ಬಹ್ರೇನ್ ನಲ್ಲಿ ಬಿಲ್ಲವ ಸಮಾಜದಿಂದ ರಾಧಾ-ಕೃಷ್ಣ ವೇಷ ಸ್ಪರ್ಧೆ
ಬಿಲ್ಲವ ಸಮುದಾಯದ ಗುರು ಸೇವಾ ಸಮಿತಿ- ಬಹ್ರೇನ್ ಬಿಲ್ಲವಾಸ್ ಯಿಂದ ಇತ್ತೀಚೆಗೆ ಬಹ್ರೇನ್ ನ ದಿ ಇಂಡಿಯನ್ ಕ್ಲಬ್ ನಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಧಾ-ಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಬಹ್ರೇನ್ ದ್ವೀಪ ರಾಷ್ಟ್ರದಲ್ಲಿ ಮೊತ್ತ ಮೊದಲ ಬಾರಿ ಎಲ್ಲ ತುಳುವ - ಕನ್ನಡಿಗರಿಗೆ ಮುಕ್ತವಾಗಿ ಸ್ಪರ್ಧಿಸುವ ಅವಕಾಶವನ್ನು ನೀಡಲಾಯಿತು. ಮೊದಲ ಭಾಗದಲ್ಲಿ ಬಹ್ರೇನ್ ಬಿಲ್ಲವಾಸ್ ನ ಫೇಸ್ ಬುಕ್ ಪುಟದಲ್ಲಿ ಕೇವಲ 10 ದಿನಗಳಲ್ಲಿ 2.37 ಲಕ್ಷಕ್ಕೂ ಮಿಕ್ಕಿದ ವೀಕ್ಷಕರು ನೋಡಿದ್ದರು.

ಸ್ಪರ್ಧೆಯ ಎರಡನೇ ಭಾಗವನ್ನು ದಿ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಪ್ರಥ್ವಿ ಅಂಬರ್, ಡಾ. ನಿಧಿ ಮೆನನ್ ಮತ್ತು ಲೀಲಾಧರ್ ಬೈಕಂಪಾಡಿ ತೀರ್ಪುಗಾರರಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಪಿಲಿ ವೇಷ - ತುಳುನಾಡ ಶೈಲಿಯ ಹುಲಿ ನೃತ್ಯವನ್ನು ಸಾದರಪಡಿಸಿ ನೆರೆದ ಎಲ್ಲಾ ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಸಫಲವಾಯಿತು.
ತಂಡದ 9 ಕಲಾವಿದರು ಬಹ್ರೇನ್ ನಲ್ಲಿ ಮೊತ್ತ ಮೊದಲ ಬಾರಿಗೆ ಪಿಲಿ ವೇಷ ಪ್ರದರ್ಶಿಸಿ, ಇತಿಹಾಸಕ್ಕೆ ನಾಂದಿ ಹಾಕಿದರು. ಬಹ್ರೇನ್ ಬಿಲ್ಲವಾಸ್ ಸದಸ್ಯರ, ಇಸ್ಕಾನ್ ಬಹ್ರೇನ್ ಮತ್ತು ರಿದಮ್ ಡ್ಯಾನ್ಸ್ ಗ್ರೂಪ್ ನವರ ಜನಪದೀಯ ಶೈಲಿಯ ಹಾಗೂ ಸಾಂಪ್ರದಾಯಿಕ ನೃತ್ಯ ಪ್ರದರ್ಶನಗಳು ಗಮನ ಸೆಳೆದವು.
ಈ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತರಾಗಿ ಸ್ವದೇಶಕ್ಕೆ ಮರಳುತ್ತಿರುವ ಬಹ್ರೇನ್ ಬಿಲ್ಲವಾಸ್ ಮಾಜಿ ಅಧ್ಯಕ್ಷ - ಕೃಷ್ಣ ನೈಂಪಳ್ಳಿಯವರನ್ನು ಸನ್ಮಾನಿಸಲಾಯಿತು.
ಬಹ್ರೇನ್ ಬಿಲ್ಲವಾಸ್ ಅಧ್ಯಕ್ಷ ಅಜಿತ್ ಬಂಗೇರ, ದಿ ಇಂಡಿಯನ್ ಕ್ಲಬ್ ಅಧ್ಯಕ್ಷ ಕ್ಯಾಸಿಯಸ್ ಪಿರೇರಾ, ಕನ್ನಡ ಸಂಘದ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಪ್ರಾಯೋಜಕತ್ವ ಪ್ರತಿನಿಧಿಗಳಾದ ಇಸಾಕ್ ಮೊಹಮ್ಮದ್ - ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್, ಗಜಾನನ್ ಖೊಲ್ಗಡೆ - ಅಲ್ ಆದಿಲ್ ಸೂಪರ್ ಮಾರ್ಕೆಟ್ ಗಳು, ಉದ್ಯಮಿಗಳಾದ ಸಾಗರ್ ಪೂಜಾರಿ ಮತ್ತು ವಿಶಾಲ್ ಕರ್ಕೆರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಹ್ರೇನ್ ಬಿಲ್ಲವಾಸ್ ಅಧ್ಯಕ್ಷ ಅಜಿತ್ ಬಂಗೇರ ಸಭೆಯನ್ನು ಸ್ವಾಗತಿಸಿದರು. ಪ್ರತಿಮಾ ರಾಜ್ ಮೂಡಬಿದ್ರಿ ಮತ್ತು ಪೂರ್ಣಿಮಾ ಜಗದೀಶ್ ಅವರು ನಿರೂಪಣೆ ಮಾಡಿದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications