ಬಹ್ರೇನ್ ಕನ್ನಡಿಗರಿಂದ ನಾರಾಯಣ ಗುರು ಜಯಂತಿ
ಇಲ್ಲಿನ ಅನಿವಾಸಿ ಬಿಲ್ಲವರ ಸಂಘವಾದ ಗುರುಸೇವಾ ಸಮಿತಿ - ಬಹ್ರೇನ್ ಬಿಲ್ಲವಾಸ್ ಆಶ್ರಯದಲ್ಲಿ ಸೆಪ್ಟೆಂಬರ್ 8ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರ ವರೆಗೆ ಕರ್ನಾಟಕ ಸೋಷಿಯಲ್ ಕ್ಲಬ್ ಸಭಾಂಗಣದಲ್ಲಿ ಶ್ರೀ ನಾರಾಯಣ ಗುರು ಜಯಂತಿಯನ್ನು ಬಹು ವಿಜೃಂಭಣೆಯಿಂದ ಆಚರಿಸಲಾಯಿತು.
ಸುಮಾರು 200ಕ್ಕೂ ಹೆಚ್ಚು ಸದಸ್ಯರು ತಮ್ಮ ಬಂಧು ಬಾಂಧವರೊಂದಿಗೆ ಪೂಜೆಯಲ್ಲಿ ಭಾಗವಹಿಸಿ ಗುರು ದೇವರ ಕೃಪೆಗೆ ಪಾತ್ರರಾದರು.

ದೀಪ ಬೆಳಗುವ ಮೂಲಕ ಸಂಪ್ರದಾಯಬದ್ಧವಾಗಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಪುರುಷರೆಲ್ಲರೂ ಬಿಳಿ ಅಂಗಿ ಮತ್ತು ಕೇಸರಿ ಪಂಚೆಯನ್ನು ತೊಟ್ಟಿದ್ದು ವಿಶೇಷವಾಗಿತ್ತು.
ನಾರಾಯಣ ಗುರು ಜಯಂತಿಯ ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ, ಸಂಘದ ಮಹಿಳಾ ಸದಸ್ಯರು ಹಾಗೂ ಪುರುಷ ಸದಸ್ಯರು ಸಾಮೂಹಿಕ ಭಜನೆಯಲ್ಲಿ ಪಾಲ್ಗೊಂಡು, ಹಾಡಿ ಕುಣಿಯುತ್ತ ಕಾರ್ಯಕ್ರಮಕ್ಕೆ ರಂಗು ತಂದರು.

ಈ ಸಂದರ್ಭದಲ್ಲಿ ಬಹ್ರೇನ್ ಬಿಲ್ಲವಾಸ್ ಅಧ್ಯಕ್ಷ ಅಜಿತ್ ಬಂಗೇರರು ಶ್ರೀ ನಾರಾಯಣ ಗುರು ಸಂದೇಶ ಪುಸ್ತಕವನ್ನು ವಿತರಿಸಿದರು. ಪೂಜೆಯನ್ನು ಶ್ರೀಯುತ ಜಯಪ್ರಕಾಶ ಬೆಂಗ್ರೆಯವರು ನಡೆಸಿಕೊಟ್ಟರು. ಪೂಜಾಂತ್ಯದಲ್ಲಿ ಸಾರ್ವಜನಿಕ ಅನ್ನ ಸಂತರ್ಪಣೆಯನ್ನು ಮಾಡಲಾಯಿತು.
ಗುರು ಜಯಂತಿಯ ಅಂಗವಾಗಿ ಸೆಪ್ಟೆಂಬರ್ 2ರಂದು ಸಂಘದ ಸದಸ್ಯರ ಮನೆಯಲ್ಲಿ ನಗರ ಭಜನೆ ಹಾಗೂ ಶ್ರೀ ನಾರಾಯಣ ಗುರು ಸಂದೇಶ ಜಾಥಾ ಮಾಡಲಾಯಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications