7ನೇ ವಸಂತ ಸಾಹಿತ್ಯೋತ್ಸವ : ಕಾರ್ಯಕ್ರಮಗಳ ಪಕ್ಷಿನೋಟ
'ಅನುವಾದ ಸಾಹಿತ್ಯ'ವನ್ನು ಮುಖ್ಯ ವಿಷಯವನ್ನಾಗಿಸಿಕೊಂಡು ಅಮೆರಿಕದ ಸೇಂಟ್ ಲೂಯಿಸ್ಸಿನ ಸಂಗಮ ಆಶ್ರಯದಲ್ಲಿ ಮೇ 30 ಮತ್ತು 31ರಂದು ನಡೆಯಲಿರುವ 7ನೇ ವಸಂತ ಸಾಹಿತ್ಯೋತ್ಸವಕ್ಕೆ ಅಂತಿಮ ಹಂತದ ತಯಾರಿಗಳು ನಡೆಯುತ್ತಿವೆ. ಕನ್ನಡ ಸಾಹಿತ್ಯ ರಂಗದ ಈ ಸಾಹಿತ್ಯ ಹಬ್ಬದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಎರಡು ದಿನಗಳ ಕಾಲ ಸಾಹಿತ್ಯ ಗೋಷ್ಠಿ, ಪುಸ್ತಕ ಬಿಡುಗಡೆ, ಅನುವಾದಿತ ಕೃತಿಗಳ ಪ್ರಸ್ತುತಿ, ಕವಿ ನಮನ, ಹಾಡು, ನೃತ್ಯ ಕಾರ್ಯಕ್ರಮ, ನಾಟಕ ಪ್ರದರ್ಶನ, ಅನುವಾದ ಕಮ್ಮಟ, ಪುಸ್ತಕದಂಗಡಿಗೆ ಭೇಟಿ ಮುಂತಾದ ಕಾರ್ಯಕ್ರಮಗಳು ಮಕ್ಕಳಿಂದ ಹಿರಿಯ ಸಾಹಿತ್ಯ ಪ್ರೇಮಿಗಳಿಗೆ ಹಬ್ಬದೂಟವನ್ನು ಬಡಿಸಲಿವೆ. [ಕಸಾರಂದ 7ನೇ ವಸಂತ ಸಾಹಿತ್ಯೋತ್ಸವಕ್ಕೆ ಕ್ಷಣಗಣನೆ]

ಕಾರ್ಯಕ್ರಮಗಳ ವಿವರಗಳು ಹೀಗಿವೆ.
ಶನಿವಾರ
(1) ಮಧ್ಯಾಹ್ನ 12:00-1:00 - ಆಗಮನ ಮತ್ತು ನೋಂದಣಿ
(2) 1:00-2:00 - ಸ್ವಾಗತ ಗೀತೆ, ಉದ್ಘಾಟನೆ, ಅತಿಥಿಗಳ ಸ್ವಾಗತ ಮತ್ತು ಪರಿಚಯ, ಪುಸ್ತಕಗಳ ಲೋಕಾರ್ಪಣೆ ಮತ್ತು ಬರಹಗಾರರಿಗೆ ವಿತರಣೆ
(3) 2:00-3:00 - ಪ್ರಾಸ್ತಾವಿಕ ಭಾಷಣ, "ಅನುವಾದದ ಆಗುಹೋಗುಗಳು" ಮುಖ್ಯ ಅತಿಥಿ ಪ್ರಧಾನ ಗುರುದತ್ತರಿಂದ
(4) 3:00-3:30 - ಚಹಾ ವಿರಾಮ
(5) 3:30-5:00 - ಸಾಹಿತ್ಯ ಗೋಷ್ಠಿ, ಸ್ವಂತ ಹಾಗು ಅನುವಾದಿತ ಕೃತಿಗಳ ಪ್ರಸ್ತುತಿ (ನಡೆಸಿಕೊಡುವವರು: ನಳಿನಿ ಮೈಯ ಮತ್ತು ವೈಶಾಲಿ ಹೆಗ್ಡೆ)
(6) 5:05-5:15 - ಕವಿ ನಮನ (ಸಂಗಮ ಕಲಾವಿದರಿಂದ)
(7) 5:15-5:30 - ಶ್ರದ್ಧಾಂಜಲಿ (ಅಗಲಿದ ಹಿರಿಯರ ಸ್ಮರಣೆ; ನಡೆಸಿಕೊಡುವವರು: ಎಚ್.ಕೆ. ಚಂದ್ರಶೇಖರ್ ಮತ್ತು ನಳಿನಿ ಕುಕ್ಕೆ)
(8) 5:30-6:00 - ಪುಸ್ತಕದಂಗಡಿಗೆ ಭೇಟಿ (ಮಂಜುನಾಥ್ ಮತ್ತು ಶಂಕರ ಹೆಗ್ಡೆ)
(9) 6:00-8:30 - ಸಾಂಸ್ಕೃತಿಕ ಕಾರ್ಯಕ್ರಮ (ಪ್ರಸನ್ನ ಕಸ್ತೂರಿ ಅವರ ನಿರ್ದೇಶನದಲ್ಲಿ ಸಂಗಮ ಹಾಗು ಇತರ ಮಧ್ಯವಲಯದ ಕನ್ನಡ ಕೂಟಗಳಿಂದ ನೃತ್ಯ ಮತ್ತು ನಾಟಕ ಪ್ರದರ್ಶನ)
(10) 8:00-10:00 - ಭೋಜನ
ಭಾನುವಾರ
(1) 8:00-9:00 - ಬೆಳಗಿನ ಉಪಾಹಾರ
(2) 9:00-9:10 - ಪ್ರಾರ್ಥನೆ ಮತ್ತು ವಾದ್ಯಗೋಷ್ಠಿ (ಸಂಗಮ ಮಕ್ಕಳಿಂದ)
(3) 9:10-10:40 - ಅನುವಾದ ಕಮ್ಮಟ (ಅನುವಾದಕ್ರಿಯೆಯ ಒಂದು ಮಿಂಚುನೋಟ; ನಡೆಸಿಕೊಡುವವರು: ಗುರುಪ್ರಸಾದ್ ಕಾಗಿನೆಲೆ)
(4) 10:40-10:55 - ವಿವಿಧ ವಿಶೇಷಗಳು (ನಡೆಸಿಕೊಡುವವರು ಮೈ.ಶ್ರೀ. ನಟರಾಜ)
(5) 11:00-12:00 - ನಮ್ಮ ಬರಹಗಾರರು (ಇತ್ತೀಚೆಗೆ ಪ್ರಕಟವಾದ ಪುಸ್ತಕಗಳ ಮತ್ತು ಬರಹಗಾರರ ಪರಿಚಯ; ನಡೆಸಿಕೊಡುವವರು: ತ್ರಿವೇಣಿ ಶ್ರೀನಿವಾಸ ರಾವ್ ಮತ್ತು ಮೀರಾ ರಾಜಗೋಪಾಲ್)
(6) 12:00-1:00 - ಮಧ್ಯಾಹ್ನದ ಭೋಜನ
(7) 1:00-1:30 - ಪುಸ್ತಕದಂಗಡಿಗೆ ಭೇಟಿ
(8) 1:30-2:30 - ಅತಿಥಿಗಳೊಂದಿಗೆ ಸಂವಾದ (ಪ್ರಧಾನ ಗುರುದತ್ತ, ಎಸ್.ಎನ್. ಶ್ರೀಧರ್ ಮತ್ತು ನಾರಾಯಣ ಹೆಗ್ಡೆ ಅವರೊಂದಿಗೆ ಪ್ರಶ್ನೋತ್ತರಗಳು; ನಡೆಸಿಕೊಡುವವರು: ಗುರುಪ್ರಸಾದ್ ಕಾಗಿನೆಲೆ ಮತ್ತಿತರರು)
(9) 2:30-2:45 - ಚಹಾ ವಿರಾಮ
(10) 2:45-3:45 - ಮಧ್ಯವಲಯದ ವಿವಿಧ ಕನ್ನಡ ಕೂಟಗಳ ಮಕ್ಕಳಿಂದ ಮನರಂಜನೆ ಮತ್ತು ಸವಿತಾ ರವಿಶಂಕರ್ ಅವರ "ಚಿಲಿಪಿಲಿ ಕನ್ನಡ ಕಲಿ" ಧ್ವನಿ ಸಂಪುಟ ಬಿಡುಗಡೆ
(11) 3:45-4:30 - ಸ್ವಯಂಸೇವಕರ ಪರಿಚಯ, ವಂದನಾರ್ಪಣೆ ಮತ್ತು ಸಮಾರೋಪ
(12) 4:30ಕ್ಕೆ ವಿದಾಯ!
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications