'ನಮ್ಮ ಹೆಮ್ಮೆಯ ಬರಹಗಾರರು' ಕಾರ್ಯಕ್ರಮಕ್ಕೆ ಆಹ್ವಾನ

ಅಮೆರಿಕದ ಏಕೈಕ ರಾಷ್ಟ್ರೀಯ ಕನ್ನಡ ಸಾಹಿತ್ಯ ಸ೦ಸ್ಥೆ ಕನ್ನಡ ಸಾಹಿತ್ಯ ರ೦ಗ' (ಕಸಾರಂ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ 'ವಸಂತ ಸಾಹಿತ್ಯೋತ್ಸವ' ಅಮೆರಿಕದಲ್ಲಿ ನಡೆಯುವ ಅಪೂರ್ವ ಕನ್ನಡ ಸಾಹಿತ್ಯ ಸಮ್ಮೇಳನವಾಗಿದೆ. ಕಸಾರ೦ ನಡೆಸುವ ವಸ೦ತ ಸಾಹಿತ್ಯೋತ್ಸವಗಳು ತಮ್ಮ ವೈಶಿಷ್ಟ್ಯಪೂರ್ಣ ಸಾಹಿತ್ಯ ಕಾರ್ಯಕ್ರಮಗಳಿಗೆ, ಗ೦ಭೀರ ಸಾಹಿತ್ಯ ಚರ್ಚೆ ಮತ್ತು ಆಸ್ವಾದನೆಗೆ ಹೆಸರಾಗಿವೆ. ಕನ್ನಡ ಸಾಹಿತ್ಯಾಸಕ್ತರಿಗೆ ಈ ಸಮ್ಮೇಳನಗಳು ಒ೦ದು ಮೌಲಿಕವಾದ ವೇದಿಕೆಯನ್ನು ನಿರ್ಮಿಸಿವೆ.
ಕನ್ನಡ ಸಾಹಿತ್ಯ ರಂಗಕ್ಕೆ ಈಗ 10 ವರ್ಷಗಳ ವಿಶೇಷ . 'ಕಸಾರಂ'ನ 6ನೇ ವಸ೦ತ ಸಾಹಿತ್ಯೋತ್ಸವ ಇದೇ ಮೇ 18-19, 2013ರ೦ದು ಹ್ಯೂಸ್ಟನ್ ಕನ್ನಡ ವೃ೦ದದ ಸಹಯೋಗದಲ್ಲಿ ಮತ್ತು ಟೆಕ್ಸಸ್ ಕನ್ನಡಿಗರೆಲ್ಲರ ಆಶ್ರಯದಲ್ಲಿ ಹ್ಯೂಸ್ಟನ್ನಿನಲ್ಲಿ ನಡೆಯುತ್ತಿದೆ. ಕನ್ನಡದ ವಿಶಿಷ್ಟ ಲೇಖಕ, ಭಾಷಾವಿಜ್ಞಾನಿ ಪ್ರೊ. ಕೆ.ವಿ. ತಿರುಮಲೇಶ್ ಅವರು ಈ ಸಮ್ಮೇಳನದ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಹೆಚ್ಚಿನ ವಿವರಗಳಿಗೆ www.kannadasahityaranga.org ಅಥವ KannadaVrinda.org/conference ತಾಣವನ್ನು ನೋಡಿ.
ರೈಸ್ ಯೂನಿವರ್ಸಿಟಿಯ ಹ್ಯಾಮನ್ ಹಾಲ್ ಸಭಾ೦ಗಣದಲ್ಲಿ ಶನಿವಾರ ಬೆಳಿಗ್ಗೆಯಿ೦ದ ಭಾನುವಾರ ಮಧ್ಯಾಹ್ನದವರೆಗೆ ನಡೆಯುವ ಈ ಸಮ್ಮೇಳನದಲ್ಲಿ ಪ್ರತಿಬಾರಿಯಂತೆ ಈ ಸಲವೂ ಅಮೆರಿಕದ ಕನ್ನಡ ಬರಹಗಾರರನ್ನು ಮತ್ತು ಅವರ ಇತ್ತೀಚಿನ ಕೃತಿಗಳನ್ನು 'ನಮ್ಮ ಹೆಮ್ಮೆಯ ಬರಹಗಾರರು' ಕಾರ್ಯಕ್ರಮದಲ್ಲಿ ಸಾಹಿತ್ಯಪ್ರಿಯರಿಗೆ ಪರಿಚಯ ಮಾಡಿಕೊಡಲು ನಾವು ಉತ್ಸುಕರಾಗಿದ್ದೇವೆ. ಲೇಖಕರು ತಮ್ಮ ಹೊಸ ಪುಸ್ತಕಗಳನ್ನು ಇಲ್ಲಿ ಬಿಡುಗಡೆ ಮಾಡುವ ಅವಕಾಶವೂ ಉಂಟು.
ನಿಯಮಗಳು ಹೀಗಿವೆ:
- ಕನ್ನಡದ ಪುಸ್ತಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪುಸ್ತಕವು ಸಾಹಿತ್ಯ, ವಿಜ್ಞಾನ, ಪರಿಸರ, ಆರೋಗ್ಯ, ಅನುವಾದ, ಮಕ್ಕಳ ಸಾಹಿತ್ಯ.. ಹೀಗೆ ಯಾವುದೇ ಪ್ರಕಾರಕ್ಕೂ ಸೇರಿದ್ದಾಗಿರಬಹುದು.
- ಪುಸ್ತಕಗಳು 2011 ಏಪ್ರಿಲ್ ತಿಂಗಳ ನಂತರ ಪ್ರಕಟಗೊಂಡಿರಬೇಕು.
- ಪುಸ್ತಕಗಳ ಬಿಡುಗಡೆ, ವಿಮರ್ಶೆಗಳನ್ನು ಅಪೇಕ್ಷಿಸುವ ಲೇಖಕರು ಸಮ್ಮೇಳನದಲ್ಲಿ ಉಪಸ್ಥಿತರಾಗಿರಬೇಕು.
- ಪುಸ್ತಕ ಬಿಡುಗಡೆ/ವಿಮರ್ಶೆಗಳ ಆಯ್ಕೆಯಲ್ಲಿ ಕಸಾರಂ ತೀರ್ಮಾನ ಅಂತಿಮ.
- ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಲೇಖಕರು ಏಪ್ರಿಲ್ 15ರ ಒಳಗೆ ನಮ್ಮನ್ನು ಸಂಪರ್ಕಿಸಿ, ನಿಮ್ಮ ಕೃತಿಗಳನ್ನು ಕಳಿಸಬೇಕು.
- ನಮ್ಮ ಪುಸ್ತಕ ಮಳಿಗೆಯಲ್ಲಿ ನಿಮ್ಮ ಪುಸ್ತಕಗಳ ಮಾರಾಟ ಮಾಡಬಹುದು.
- ಸಂಪರ್ಕ ವಿಳಾಸ [email protected]
ಕನ್ನಡ ಸಾಹಿತ್ಯಾಸಕ್ತರು ಹೆಚ್ಚಿನ ಸ೦ಖ್ಯೆಯಲ್ಲಿ 'ವಸಂತ ಸಾಹಿತ್ಯೋತ್ಸವ'ದಲ್ಲಿ ಪಾಲ್ಗೊಂಡು ಸಮ್ಮೇಳನದ ಸಂಭ್ರಮ ಹೆಚ್ಚಿಸಬೇಕೆಂದು ಕೋರುತ್ತಿದ್ದೇವೆ. ನಿಮಗೆ ಇನ್ನೇನಾದರೂ ಹೆಚ್ಚಿನ ವಿವರಗಳು ಬೇಕಿದ್ದರೆ ದಯವಿಟ್ಟು ನಮ್ಮನ್ನು ಸ೦ಪರ್ಕಿಸಿ.
ವಿಶ್ವಾಸಪೂರ್ವಕವಾಗಿ,
ಮೀರಾ ಪಿ. ಆರ್.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications