ಕಸಾರಂದ 7ನೇ ವಸಂತ ಸಾಹಿತ್ಯೋತ್ಸವಕ್ಕೆ ಕ್ಷಣಗಣನೆ
ಸೇಯಿಂಟ್ ಲೂಯಿಸ್ಸಿನ ಸಂಗಮದ ಆಶ್ರಯದಲ್ಲಿ, ಮಧ್ಯವಲಯದ ಇತರ ಕನ್ನಡ ಕೂಟಗಳ ಸಹಕಾರದೊಂದಿಗೆ ಇದೇ ಮೇ 30 ಮತ್ತು 31ರಂದು ನಡೆಯಲಿರುವ ಕಾರ್ಯಕ್ರಮಗಳಲ್ಲಿ ತಪ್ಪದೇ ಬಾಗವಹಿಸಿ ಎಂದು ರಂಗದ ಪರವಾಗಿ ಮತ್ತು ಸಂಗಮದ ಪದಾಧಿಕಾರಿಗಳ ಪರವಾಗಿ ತಮ್ಮನ್ನೆಲ್ಲ ಆಹ್ವಾನಿಸಲು ನಮಗೆ ತುಂಬಾ ಸಂತಸವಾಗುತ್ತಿದೆ.
ಈ ಬಾರಿಯ ನಮ್ಮ ಸಮ್ಮೇಳನದ ಮುಖ್ಯ ವಿಷಯ "ಅನುವಾದ ಸಾಹಿತ್ಯ." ಕನ್ನಡ ಅನುವಾದ ಸಾಹಿತ್ಯ ಪ್ರಪಂಚದಲ್ಲಿ ಮುಖ್ಯರಾದ ಡಾ|| ಪ್ರಧಾನ್ ಗುರುದತ್ತರು ಮುಖ್ಯ ಅತಿಥಿಗಳಾಗಿ ಭಾರತದಿಂದ ಆಗಮಿಸಿದ್ದಾರೆ, "ಅನುವಾದದ ಆಗುಹೋಗುಗಳು" ಎಂಬ ವಿಷಯದ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ನಮ್ಮವರೇ ಆದ ಪ್ರಸಿದ್ಧ ಭಾಷಾವಿಜ್ಞಾನಿ, ಡಾ|| ಎಸ್.ಎನ್ ಶ್ರೀಧರ್ ಮತ್ತು ಅನುವಾದದ ವಿಷಯದಲ್ಲಿ ಪ್ರಾವೀಣ್ಯ ಗಳಿಸಿರುವ ಆಂಗ್ಲಭಾಷಾ ಪ್ರಾಧ್ಯಾಪಕ ಡಾ|| ನಾರಾಯಣ ಹೆಗ್ಡೆ ಅವರುಗಳು ವಿಶೇಷ ಅತಿಥಿಗಳಾಗಿ ಆಗಮಿಸಿ "ಅನುವಾದ ಕಮ್ಮಟ" ಮತ್ತು "ಸಂವಾದ" ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಇತರ ಭಾಷೆಗಳಿಂದ ಕನ್ನಡಕ್ಕೆ ಅನುವಾದವಾದ ಲೇಖನಗಳನ್ನೊಳಗೊಂಡ "ಅನುವಾದ ಸಂವಾದ" ಎಂಬ ಕನ್ನಡ ಪುಸ್ತಕ, ಮತ್ತು ಕನ್ನಡದಿಂದ ಇಂಗ್ಲಿಷಿಗೆ ಅನುವಾದವಾದ ಲೇಖನಗಳನ್ನೊಳಗೊಂಡ "A Little Taste of Kannada-in English" ಎಂಬ ಆಂಗ್ಲ ಪುಸ್ತಕಗಳನ್ನು ರಂಗ ಲೋಕಾರ್ಪಣೆ ಗೊಳಿಸಲಿದೆ. ಇವೇ ಅಲ್ಲದೆ, ನಾಗ ಐತಾಳ ಮತ್ತು ಜ್ಯೋತಿ ಮಹಾದೇವ್ ಅವರು ಸಂಪಾದಿಸಿರುವ "ಅಮೆರಿಕನ್ನಡ ಬರಗಾರರ ಮಾಹಿತಿ ಕೋಶ" ಸಹ ಲೋಕಾರ್ಪಣೆಗೊಳ್ಳಲಿದೆ.
ಸಂಗಮದ ಮುಂದಾಳತ್ವದಲ್ಲಿ "ಸೊಬಗು" ಎಂಬ ಸ್ಮರಣ ಸಂಚಿಕೆ ಸಹ ಸಿದ್ಧವಾಗುತ್ತಿದೆ. ರಂಗದ ಸಂಸ್ಥಾಪಕರಲ್ಲಿ ಮೊದಲಿಗರಾದ ಎಚ್.ವೈ. ರಾಜಗೋಪಾಲರು ಅನುವಾದಿಸಿರುವ "ಸೃಷ್ಟಿ" (ಅಮೆರಿಕದ ರೆಡ್ ಇಂಡಿಯನ್ ಕಥೆಗಳು) ಎಂಬ ಪುಸ್ತಕವನ್ನು ನೋಂದಾಯಿಸಿಕೊಂಡವರಿಗೆಲ್ಲ ರಂಗದ ವತಿಯಿಂದ ವಿತರಿಸಲಾಗುವುದು. ಪ್ರತಿ ಬಾರಿಯೂ ನಾವು ನಡೆಸುವ ಕವಿಗೋಷ್ಠಿ, ಬರಹಗಾರರ ಮತ್ತು ಅವರ ಇತ್ತೀಚಿನ ಪ್ರಕಟಣೆಗಳ ಪರಿಚಯ, ಇವುಗಳ ಜೊತೆಗೆ, ಈ ಬಾರಿ ಸ್ವಾರಸ್ಯಕರವಾದ ಒಂದು ಅನುವಾದ ಕಮ್ಮಟವನ್ನೂ ಏರ್ಪಡಿಸಲಾಗಿದೆ.
ಕೇವಲ ಸಾಹಿತ್ಯ ಮಾತ್ರ ಎಂದು ದಿಗಿಲುಪಡದಿರಿ, ಸಂಗಮದ ನಾಟ್ಯಪಟು ಪ್ರಸನ್ನ ಕಸ್ತೂರಿಯವರ ನಿರ್ದೇಶನದಲ್ಲಿ ಗೀತ-ನಾಟ್ಯ-ನಟನ-ನಾಟಕ-ಪ್ರಿಯರ ಮನಸ್ಸನ್ನು ಸೂರೆಗೊಳ್ಳುವ ಮನರಂಜನಾ ಕಾರ್ಯಕ್ರಮಗಳಲ್ಲಿ ಮತ್ತು ಮಕ್ಕಳ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಂಗಮದ ಜೊತೆಗೆ ಕೈಜೋಡಿಸಲು ಸಿನ್ಸಿನ್ಯಾಟಿ, ಶಿಕಾಗೋ, ಇಂಡಿಯನಾಪೊಲಿಸ್, ಲಿಟಲ್ ರಾಕ್, ನ್ಯಾಷವಿಲ್, ಮಿಲ್ವಾಕಿ, ಬ್ಲೂಮಿಂಗ್ ಟನ್ ಮುಂತಾದ ನಗರಗಳ ಕನ್ನಡ ಕೂಟಗಳೂ ಸಿದ್ಧವಾಗಿ ನಿಂತಿವೆ!
ಮಕ್ಕಳಿಗಾಗಿ ಸವಿತಾ ರವಿಶಂಕರ್ ಅವರ "ಚಿಲಿಪಿಲಿ ಕನ್ನಡ ಕಲಿ" ಧ್ವನಿ ಸಂಪುಟ ಸಹ ಲೋಕಾರ್ಪಣೆಯಾಗಲಿದೆ. ಕನ್ನಡ ಪುಸ್ತಕಗಳ ಮಳಿಗೆಯಲ್ಲಿ ನಮ್ಮವರೇ ಬರೆದು ಪ್ರಕಟಿಸಿರುವ ಪುಸ್ತಕಗಳನ್ನು ಮಾರಾಟಕ್ಕೆ ಇಡಲಾಗುತ್ತದೆ, ಕೊಂಡು ಓದಿ ಸಂತಸಪಡಲು ಇದೊಂದು ಉತ್ತಮ ಅವಕಾಶ. ಕೊನೆಯದಾಗಿ, ಆದರೆ ಮುಖ್ಯವಾಗಿ, ಉತ್ತಮ ಊಟೋಪಚಾರಗಳ ಏರ್ಪಾಟು ಭರದಿಂದ ಸಾಗಿದೆ!
ಸಾಹಿತ್ಯಪ್ರಿಯರನ್ನು ಅತ್ಯಂತ ಪ್ರೀತಿಯಿಂದ ಸ್ವಾಗತಿಸಿ ಸತ್ಕರಿಸಲು ಸಂಗಮದ ಜ್ಯೋತಿ ಮೈಸೂರ್ ಮತ್ತು ಶುಭಾ ಭಾಸ್ಕರ್ ಅವರ ತಂಡದ ಸ್ವಯಂಸೇವಕರು ತವಕದಿಂದ ಕಾದಿದ್ದಾರೆ. ಕಾರ್ಯಕ್ರಮಗಳ ಪಕ್ಷಿನೋಟವನ್ನು ಕೆಳಗೆ ಕೊಡಲಾಗಿದೆ, ಹೆಚ್ಚಿನ ವಿವರಗಳಿಗೆ kannadasahityaranga.org ಮತ್ತು sangamastl.com ಈ ಜಾಲತಾಣಗಳಿಗೆ ಭೇಟಿ ಕೊಡಿ. [ಕಾರ್ಯಕ್ರಮಗಳ ಪಕ್ಷಿನೋಟ]
ತನು ಕನ್ನಡ ಮನ ಕನ್ನಡ ನುಡಿ ಕನ್ನಡವೆಮ್ಮದು!
ಮೈ.ಶ್ರೀ. ನಟರಾಜ, ಕನ್ನಡ ಸಾಹಿತ್ಯ ರಂಗದ ಕಾರ್ಯಕಾರೀ ಸಮಿತಿಯ ಅಧ್ಯಕ್ಷ
ನಾಗ ಐತಾಳ, ಕನ್ನಡ ಸಾಹಿತ್ಯ ರಂಗದ ಆಡಳಿತ ಮಂಡಲಿಯ ಅಧ್ಯಕ್ಷ
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications