Get Updates
Get notified of breaking news, exclusive insights, and must-see stories!

ಕಸಾರಂದ 7ನೇ ವಸಂತ ಸಾಹಿತ್ಯೋತ್ಸವಕ್ಕೆ ಕ್ಷಣಗಣನೆ

ಸೇಯಿಂಟ್ ಲೂಯಿಸ್ಸಿನ ಸಂಗಮದ ಆಶ್ರಯದಲ್ಲಿ, ಮಧ್ಯವಲಯದ ಇತರ ಕನ್ನಡ ಕೂಟಗಳ ಸಹಕಾರದೊಂದಿಗೆ ಇದೇ ಮೇ 30 ಮತ್ತು 31ರಂದು ನಡೆಯಲಿರುವ ಕಾರ್ಯಕ್ರಮಗಳಲ್ಲಿ ತಪ್ಪದೇ ಬಾಗವಹಿಸಿ ಎಂದು ರಂಗದ ಪರವಾಗಿ ಮತ್ತು ಸಂಗಮದ ಪದಾಧಿಕಾರಿಗಳ ಪರವಾಗಿ ತಮ್ಮನ್ನೆಲ್ಲ ಆಹ್ವಾನಿಸಲು ನಮಗೆ ತುಂಬಾ ಸಂತಸವಾಗುತ್ತಿದೆ.

ಈ ಬಾರಿಯ ನಮ್ಮ ಸಮ್ಮೇಳನದ ಮುಖ್ಯ ವಿಷಯ "ಅನುವಾದ ಸಾಹಿತ್ಯ." ಕನ್ನಡ ಅನುವಾದ ಸಾಹಿತ್ಯ ಪ್ರಪಂಚದಲ್ಲಿ ಮುಖ್ಯರಾದ ಡಾ|| ಪ್ರಧಾನ್ ಗುರುದತ್ತರು ಮುಖ್ಯ ಅತಿಥಿಗಳಾಗಿ ಭಾರತದಿಂದ ಆಗಮಿಸಿದ್ದಾರೆ, "ಅನುವಾದದ ಆಗುಹೋಗುಗಳು" ಎಂಬ ವಿಷಯದ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ನಮ್ಮವರೇ ಆದ ಪ್ರಸಿದ್ಧ ಭಾಷಾವಿಜ್ಞಾನಿ, ಡಾ|| ಎಸ್.ಎನ್ ಶ್ರೀಧರ್ ಮತ್ತು ಅನುವಾದದ ವಿಷಯದಲ್ಲಿ ಪ್ರಾವೀಣ್ಯ ಗಳಿಸಿರುವ ಆಂಗ್ಲಭಾಷಾ ಪ್ರಾಧ್ಯಾಪಕ ಡಾ|| ನಾರಾಯಣ ಹೆಗ್ಡೆ ಅವರುಗಳು ವಿಶೇಷ ಅತಿಥಿಗಳಾಗಿ ಆಗಮಿಸಿ "ಅನುವಾದ ಕಮ್ಮಟ" ಮತ್ತು "ಸಂವಾದ" ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Countdown begins for 7th Vasantha Sahityotsava

ಇತರ ಭಾಷೆಗಳಿಂದ ಕನ್ನಡಕ್ಕೆ ಅನುವಾದವಾದ ಲೇಖನಗಳನ್ನೊಳಗೊಂಡ "ಅನುವಾದ ಸಂವಾದ" ಎಂಬ ಕನ್ನಡ ಪುಸ್ತಕ, ಮತ್ತು ಕನ್ನಡದಿಂದ ಇಂಗ್ಲಿಷಿಗೆ ಅನುವಾದವಾದ ಲೇಖನಗಳನ್ನೊಳಗೊಂಡ "A Little Taste of Kannada-in English" ಎಂಬ ಆಂಗ್ಲ ಪುಸ್ತಕಗಳನ್ನು ರಂಗ ಲೋಕಾರ್ಪಣೆ ಗೊಳಿಸಲಿದೆ. ಇವೇ ಅಲ್ಲದೆ, ನಾಗ ಐತಾಳ ಮತ್ತು ಜ್ಯೋತಿ ಮಹಾದೇವ್ ಅವರು ಸಂಪಾದಿಸಿರುವ "ಅಮೆರಿಕನ್ನಡ ಬರಗಾರರ ಮಾಹಿತಿ ಕೋಶ" ಸಹ ಲೋಕಾರ್ಪಣೆಗೊಳ್ಳಲಿದೆ.

ಸಂಗಮದ ಮುಂದಾಳತ್ವದಲ್ಲಿ "ಸೊಬಗು" ಎಂಬ ಸ್ಮರಣ ಸಂಚಿಕೆ ಸಹ ಸಿದ್ಧವಾಗುತ್ತಿದೆ. ರಂಗದ ಸಂಸ್ಥಾಪಕರಲ್ಲಿ ಮೊದಲಿಗರಾದ ಎಚ್.ವೈ. ರಾಜಗೋಪಾಲರು ಅನುವಾದಿಸಿರುವ "ಸೃಷ್ಟಿ" (ಅಮೆರಿಕದ ರೆಡ್ ಇಂಡಿಯನ್ ಕಥೆಗಳು) ಎಂಬ ಪುಸ್ತಕವನ್ನು ನೋಂದಾಯಿಸಿಕೊಂಡವರಿಗೆಲ್ಲ ರಂಗದ ವತಿಯಿಂದ ವಿತರಿಸಲಾಗುವುದು. ಪ್ರತಿ ಬಾರಿಯೂ ನಾವು ನಡೆಸುವ ಕವಿಗೋಷ್ಠಿ, ಬರಹಗಾರರ ಮತ್ತು ಅವರ ಇತ್ತೀಚಿನ ಪ್ರಕಟಣೆಗಳ ಪರಿಚಯ, ಇವುಗಳ ಜೊತೆಗೆ, ಈ ಬಾರಿ ಸ್ವಾರಸ್ಯಕರವಾದ ಒಂದು ಅನುವಾದ ಕಮ್ಮಟವನ್ನೂ ಏರ್ಪಡಿಸಲಾಗಿದೆ.

ಕೇವಲ ಸಾಹಿತ್ಯ ಮಾತ್ರ ಎಂದು ದಿಗಿಲುಪಡದಿರಿ, ಸಂಗಮದ ನಾಟ್ಯಪಟು ಪ್ರಸನ್ನ ಕಸ್ತೂರಿಯವರ ನಿರ್ದೇಶನದಲ್ಲಿ ಗೀತ-ನಾಟ್ಯ-ನಟನ-ನಾಟಕ-ಪ್ರಿಯರ ಮನಸ್ಸನ್ನು ಸೂರೆಗೊಳ್ಳುವ ಮನರಂಜನಾ ಕಾರ್ಯಕ್ರಮಗಳಲ್ಲಿ ಮತ್ತು ಮಕ್ಕಳ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಂಗಮದ ಜೊತೆಗೆ ಕೈಜೋಡಿಸಲು ಸಿನ್ಸಿನ್ಯಾಟಿ, ಶಿಕಾಗೋ, ಇಂಡಿಯನಾಪೊಲಿಸ್, ಲಿಟಲ್ ರಾಕ್, ನ್ಯಾಷವಿಲ್, ಮಿಲ್ವಾಕಿ, ಬ್ಲೂಮಿಂಗ್ ಟನ್ ಮುಂತಾದ ನಗರಗಳ ಕನ್ನಡ ಕೂಟಗಳೂ ಸಿದ್ಧವಾಗಿ ನಿಂತಿವೆ!

ಮಕ್ಕಳಿಗಾಗಿ ಸವಿತಾ ರವಿಶಂಕರ್ ಅವರ "ಚಿಲಿಪಿಲಿ ಕನ್ನಡ ಕಲಿ" ಧ್ವನಿ ಸಂಪುಟ ಸಹ ಲೋಕಾರ್ಪಣೆಯಾಗಲಿದೆ. ಕನ್ನಡ ಪುಸ್ತಕಗಳ ಮಳಿಗೆಯಲ್ಲಿ ನಮ್ಮವರೇ ಬರೆದು ಪ್ರಕಟಿಸಿರುವ ಪುಸ್ತಕಗಳನ್ನು ಮಾರಾಟಕ್ಕೆ ಇಡಲಾಗುತ್ತದೆ, ಕೊಂಡು ಓದಿ ಸಂತಸಪಡಲು ಇದೊಂದು ಉತ್ತಮ ಅವಕಾಶ. ಕೊನೆಯದಾಗಿ, ಆದರೆ ಮುಖ್ಯವಾಗಿ, ಉತ್ತಮ ಊಟೋಪಚಾರಗಳ ಏರ್ಪಾಟು ಭರದಿಂದ ಸಾಗಿದೆ!

ಸಾಹಿತ್ಯಪ್ರಿಯರನ್ನು ಅತ್ಯಂತ ಪ್ರೀತಿಯಿಂದ ಸ್ವಾಗತಿಸಿ ಸತ್ಕರಿಸಲು ಸಂಗಮದ ಜ್ಯೋತಿ ಮೈಸೂರ್ ಮತ್ತು ಶುಭಾ ಭಾಸ್ಕರ್ ಅವರ ತಂಡದ ಸ್ವಯಂಸೇವಕರು ತವಕದಿಂದ ಕಾದಿದ್ದಾರೆ. ಕಾರ್ಯಕ್ರಮಗಳ ಪಕ್ಷಿನೋಟವನ್ನು ಕೆಳಗೆ ಕೊಡಲಾಗಿದೆ, ಹೆಚ್ಚಿನ ವಿವರಗಳಿಗೆ kannadasahityaranga.org ಮತ್ತು sangamastl.com ಈ ಜಾಲತಾಣಗಳಿಗೆ ಭೇಟಿ ಕೊಡಿ. [ಕಾರ್ಯಕ್ರಮಗಳ ಪಕ್ಷಿನೋಟ]

ತನು ಕನ್ನಡ ಮನ ಕನ್ನಡ ನುಡಿ ಕನ್ನಡವೆಮ್ಮದು!

ಮೈ.ಶ್ರೀ. ನಟರಾಜ, ಕನ್ನಡ ಸಾಹಿತ್ಯ ರಂಗದ ಕಾರ್ಯಕಾರೀ ಸಮಿತಿಯ ಅಧ್ಯಕ್ಷ
ನಾಗ ಐತಾಳ, ಕನ್ನಡ ಸಾಹಿತ್ಯ ರಂಗದ ಆಡಳಿತ ಮಂಡಲಿಯ ಅಧ್ಯಕ್ಷ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+