7ನೇ ವಸಂತ ಸಾಹಿತ್ಯೋತ್ಸವ : ಕಾರ್ಯಕ್ರಮಗಳ ಪಕ್ಷಿನೋಟ
'ಅನುವಾದ ಸಾಹಿತ್ಯ'ವನ್ನು ಮುಖ್ಯ ವಿಷಯವನ್ನಾಗಿಸಿಕೊಂಡು ಅಮೆರಿಕದ ಸೇಂಟ್ ಲೂಯಿಸ್ಸಿನ ಸಂಗಮ ಆಶ್ರಯದಲ್ಲಿ ಮೇ 30 ಮತ್ತು 31ರಂದು ನಡೆಯಲಿರುವ 7ನೇ ವಸಂತ ಸಾಹಿತ್ಯೋತ್ಸವಕ್ಕೆ ಅಂತಿಮ ಹಂತದ ತಯಾರಿಗಳು ನಡೆಯುತ್ತಿವೆ. ಕನ್ನಡ ಸಾಹಿತ್ಯ ರಂಗದ ಈ ಸಾಹಿತ್ಯ ಹಬ್ಬದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಎರಡು ದಿನಗಳ ಕಾಲ ಸಾಹಿತ್ಯ ಗೋಷ್ಠಿ, ಪುಸ್ತಕ ಬಿಡುಗಡೆ, ಅನುವಾದಿತ ಕೃತಿಗಳ ಪ್ರಸ್ತುತಿ, ಕವಿ ನಮನ, ಹಾಡು, ನೃತ್ಯ ಕಾರ್ಯಕ್ರಮ, ನಾಟಕ ಪ್ರದರ್ಶನ, ಅನುವಾದ ಕಮ್ಮಟ, ಪುಸ್ತಕದಂಗಡಿಗೆ ಭೇಟಿ ಮುಂತಾದ ಕಾರ್ಯಕ್ರಮಗಳು ಮಕ್ಕಳಿಂದ ಹಿರಿಯ ಸಾಹಿತ್ಯ ಪ್ರೇಮಿಗಳಿಗೆ ಹಬ್ಬದೂಟವನ್ನು ಬಡಿಸಲಿವೆ. [ಕಸಾರಂದ 7ನೇ ವಸಂತ ಸಾಹಿತ್ಯೋತ್ಸವಕ್ಕೆ ಕ್ಷಣಗಣನೆ]

ಕಾರ್ಯಕ್ರಮಗಳ ವಿವರಗಳು ಹೀಗಿವೆ.
ಶನಿವಾರ
(1) ಮಧ್ಯಾಹ್ನ 12:00-1:00 - ಆಗಮನ ಮತ್ತು ನೋಂದಣಿ
(2) 1:00-2:00 - ಸ್ವಾಗತ ಗೀತೆ, ಉದ್ಘಾಟನೆ, ಅತಿಥಿಗಳ ಸ್ವಾಗತ ಮತ್ತು ಪರಿಚಯ, ಪುಸ್ತಕಗಳ ಲೋಕಾರ್ಪಣೆ ಮತ್ತು ಬರಹಗಾರರಿಗೆ ವಿತರಣೆ
(3) 2:00-3:00 - ಪ್ರಾಸ್ತಾವಿಕ ಭಾಷಣ, "ಅನುವಾದದ ಆಗುಹೋಗುಗಳು" ಮುಖ್ಯ ಅತಿಥಿ ಪ್ರಧಾನ ಗುರುದತ್ತರಿಂದ
(4) 3:00-3:30 - ಚಹಾ ವಿರಾಮ
(5) 3:30-5:00 - ಸಾಹಿತ್ಯ ಗೋಷ್ಠಿ, ಸ್ವಂತ ಹಾಗು ಅನುವಾದಿತ ಕೃತಿಗಳ ಪ್ರಸ್ತುತಿ (ನಡೆಸಿಕೊಡುವವರು: ನಳಿನಿ ಮೈಯ ಮತ್ತು ವೈಶಾಲಿ ಹೆಗ್ಡೆ)
(6) 5:05-5:15 - ಕವಿ ನಮನ (ಸಂಗಮ ಕಲಾವಿದರಿಂದ)
(7) 5:15-5:30 - ಶ್ರದ್ಧಾಂಜಲಿ (ಅಗಲಿದ ಹಿರಿಯರ ಸ್ಮರಣೆ; ನಡೆಸಿಕೊಡುವವರು: ಎಚ್.ಕೆ. ಚಂದ್ರಶೇಖರ್ ಮತ್ತು ನಳಿನಿ ಕುಕ್ಕೆ)
(8) 5:30-6:00 - ಪುಸ್ತಕದಂಗಡಿಗೆ ಭೇಟಿ (ಮಂಜುನಾಥ್ ಮತ್ತು ಶಂಕರ ಹೆಗ್ಡೆ)
(9) 6:00-8:30 - ಸಾಂಸ್ಕೃತಿಕ ಕಾರ್ಯಕ್ರಮ (ಪ್ರಸನ್ನ ಕಸ್ತೂರಿ ಅವರ ನಿರ್ದೇಶನದಲ್ಲಿ ಸಂಗಮ ಹಾಗು ಇತರ ಮಧ್ಯವಲಯದ ಕನ್ನಡ ಕೂಟಗಳಿಂದ ನೃತ್ಯ ಮತ್ತು ನಾಟಕ ಪ್ರದರ್ಶನ)
(10) 8:00-10:00 - ಭೋಜನ
ಭಾನುವಾರ
(1) 8:00-9:00 - ಬೆಳಗಿನ ಉಪಾಹಾರ
(2) 9:00-9:10 - ಪ್ರಾರ್ಥನೆ ಮತ್ತು ವಾದ್ಯಗೋಷ್ಠಿ (ಸಂಗಮ ಮಕ್ಕಳಿಂದ)
(3) 9:10-10:40 - ಅನುವಾದ ಕಮ್ಮಟ (ಅನುವಾದಕ್ರಿಯೆಯ ಒಂದು ಮಿಂಚುನೋಟ; ನಡೆಸಿಕೊಡುವವರು: ಗುರುಪ್ರಸಾದ್ ಕಾಗಿನೆಲೆ)
(4) 10:40-10:55 - ವಿವಿಧ ವಿಶೇಷಗಳು (ನಡೆಸಿಕೊಡುವವರು ಮೈ.ಶ್ರೀ. ನಟರಾಜ)
(5) 11:00-12:00 - ನಮ್ಮ ಬರಹಗಾರರು (ಇತ್ತೀಚೆಗೆ ಪ್ರಕಟವಾದ ಪುಸ್ತಕಗಳ ಮತ್ತು ಬರಹಗಾರರ ಪರಿಚಯ; ನಡೆಸಿಕೊಡುವವರು: ತ್ರಿವೇಣಿ ಶ್ರೀನಿವಾಸ ರಾವ್ ಮತ್ತು ಮೀರಾ ರಾಜಗೋಪಾಲ್)
(6) 12:00-1:00 - ಮಧ್ಯಾಹ್ನದ ಭೋಜನ
(7) 1:00-1:30 - ಪುಸ್ತಕದಂಗಡಿಗೆ ಭೇಟಿ
(8) 1:30-2:30 - ಅತಿಥಿಗಳೊಂದಿಗೆ ಸಂವಾದ (ಪ್ರಧಾನ ಗುರುದತ್ತ, ಎಸ್.ಎನ್. ಶ್ರೀಧರ್ ಮತ್ತು ನಾರಾಯಣ ಹೆಗ್ಡೆ ಅವರೊಂದಿಗೆ ಪ್ರಶ್ನೋತ್ತರಗಳು; ನಡೆಸಿಕೊಡುವವರು: ಗುರುಪ್ರಸಾದ್ ಕಾಗಿನೆಲೆ ಮತ್ತಿತರರು)
(9) 2:30-2:45 - ಚಹಾ ವಿರಾಮ
(10) 2:45-3:45 - ಮಧ್ಯವಲಯದ ವಿವಿಧ ಕನ್ನಡ ಕೂಟಗಳ ಮಕ್ಕಳಿಂದ ಮನರಂಜನೆ ಮತ್ತು ಸವಿತಾ ರವಿಶಂಕರ್ ಅವರ "ಚಿಲಿಪಿಲಿ ಕನ್ನಡ ಕಲಿ" ಧ್ವನಿ ಸಂಪುಟ ಬಿಡುಗಡೆ
(11) 3:45-4:30 - ಸ್ವಯಂಸೇವಕರ ಪರಿಚಯ, ವಂದನಾರ್ಪಣೆ ಮತ್ತು ಸಮಾರೋಪ
(12) 4:30ಕ್ಕೆ ವಿದಾಯ!
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications