ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ನಿಂದ ಅಂಬೇಡ್ಕರ್ ಜನ್ಮದಿನಾಚರಣೆ
ಲಂಡನ್ ನಲ್ಲಿ ಏಪ್ರಿಲ್ 14ರಂದು ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ನಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಭಾರತದ ಸಂವಿಧಾನ ರಚನೆಯ ಪ್ರಧಾನ ವ್ಯಕ್ತಿಗೆ ಗೌರವ ಸಲ್ಲಿಸಲಾಯಿತು.
ಲಂಡನ್, ಏಪ್ರಿಲ್ 15: ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಲಂಡನ್ ನ ಥೇಮ್ಸ್ ನದಿಯ ತೀರದಲ್ಲಿ ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ನಿಂದ ಏಪ್ರಿಲ್ 14ರಂದು ಆಚರಿಸಲಾಯಿತು. ಬಸವೇಶ್ವರ ಪುತ್ಥಳಿ ಬಳಿ ಜಯಂತಿ ಕಾರ್ಯಕ್ರಮವನ್ನು ಆಚರಿಸಿದ್ದು ವಿಶಿಷ್ಟವಾಗಿತ್ತು.
ಸಾಮಾಜಿಕ ನ್ಯಾಯದ ಪರಿಕಲ್ಪನೆ ಇದ್ದ ಇಬ್ಬರು ಮಹಾನ್ ಚೇತನಗಳ ಮುಖಾಮುಖಿಯಂತಿ ಈ ಕಾರ್ಯಕ್ರಮವಿತ್ತು. ಭಾರತದಲ್ಲಿ ಅಸ್ಪೃಶ್ಯತೆ ಹಾಗೂ ಶೋಷಣೆ ವಿರುದ್ಧ ಧ್ವನಿ ಎತ್ತಿ ಹೋರಾಡಿದ ವ್ಯಕ್ತಿಗಳು ಬಸವೇಶ್ವರ ಹಾಗೂ ಅಂಬೇಡ್ಕರ್. ಪ್ರಜಾಪ್ರಭುತ್ವದ ಆಲೋಚನೆಯನ್ನು ಹನ್ನೆರಡನೇ ಶತಮಾನದಲ್ಲೇ ಬಿತ್ತಿದ್ದವರು ಬಸವಣ್ಣ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಎಂದು ಕೊಂಡಾಡಲಾಯಿತು.[ಲಂಡನ್ ನಲ್ಲಿ ಬಸವೇಶ್ವರ ಪ್ರತಿಮೆಗೆ ಗೌರವ ಸಲ್ಲಿಸಿದ ಗೃಹಸಚಿವ ಪರಮೇಶ್ವರ]

ಅಂದಹಾಗೆ ಇಲ್ಲಿನ ಬಸವೇಶ್ವರ ಪುತ್ಥಳಿಯನ್ನು ಲೋಕಾರ್ಪಣೆ ಮಾಡಿದವರು ಪ್ರಧಾನಿ ನರೇಂದ್ರ ಮೋದಿ. ಅದರಲ್ಲೂ ಬ್ರಿಟಿಷ್ ಪಾರ್ಲಿಮೆಂಟ್ ಸುತ್ತಮುತ್ತಲಲ್ಲಿ ಪುತ್ಥಳಿ ಸ್ಥಾಪನೆಗೆ ಬ್ರಿಟಿಷ್ ಸಂಸತ್ ನಿಂದ ಅನುಮತಿ ಪಡೆದಿದ್ದು ಸಹ ಇದೇ ಮೊದಲು. ಇನ್ನು ಲಂಡನ್ ನಲ್ಲಿ ಅಂಬೇಡ್ಕರ್ ಉಳಿದುಕೊಂಡಿದ್ದ ಮನೆಯನ್ನು ಮಹಾರಾಷ್ಟ್ರ ಸರಕಾರ ಸಂಗ್ರಹಾಲಯವಾಗಿ ಪರಿವರ್ತಿಸಿದೆ.
ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಸೇರಿದಂತೆ ವಿವಿಧ ಸಂಘಟನೆಗಳ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications