ಕತಾರ್ ಕರ್ನಾಟಕ ಸಂಘದಿಂದ ಇಂಜಿನಿಯರ್ ದಿನಾಚರಣೆ
ಕತಾರ್ ಕರ್ನಾಟಕ ಸಂಘದ ವತಿಯಿಂದ 2017ರ ಅಭಿಯಂತರರ ದಿನಾಚರಣೆಯನ್ನು ಇತ್ತೀಚೆಗೆ ಅದ್ಧೂರಿಯಿಂದ ಆಚರಿಸಲಾಯಿತು.
ಭಾರತೀಯ ಸಾಂಸ್ಕೃತಿಕ ಕೇಂದ್ರವಿರುವ ಕಟ್ಟಡದ ಆವರಣದಲ್ಲಿನ ಮುಂಬೈ ಸಭಾಂಗಣದಲ್ಲಿ ಸಂಜೆ ಸುಮಾರು 7.30 ಘಂಟೆಗೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ವಾರದ ಮಧ್ಯದ ಕೆಲಸವಿರುವ ದಿನವಾದ್ದರಿಂದ, ಸಂಜೆಯ ಸಮಯವನ್ನು ಆಯ್ಕೆ ಮಾಡಲಾಗಿತ್ತು. ಮುಖ್ಯ ಅತಿಥಿಗಳಾದ ಮಿಲನ್ ಅರುಣ್, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರು ಹಾಗು ಇತರ ಗಣ್ಯರು, ಆಹ್ವಾನಿತರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಅಧಿಕೃತವಾಗಿ ಪ್ರಾರಂಭಿಸಿದರು.

ಪುಷ್ಪ ಗಿರೀಶ್ ರವರು ಹುಮ್ಮಸ್ಸಿನಿಂದ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಥಮವಾಗಿ ವಸುಧಾರವರು ಸರ್. ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಸಂಕ್ಷಿಪ್ತ ಜೀವನ ಚರಿತ್ರೆಯನ್ನು ಸಭಿಕರ ಮನಮುಟ್ಟುವಂತೆ ಸ್ಪಷ್ಟವಾಗಿ ಮತ್ತು ಅತ್ಯಂತ ಸರಳವಾಗಿ ಹೇಳಿದರು. ಸರ್.ಎಂ.ವಿ. ಅವರ ಜೀವನದ ಪುಸ್ತಕವನ್ನು 10 ನಿಮುಷದಲ್ಲಿ ಓದಿದಂತೆ ಭಾಸವಾಯಿತು.
ಕತಾರ್ ಕರ್ನಾಟಕ ಸಂಘದ ಅಧ್ಯಕ್ಷರಾದ ಎಚ್.ಕೆ. ಮಧು ರವರು ಸಭೆಯನ್ನುದ್ದೇಶಿಸಿ, ಗುರುರಾಜ್ ಕರಜಗಿಯವರ "ಕರುಣಾಳು ಬಾ ಬೆಳಕೆ" ಪುಸ್ತಕದಿಂದ ಒಂದು ಕಥೆಯನ್ನು ಉದಾಹರಣೆಯಾಗಿರಿಸಿಕೊಂಡು, ಪೂರ್ವಜರು ಹಾಗು ಇತಿಹಾಸ ರಚನಕಾರರ ನಡುವಿರುವ ವ್ಯತ್ಯಾಸವನ್ನು ತಿಳಿಹೇಳಿದರು. ಕಿಶೋರ್ ರವರು "ಸಮುದ್ರದಲ್ಲಿ ಶಕ್ತಿ" ವಿಷಯದ ಪ್ರಾಮುಖ್ಯತೆಯ ಬಗ್ಗೆ ಒಂದು ಕಿರು ಪರಿಚಯ ನೀಡಿದರು.

ಕಾರ್ಯಕ್ರಮದ ಮುಖ್ಯ ಭಾಗವಾದ ಪ್ರಶಸ್ತಿ ಪ್ರದಾನ ಸಮಾರಂಭ ಎಲ್ಲ ಕಾತುರತೆಗೆ ತೆರೆ ಎಳೆಯಿತು. 2017ನೇ ಸಾಲಿನ "ಅಭಿಯಂತರಶ್ರೀ" ಪ್ರಶಸ್ತಿಯನ್ನು ಕೆಳಗಿನ ಇಬ್ಬರು ಗಣ್ಯರಿಗೆ ನೀಡಿ ಗೌರವಿಸಲಾಯಿತು.
1. ನೀಲಾಂಶು ಡೇ, ಕತಾರ್ ಪೆಟ್ರೋಲಿಯಮ್ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗು ಭಾರತೀಯ ಕ್ರೀಡಾ ಕೇಂದ್ರದ ಪ್ರಸ್ತುತ ಅಧ್ಯಕ್ಷ.
2. ರಾಜೇಂದ್ರ ಶಿವಬಸಪ್ಪ ಜ್ಯೋತಿ, ಕತಾರ್ ಅನಿಲ ಸಂಸ್ಥೆಯ ಹಿರಿಯ ಅಧಿಕಾರಿ.
ಇವರುಗಳು ತಮ್ಮ ಅಭಿಪ್ರಾಯ, ಅನುಭವ, ಮನದ ಮಾತುಗಳನ್ನು ಹಂಚಿಕೊಂಡು ಕೇಳುಗರ ಮನತಣಿಸಿದರು.
ಕತಾರ್ ಕರ್ನಾಟಕ ಸಂಘದ ಹಿರಿಯ ಉಪಾಧ್ಯಕ್ಷರಾದ ವೆಂಕಟರಾಯರು ಸಕಲರಿಗೂ ಧನ್ಯವಾದಗಳನ್ನು ತಿಳಿಸಿ, ವಂದನಾರ್ಪಣೆಗಳನ್ನು ಸಲ್ಲಿಸಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು. ನಂತರ ಭಾವಚಿತ್ರಗಳನ್ನು ಸೆರೆಹಿಡಿದು ನೆನಪಿನಂಗಳದಲ್ಲಿಳಿಸಿಕೊಂಡು, ಲಘು ಉಪಹಾರ ಹಂಚಿ, ಅಂದಿನ ಸಂಜೆಯ ಆಚರಣೆಯನ್ನು ಪೂರ್ಣಗೊಳಿಸಲಾಯಿತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications