ಎಲ್ಲಾರೂ ಒಟ್ಟಾಗಿ ಸೇರಿ ಕನ್ನಡದ ದೀಪವನ್ನು ಹಚ್ಚೋಣ
ಪ್ರಿಯ ಕನ್ನಡಿಗರೆ,
ನಾವು ಹುಟ್ಟಿ, ಬಾಳಿ ಬೆಳೆದ ಕನ್ನಡದ ನಾಡು ನುಡಿಯನ್ನು ಪ್ರೀತಿಸಲು, ಕನ್ನಡದ ಸೇವೆ ಮಾಡಲು, ಕನ್ನಡನಾಡಿನಲ್ಲೇ ವಾಸವಾಗಿರಬೇಕೆಂದಿಲ್ಲ. ಅಪ್ಪಟ ಹೊರನಾಡು ಕನ್ನಡಿಗರಿಂದಲೂ ಇದು ಸಾಧ್ಯವೆಂಬುದನ್ನು ತೋರಿಸಿಕೊಡುತ್ತಿರುವವರು, ವಿಶ್ವದ ನಾನಾಕಡೆ, ಕನ್ನಡ ಸಂಘಗಳನ್ನು ಸ್ಥಾಪಿಸಿ, ಆಗಾಗ ಕನ್ನಡ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸುತ್ತಿರುವ ಅನಿವಾಸಿ ಕನ್ನಡಿಗರು.
ಇಂತಹ ಕನ್ನಡ ಸಂಘಗಳಲ್ಲಿ ಒಂದಾದ "ನಾವಿಕ" ಕನ್ನಡ ಸಂಸ್ಥೆ, ಈ ಬಾರಿ ತನ್ನ 3ನೇ ವಿಶ್ವ ಕನ್ನಡ ಸಮಾವೇಶವನ್ನು, ಅಮೆರಿಕಾದ ಉತ್ತರ ಕೆರೊಲಿನ ರಾಜ್ಯದ ರಾಜಧಾನಿಯಾದ ರಾಲೆ ನಗರದಲ್ಲಿ ಸೆಪ್ಟೆಂಬರ್ 4ರಿಂದ 6ರವರೆಗೆ ನಡೆಸುತ್ತಿರುವ ವಿಚಾರ ತಮಗೆಲ್ಲ ತಿಳಿದೇ ಇದೆ.
ಅಮೆರಿಕಾದ ಕನ್ನಡಿಗರಿಂದ, ಕನ್ನಡಿಗರಿಗಾಗಿಯೇ, ಕನ್ನಡಿಗರೇ ಆಯೋಜಿಸಿರುವ ಈ ಬೃಹತ್ ಕನ್ನಡ ಸಮಾವೇಶದ ಸಂಚಾಲಕತ್ವವನ್ನು ಈ ಬಾರಿ ನನಗೆ ವಹಿಸಲಾಗಿದೆ. ಇದು ಅಷ್ಟೊಂದು ಸುಲಭದ ಕೆಲಸವಲ್ಲವೆಂಬುದು ನನಗೆ ಗೊತ್ತು. ಸಹಜ ಸ್ವಾಭಾವಿಕವಾಗಿ ಇದು ಒಂದು ಸವಾಲೇ ಆಗಿದ್ದರೂ, ಕನ್ನಡದ ಸೇವೆ ಮಾಡಲು ನನ್ನ ಪಾಲಿಗೆ ಬಂದಿರುವ ಒಂದು ಸುಯೋಗ, ಸದಾವಕಾಶವೆಂದು ತಿಳಿದು, ಈ ಜವಾಬ್ದಾರಿಯನ್ನು ಅತ್ಯಂತ ವಿನಮ್ರತೆಯಿಂದ ವಹಿಸಿಕೊಂಡಿದ್ದೇನೆ.

ನಿಮ್ಮೆಲ್ಲರ ಸಹನೆ, ಸಹಕಾರ, ಸಹಯೋಗಗಳಿವೆ ಎಂಬ ಆತ್ಮವಿಶ್ವಾಸವೇ ಈ ನನ್ನ ಮೊಂಡು ಧೈರ್ಯಕ್ಕೆ ಕಾರಣ. ಸಮಾವೇಶ ಯಶಸ್ವಿಯಾದರೆ, ಆ ಸಂತಸದಲ್ಲಿ ನಿಮಗೆಲ್ಲರಿಗೂ ಪಾಲು ಇದೆ. ತಪ್ಪುಗಳಾದಲ್ಲಿ, ಅವೆಲ್ಲವೂ ನನ್ನ ತಲೆಯ ಮೇಲಿರಲಿ. ಹಂಸಕ್ಷೀರ ನ್ಯಾಯದಂತೆ, ಹಾಲನ್ನು ಮಾತ್ರ ಸ್ವೀಕರಿಸಿ, ನೀರನ್ನು ನನ್ನ ಪಾಲಿಗೆ ಬಿಟ್ಟು ಬಿಡಬೇಕಾಗಿ ನನ್ನ ಕೋರಿಕೆ. [ಕೆರೊಲಿನ ನಾವಿಕ ಕನ್ನಡ ಸಮ್ಮೇಳನಕ್ಕೆ ದಾರಿ ಯಾವುದಯ್ಯ?]
ಈ ಸಮಾವೇಶದಲ್ಲಿ, ನಮ್ಮ ಕನ್ನಡ ಭಾಷೆ, ಕನ್ನಡದ ಸಂಸ್ಕೃತಿ, ಕನ್ನಡದ ಸೊಬಗು-ಸೊಗಡು, ಬೆಡಗು-ಬೆರಗು, ಹಿರಿಮೆ-ಗರಿಮೆಗಳನ್ನು ಬಿಂಬಿಸುವ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯಾವುದೇ ಒಂದು ಸಮಾವೇಶ ಯಶಸ್ವಿಯಾಬೇಕಾದರೆ ಅದು ಒಂದು ಮೃಷ್ಟಾನ್ನ ಭೋಜನದಂತಿರಬೇಕು. ಈ ಕಾರಣದಿಂದಲೇ, ಸಮಾವೇಶದಲ್ಲಿ ಮೆರವಣಿಗೆ, ಚಿಂತನೆ, ಚರ್ಚೆ, ಅಧ್ಯಾತ್ಮ, ಸಾಹಿತ್ಯ, ಸ್ಪರ್ಧೆ, ಕ್ರೀಡೆ, ನೃತ್ಯ, ನಾಟಕ, ಗಾಯನ ಎಲ್ಲವೂ ಇದೆ.
ಇಷ್ಟು ಮಾತ್ರವೇ ಅಲ್ಲ, ವೈದ್ಯಕೀಯ ವಿಷಯ, ಉದ್ಯೋಗಾವಕಾಶ, ಬಂಡವಾಳ ಹೂಡಿಕೆ ಮುಂತಾದ ವಿಚಾರ ಸಂಕಿರಣಗಳಿಗೂ, ಮನ ಮಂತನಗಳಿಗೂ ಈ ವೇದಿಕೆ ಸಾಕ್ಷಿಯಾಗಲಿದೆ. ಇವೆಲ್ಲವನ್ನು ನಡೆಸಿಕೊಡುವವರು ಅಮೆರಿಕಾದಲ್ಲಿರುವ ಅನಿವಾಸಿ ಕನ್ನಡಿಗರು ಮಾತ್ರವಲ್ಲದೆ, ಕರ್ನಾಟಕದಿಂದ ಹಾಗೂ ದೇಶ ವಿದೇಶಗಳಿಂದ ಆಗಮಿಸಲಿರುವ ಖ್ಯಾತ ಸಾಹಿತಿಗಳು, ಕಲಾವಿದರು, ವಿದ್ವಾಂಸರು, ಚಿಂತಕರು ಮತ್ತು ಗೌರವಾನ್ವಿತ ಗಣ್ಯರು. ಇವರೆಲ್ಲರಿಗೂ ಆದರಣೀಯ ಸ್ವಾಗತವನ್ನು ಕೋರುತ್ತಿದ್ದೇನೆ.
ಸಮ್ಮೇಳನಕ್ಕೆ ಯಶಸ್ಸು ಹಾರೈಸಿ ಮುಖ್ಯಮಂತ್ರಿ ಚಂದ್ರು ಆಡಿರುವ ನಾಲ್ಕು ಮಾತುಗಳು
ನಾವೆಲ್ಲರೂ ಸೇರಿ ಕನ್ನಡದ ತೇರನ್ನು ಮುಂದಕ್ಕೆ ಎಳೆಯೋಣ. ಎಲ್ಲ ಕನ್ನಡಿಗರ ಅಭಿಮಾನದ ಹನಿಗಳು ಕೂಡಿ ಹಳ್ಳವಾಗಲಿ, ಈ ಹಳ್ಳಗಳು ಸೇರಿ ಹೊಳೆಯಾಗಲಿ, ಹೊಳೆ ಹರಿದು ಕನ್ನಡವೆಂಬ ಸುಂದರ ಸಾಗರವನ್ನು ಸೇರಲಿ. ಎಲ್ಲ ಭಾಷೆಗಳನ್ನು ಪ್ರೀತಿಸೋಣ, ಆದರೆ ಕನ್ನಡ ಭಾಷೆಯನ್ನು ಆರಾಧಿಸೋಣ. ಎಲ್ಲೇ ಇದ್ದರೂ, ಒಳ್ಳೆಯ ಕನ್ನಡಿಗರಾಗಿ ಬದುಕೋಣ; ಕನ್ನಡದ ಕಂಪನ್ನು ಹರಡೋಣ. ಆ ಕಂಪಲ್ಲಿ ಆ ಇಂಪಲ್ಲಿ ಕನ್ನಡತನವನ್ನು ಮೆರೆಯೋಣ. ಆದುದರಿಂದ ಬನ್ನಿ, ಒಟ್ಟಾಗಿ ಸೇರಿ ಕನ್ನಡದ ದೀಪವನ್ನು ಹಚ್ಚೋಣ, ಕನ್ನಡದ ಕೀರ್ತಿಯನ್ನು ಹೆಚ್ಚಿಸೋಣ, ಕನ್ನಡಾಂಬೆಯನ್ನು ಮೆರೆಸೋಣ.
ಕನ್ನಡವೇ ಸತ್ಯ - ಕನ್ನಡವೇ ನಿತ್ಯ, ಉಳಿದುದೆಲ್ಲವೂ ನಮಗೆ ಮಿಥ್ಯ. ಜೈ ಭಾರತ್, ಜೈ ಕರ್ನಾಟಕ!
ಹರ್ಷ ಗೋಪಾಲ್
ಸಂಚಾಲಕರು
ನಾವಿಕ ಕೆರೊಲಿನ 2015
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications