ಅರಬರ ಸುಂದರ ಮರುಭೂಮಿಯಲ್ಲಿ ಕನ್ನಡದ ತಂಪಾದ ಗಾಳಿ
ಕನ್ನಡಿಗರು ದುಬೈ ವತಿಯಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು 9ನೇ ನವೆಂಬರ್ 2018ರಂದು ದುಬಾಯಿಯ ಆಲ್ಕೂಝಿನಲ್ಲಿರುವ ಕ್ರೆಡೆನ್ಸ್ ಹೈ ಸ್ಕೂಲ್ ಸಭಾಂಗಣದಲ್ಲಿ ಪ್ರೇಷಿಯಸ್ ಪಾರ್ಟೀಸ್ ಅಂಡ್ ಎಂಟರ್ಟೈನ್ಮೆಂಟ್ ಸಹಯೋಗದೊಂದಿಗೆ ಆಯೋಜಿಸಲಾಗಿದೆ.
ಕನ್ನಡದ ಹೆಸರಾಂತ ಕವಿಗಳು, ಬರಹಗಾರರು, ವಾಗ್ಮಿಗಳು ಹಾಗೂ ಕರ್ನಾಟದ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಅನೇಕ ಗಣ್ಯರು ಈ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಕನ್ನಡಿಗರು ದುಬೈ ನಡೆಸಿಕೊಡುತ್ತಿರುವ ಈ 63ನೇ ಕನ್ನಡ ರಾಜ್ಯೋತ್ಸವ, ಕನ್ನಡಿಗರು ದುಬೈ ಸಂಘದ ಅಧ್ಯಕ್ಷರಾದ ಸದನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಮೇಲೆ ತಿಳಿಸಿದ ದಿನಾಂಕದಂದು ಸಂಜೆ 5:30ಕ್ಕೆ ಪ್ರಾರಂಭವಾಗಲಿದೆ.

ಮುಖ್ಯ ಅತಿಥಿಗಳಾದ 'ತಾಂಬೂಲ ಜ್ಯೋತಿಷಿ' ಎಂದು ಪ್ರಖ್ಯಾತರಾಗಿರುವ ಶ್ರೀ ಶ್ರೀ ರವಿಶಂಕರ ಗುರೂಜಿ ಅವರಿಂದ ದೀಪ ಮೊಳಗಿಸುವ ಶುಭ ಕಾರ್ಯದೊಂದಿಗೆ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ತದನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ರಾಷ್ಟ್ರಗೀತೆ, ಭಾರತೀಯ ರಾಷ್ಟ್ರಗೀತೆ ಹಾಗೆ ಕರ್ನಾಟಕದ ನಾಡಗೀತೆ, ಮುಖ್ಯ ಅತಿಥಿಗಳಿಂದ ಹಿತವಚನ ಹಾಗೂ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರತೀ ವರ್ಷವೂ ಕನ್ನಡಿಗರು ದುಬೈ ಸಂಸ್ಥೆಯು ಕನ್ನಡ ಹಾಗೂ ಕರ್ನಾಟಕದ ಸಾಹಿತ್ಯ ಶಿಕ್ಷಣ, ಕ್ರೀಡೆ, ಕಲೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹನೀಯರನ್ನು ಗುರುತಿಸಿ ಅವರಿಗೆ 'ಕನ್ನಡ ರತ್ನ' ಪ್ರಶಸ್ತಿ ಪ್ರದಾನ ಮಾಡಿ ಗೌರವಿಸುವ ಪರಂಪರೆಯನ್ನು ಪಾಲಿಸಿಕೊಂಡು ಬಂದಿದೆ.
ಈ ಬಾರಿ ಆಳ್ವಾಸ್ ಎಜುಕೇಶನ್ ಸಂಸ್ಥೆಯ ಸ್ಥಾಪಕ ಹಾಗೂ ಚೇರ್ಮನ್ ಡಾ. ಮೋಹನ್ ಆಳ್ವ ಅವರಿಗೆ 'ಕನ್ನಡ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಕಳೆದ ವರ್ಷಗಳಲ್ಲಿ ದ್ವಾರಕೀಶ್, ಪ್ರೊಫೆಸರ್ ಕೆ ಎಸ್ ನಿಸಾರ್ ಅಹಮದ್, ಡಾ. ಶಾಮನೂರು ಶಿವಶಂಕರಪ್ಪ ಮುಂತಾದ ಮಹನೀಯರಿಗೆ 'ಕನ್ನಡ ರತ್ನ' ಪ್ರಶಸ್ತಿ ನೀಡಿ ಗೌರವಿಸಿದ್ದನ್ನು ಇಲ್ಲಿ ನೆನೆಯಬಹುದು.

ಕನ್ನಡ ಚಿತ್ರ ರಂಗದ ಹಿರಿಯ ನಟ, 'ರಸಿಕ' ರವಿಚಂದ್ರನ್ ಅವರಿಗೆ 'ಕನ್ನಡ ಕಲಾ ರತ್ನ' ಗೌರವ ಪ್ರಶಸ್ತಿಯನ್ನು ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕಾಣಿಕೆಯನ್ನು ಗುರುತಿಸಿ ನೀಡಲಿದ್ದೇವೆ. ಚಂದನವನದ ತಾರೆ ಹಾಗೂ ತಮ್ಮ ಅಚ್ಚ ಕನ್ನಡದ ಅಚ್ಚುಕಟ್ಟಾದ ನಿರೂಪಣಾ ಶೈಲಿಗೆ ಹೆಸರುವಾಸಿಯಾಗಿರುವ ಅಪರ್ಣಾ, ತಮ್ಮ ಹಾಸ್ಯ ಕಲೆಯಿಂದ ಮನೆಮಾತಾಗಿರುವ ನಾಗರಾಜ್ ಕೋಟೆ ಅವರು ಈ ಸಮಾರಂಭದಲ್ಲಿ ಭಾಗವಹಿಸುತ್ತಿರುವ ಪ್ರಮುಖರು. ಈ ಸಂದರ್ಭದಲ್ಲಿ ಯುನೈಟೆಡ್ ಅರಬ್ ಎಮಿರೇಟಿನಲ್ಲಿ ನೆಲೆಸಿರುವ ಕನ್ನಡ ಶಾಲಾ ಮಕ್ಕಳು ನೃತ್ಯ ಹಾಗೂ ಸಂಗೀತಗಳಿಂದ ರಂಜಿಸಲಿದ್ದಾರೆ.
ಈ ಬಾರಿಯ ಮತ್ತೊಬ್ಬ ವಿಶೇಷ ಅತಿಥಿಯಾಗಿ 'ಅಕ್ಷರ ಸಂತ' ಎಂಬ ಬಿರುದು ಪಡೆದಿರುವ ಹರೇಕಲ ಹಾಜಬ್ಬನವರು. ಇವರು ಸಮಾಜ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದು ಕಿತ್ತಳೆ ಹಣ್ಣು ಮಾರಾಟ ಮಾಡಿ ಗ್ರಾಮಾಂತರ ವಿದ್ಯಾಭ್ಯಾಸಕ್ಕಾಗಿ ತಾನು ಸಂಪಾದಿಸಿದ ಹಣವನ್ನು ವ್ಯಯ ಮಾಡಿ, ತನ್ನ ಗ್ರಾಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಶಾಲೆಯನ್ನು ಕಟ್ಟಿಸಿದ್ದಾರೆ. ಇವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕನ್ನಡ ಸಂಘಟನೆಗಳಿಗೆ ನೀಡುವ ಪ್ರೋತ್ಸಾಹ ಸಹಾಯಕ್ಕಾಗಿ ದುಬೈಯಲ್ಲಿ ನೆಲೆಸಿರುವ ಪ್ರಖ್ಯಾತ ಉದ್ಯಮಿ ಎಮ್ ಸ್ಕ್ವೇರ್ ಎಂಜಿನೀರಿಂಗ್ ಸಂಸ್ಥೆಯ ಮಾಲಿಕರಾದ ನಮ್ಮ ಕನ್ನಡವರೇ ಆದ ಮುಸ್ತಫಾ ಮತ್ತು ಅವರ ಧರ್ಮ ಪತ್ನಿಗೆ 'ಕನ್ನಡ ಕೌಸ್ತುಭ' ಗೌರವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಕನ್ನಡಿಗರು ದುಬೈ ಸಂಘದ ವತಿಯಿಂದ ಯುಎಇ ಮಣ್ಣಲ್ಲಿ ಯುಎಇ ಸರ್ಕಾರದ ಆರೋಗ್ಯ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಕನ್ನಡ ನಾಡಿನ ಡಾಕ್ಟರುಗಳಿಗೆ ಸನ್ಮಾನ ಮಾಡುವ ಕಾರ್ಯಕ್ರಮವನ್ನು ಇಟ್ಟುಕೊಳ್ಳಲಾಗಿದೆ.

ಯುಎಇಯಲ್ಲಿ ವಾಸಿಸುತ್ತಿರುವ ಎಲ್ಲಾ ಅನಿವಾಸಿ ಕನ್ನಡಿಗರಿಗೂ ಈ ಸಮಾರಂಭಕ್ಕೆ ಆಗಮಿಸಿ ಯಶಸ್ವಿಗೊಳಿಸಿಕೊಡಬೇಕಾಗಿ ಆಯೋಜಕರು ಕೋರಿದ್ದಾರೆ. ಕನ್ನಡಮ್ಮನ ಈ ಹಬ್ಬದ ಸಂಭ್ರಮ ಅರಬ್ಬಿ ಸಮುದ್ರ ಹಾಗೂ ಅರಬರ ಸುಂದರ ಮರುಭೂಮಿಯಲ್ಲಿ ಮಾರ್ದನಿಸಲಿ, ವಿಶ್ವ ವಿಖ್ಯಾತ ಗಗನಚುಂಬಿ ಕಟ್ಟಡಗಳ ದುಬೈ ಮಾಯಾನಗರಿಯಲ್ಲಿ ಕನ್ನಡ ತಂಪಾದ ಗಾಳಿ ಬೀಸಲಿದೆ.
ಈ ಕಾರ್ಯಕ್ರಮದ ಘೋಷಣೆಗಾಗಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕನ್ನಡಿಗರು ದುಬೈ ಅಧ್ಯಕ್ಷರಾದ ಸದನ್ ದಾಸ್, ಮಾಜಿ ಅಧ್ಯಕ್ಷರುಗಳಾದ ವೀರೇಂದ್ರ ಬಾಬು, ಉಮಾ ವಿದ್ಯಾಧರ್, ಮಲ್ಲಿಕಾರ್ಜುನ ಗೌಡ ಅವರೊಂದಿಗೆ ದುಬೈ ಕನ್ನಡ ರಾಜ್ಯೋತ್ಸವದ ಮುಖ್ಯ ನಿರ್ವಹಣಾ ಸಂಯೋಜಕರಾದ ಅರುಣ್ ಕುಮಾರ್ ಎಂ ಕೆ ಬೆಂಗಳೂರು, ದೀಪಕ್ ಸೋಮಶೇಖರ್, ವಿಜಯ ಶಿವರುದ್ರಪ್ಪ, ಮತ್ತು ಕನ್ನಡಿಗರು ದುಬೈ ಸಮಿತಿ ಸದಸ್ಯರುಗಳಾದ ಮಮತಾ ರಾಘವೇಂದ್ರ, ಮಲ್ಲಿಕಾರ್ಜುನ ಅಂಗಡಿ, ಚಂದ್ರಕಾಂತ್, ಶ್ರೀನಿವಾಸ್ ಅರಸ್, ವೆಂಕಟರಮಣ ಕಾಮತ್, ರಫೀಕಲಿ ಕೊಡಗು, ವಿನೀತ್ ರಾಜ್ ಅವರುಗಳು ಹಾಜರಿದ್ದರು.
ದುಬೈ ಕನ್ನಡ ರಾಜ್ಯೋತ್ಸವ - 2018 ಇದರ ಉಪ ಸಮಿತಿ ಸದಸ್ಯರುಗಳಾದ ಮಧು ಬೆಂಗಳೂರು, ಮಮತಾ ಬೆಂಗಳೂರು, ಹಾದಿಯ ಮಂಡ್ಯ, ಅನಿತಾ ಶಾರ್ಜ, ಸಯಿದಾ ಬೆಂಗಳೂರು, ಸರೋಜಾ, ಪ್ರೀತಿ, ಸುಧಾ ಮುಂತಾದವರು ಈ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಏಳು ಸಮುದ್ರ ದಾಟಿ ಅರಬರ ನಾಡಲ್ಲಿ ವಿಶ್ವ ವಿಖ್ಯಾತ ಬುರ್ಜ್ ಖಲೀಫಾ ತರಹದ ಗಗನಚುಂಬಿ ಕಟ್ಟಡಗಳ ನಡುವೆ ಮತ್ತು ಮರುಭೂಮಿಯಲ್ಲಿ ವಾಸಿಸುತ್ತಿರುವ ಅನಿವಾಸಿ ಯುನೈಟೆಡ್ ಅರಬ್ ಎಮಿರೇಟ್ಸ್ ಕನ್ನಡಿಗರಿಗೆ ಸುಟ್ಟು ತಿನ್ನುವ ಬಿಸಿಯಾದ ಗಾಳಿ ಮಧ್ಯೆ ಕನ್ನಡದ ತಂಪಾದ ಗಾಳಿ ಬೀಸಲು ಇನ್ನೂ ಕೆಲವೇ ದಿನಗಳು ಬಾಕಿ. ಕನ್ನಡಮ್ಮನ ಹಬ್ಬ ಕನ್ನಡ ರಾಜ್ಯೋತ್ಸವ ದುಬೈಯಲ್ಲಿ ಇದೇ ಬರುವ ಶುಕ್ರವಾರ ಅಲ್ಕೂಸಿನಲ್ಲಿರು ಅಲ್ ಕೈಲ್ ಮಾಲ್ ಹತ್ತಿರವಿರುವ ಕ್ರೆಡೆನ್ಸ್ ಸ್ಕೂಲ್ ಆಡಿಟೋರಿಯಮಿನಲ್ಲಿ ನಡೆಯಲಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications