನ್ನು ಪ್ರದರ್ಶಿಸಲಾಗುತ್ತಿದೆ.
ನಾಟಕದ ತಿರುಳು : ಈ ನಾಟಕವು ಮೇಲ್ನೋಟಕ್ಕೆ ಒಂದು ಸರಳ ಸಾಂಸಾರಿಕ ಹಾಸ್ಯ ನಾಟಕದಂತೆ, ಗುರುತುಗಳು ಬದಲಾದ ಗಡಿಬಿಡಿಯಿಂದ ಉದ್ಭವಿಸುವ ಒಂದು ಸಿದ್ಧ ಪ್ರಹಸನವೆಂಬಂತೆ ಕಾಣುತ್ತದೆ. ಆದರೆ, ತುಸು ಪರಿಶೀಲಿಸಿ ನೋಡಿದರೆ, ಇದು ಮೇಲ್ನೋಟಕ್ಕೆ ಕಾಣುವಂತೆ, ಕೇವಲ ನಗಿಸುವುದನ್ನೇ ಮೂಲಬಂಡವಾಳ ಮಾಡಿಕೊಂಡು 'ಅ-ರಾಜಕೀಯ' ಕೃತಿಯೂ ಅಲ್ಲವೆಂಬುದನ್ನು ನಮ್ಮ ಗಮನಕ್ಕೆ ಬರುತ್ತದೆ.
ನಿಜವಾಗಿ ಈ ನಾಟಕವು, ಸಾದಾ ರಾಜಕೀಯ ನಾಟಕಗಳಿಹಿಂತ ಭಿನ್ನವಾದ ಇನ್ನೊಂದು ರೀತಿಯ ರಾಜಕಾರಣವನ್ನು ಕೇಂದ್ರೀಕರಿಸಿಕೊಂಡಿದೆ- ಅದು ಸಾಮಾಜಿಕ ವ್ಯಾಪ್ತಿಯ ವಿಶಾಲ ರಾಜಕಾರಣವಲ್ಲ; ಕೌಟುಂಬಿಕ ವ್ಯಾಪ್ತಿಯ ವೈಯಕ್ತಿಕ ರಾಜಕಾರಣ. ಈ ರಾಜಕಾರಣವು ಸಮಾಜ, ದೇಶ, ಅಧಿಕಾರ ಮೊದಲಾದ ವಿಷಯಗಳ ಬಗ್ಗೆ ಸೂಕ್ಷ್ಮದರ್ಶಕದಲ್ಲಿಟ್ಟುಕೊಂಡು ಆ ಮೂಲಕವೇ ವಿಶಾಲವಾದ ಎಲ್ಲ ಸಂಗತಿಗಳ ಪ್ರತಿಫಲವನ್ನು ಗ್ರಹಿಸಲು ಹೊರಡುತ್ತದೆ.
ನಾಟಕ : ಸಂಸಾರದಲ್ಲಿ ಸನಿದಪ
ಕರ್ತೃ : ದಾರಿಯೊ ಫೋ (ಇಟಲಿ), ಕನ್ನಡಕ್ಕೆ ಕೆ.ವಿ. ಅಕ್ಷರ
ಸ್ಥಳ : ಸನ್ನಿವೇಲ್, ಕ್ಯಾಲಿಫೋರ್ನಿಯಾ
ನಿರ್ದೇಶನ : ಪದ್ಮಾ ರಾವ್
ದಿನಾಂಕ : ಆಗಸ್ಟ್ 24, ಶನಿವಾರ
ಸಮಯ : ಸಂಜೆ 5.30ಕ್ಕೆ
ಪದ್ಮಾ ರಾವ್ ಬಗ್ಗೆ : ಉತ್ತರ ಕ್ಯಾಲಿಫೋರ್ನಿಯ ಕನ್ನಡ ಕೂಟದ 2011-12 ವರ್ಷದ ಅಧ್ಯಕ್ಷೆ ಪದ್ಮಾ ರಾವ್ ಅವರು 1999ರಿಂದ ಕೂಟದ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಸಂಗೀತ-ನೃತ್ಯ-ನಾಟಕಗಳ ನಿರ್ದೇಶನ ಮತ್ತು ಮುಖ್ಯ ಪಾತ್ರಗಳನ್ನು ಮಾಡಿದ್ದೇ ಅಲ್ಲದೆ ಮೆರವಣಿಗೆ, ಸೃಷ್ಟಿ ಶೀಲ, ಮನೋರಂಜನ ಸಮಿತಿಗಳ ನೇತೃತ್ವ ವಹಿಸಿದ್ದಾರೆ. ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಅವರು ನಿರ್ದೇಶಿಸಿದ "ಚೈತ್ರದ ಚಿಗುರು" ಸಭಿಕರ ಅಪಾರ ಮೆಚ್ಚುಗೆಯನ್ನು ಗಳಿಸಿತ್ತು.
ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಅಲ್ಲದೆ ಅವರು "ಮೈಸೂರು ಮಲ್ಲಿಗೆ" ಸಂಗೀತ-ನೃತ್ಯ-ನಾಟಕವನ್ನು ಸೆಕ್ರಮೆಂಟೋ ಕನ್ನಡ ಕೂಟದಲ್ಲಿಯೂ ಮತ್ತು ದಕ್ಷಿಣ ಕ್ಯಾಲಿಫೋರ್ನಿಯದಲ್ಲಿ 2010ರಲ್ಲಿ ನಡೆದ ನಾವಿಕ ಸಮ್ಮೇಳನಗಳಲ್ಲಿ ಕೂಡ ನಿರ್ದೇಶಿಸಿ, ಮುಖ್ಯ ಪಾತ್ರವೊಂದನ್ನು ಕೂಡ ಅಭಿನಯಿಸಿ ರಸಿಕರ ಮೆಚ್ಚುಕೆಗೆ ಪಾತ್ರರಾದವರು. ಅಮೆರಿಕದಲ್ಲೇ ಮೊದಲನೇ ಬಾರಿಗೆ ಕನ್ನಡದಲ್ಲಿ ಬೀದಿ ನಾಟಕವನ್ನು ನಿರ್ದೇಶಿಸಿ, ನಟಿಸಿದ ಹೆಮ್ಮೆ ಕೂಡಾ ಪದ್ಮಾ ಅವರದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications