ನ್ಯೂಜೆರ್ಸಿ ಆದಿಚುಂಚನಗಿರಿ ಮಠದಲ್ಲಿ ಸಂಭ್ರಮದ ದೀಪಾವಳಿ!
ನ್ಯೂಜೆರ್ಸಿಯ ಸೊಮರ್ಸೆಟ್ ನಲ್ಲಿರುವ ಶ್ರೀ ಆದಿಚುಂಚನ ಗಿರಿ ಮಠದಲ್ಲಿ ಮಠಾಧೀಶ್ವರರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ, ಶ್ರೀ ಶ್ರೀಶೈಲನಾಥ ಸ್ವಾಮೀಜಿಯವರ ಸಮ್ಮುಖದಲ್ಲಿ ನೂರಕ್ಕೂ ಹೆಚ್ಚು ಕನ್ನಡ ಬಾಂಧವರು ಸೇರಿ ಅತ್ಯಂತ ಸಡಗರದಿಂದ ಮತ್ತು ಅದ್ದೂರಿಯಾಗಿ ದೀಪಾವಳಿಯನ್ನು ಆಚರಿಸಿದರು.
ಸಂಜೆ ಶ್ರೀ ಶ್ರೀಶೈಲನಾಥ ಸ್ವಾಮೀಜಿ ಯವರು ಗಣಪತಿ ಸ್ತುತಿ, ಹೋಮದೊಂದಿಗೆ ಪೂಜೆ ಪ್ರಾರಂಭಿಸಿದರು. ನಂತರ ಭಕ್ತಾದಿಗಳ ಸಂಕಲ್ಪದೊಂದಿಗೆ ಅತ್ಯಂತ ವಿಜೃಂಭಣೆಯಿಂದ ಲಕ್ಷ್ಮಿ ಪೂಜೆ ಕೂಡ ಜೊತೆಜೊತೆಗೆ ನಡೆಸಲಾಯಿತು.

ಲಲಿತಾ ಸಹಸ್ರ ನಾಮವನ್ನು ಸುಶ್ರಾವ್ಯವಾಗಿ ಹಾಡುತ್ತ ರೇಷ್ಮೆ ಸೀರೆಯುಟ್ಟ ಮುತ್ತೈದೆಯರು ಪೂಜೆಯಲ್ಲಿ ಪಾಲ್ಗೊಂಡು ದೀಪಾವಳಿ ಹಬ್ಬಕ್ಕೆ ಹೊಸ ಕಳೆಯನ್ನು ತಂದುಕೊಟ್ಟರು. ಎಲ್ಲರೂ ಒಕ್ಕೊರಲಿನಿಂದ ಹಾಡುತ್ತಿದ್ದಾಗ ಲಲಿತಾ ಸಹಸ್ರ ನಾಮವನ್ನು ಕೇಳುವುದೇ ಒಂದು ಆನಂದ.

ನಂತರ ಮಕ್ಕಳು, ಹಿರಿಯರೆನ್ನದೆ ಎಲ್ಲರೂ ಅತ್ಯಂತ ಸಡಗರದಿಂದ ವಿವಿಧವಾದ ಪಟಾಕಿಗಳನ್ನು ಹಚ್ಚಿ ಸಂಭ್ರಮಿಸಿದರು. ದೀಪಾವಳಿಯೆಂದ ದೀಪಗಳ ಆವಳಿಯ ಜೊತೆ ಪಟಾಕಿಗಳ ಸದ್ದು ಇಲ್ಲದಿದ್ದರೆ ಹೇಗೆ? ಶ್ರೀಶೈಲನಾಥ ಸ್ವಾಮೀಜಿಗಳು ಕೂಡ ಎಲ್ಲರೊಂದಿಗೆ ಸೇರಿ ಪಟಾಕಿ ಸಿಡಿಸಿ ಆನಂದಿಸಿದರು.

ನಂತರ 30ಕ್ಕೂ ಹೆಚ್ಚು ಬಗೆ ಬಗೆ ಖಾದ್ಯಗಳ ಭರ್ಜರಿ ಭೋಜನವನ್ನು ಏರ್ಪಡಿಸಲಾಗಿತ್ತು. ಭಕ್ತಾದಿಗಳೆಲ್ಲರೂ ಹಬ್ಬದೂಟವನ್ನು ಮನಸಾರೆ ಸವಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications