ಕಣ್ಣೀರಜ್ಜ ಮತ್ತು ಇತರ ಕಥೆಗಳು ಸಂಕಲನ ಲೋಕಾರ್ಪಣೆ
ಕನ್ನಡ ಬ್ಲಾಗ್ ಲೋಕದಲ್ಲಿ ತಮ್ಮ ನವಿರುಹಾಸ್ಯದಿಂದ ಕೂಡಿದ ಸಣ್ಣಕಥೆ, ಲೇಖನ, ಪ್ರಹಸನಗಳಿಂದ ಚಿರಪರಿಚಿತರಾಗಿರುವ ಗಿರೀಶ್ ಜಮದಗ್ನಿ ಅವರ 'ಕಣ್ಣೀರಜ್ಜ ಮತ್ತು ಇತರ ಕಥೆಗಳು' ಸಣ್ಣಕಥಾ ಸಂಕಲನ ನವೆಂಬರ್ 9, ಶನಿವಾರ ಸಿಂಗಪುರದಲ್ಲಿ ಲೋಕಾರ್ಪಣೆಗೊಂಡಿತು.
ಮಾನವ ಸಂಬಂಧಗಳು, ತುಮುಲಗಳು, ಗೊಂದಲಗಳು, ಅನಿಶ್ಚಿತತೆಗಳು ಮತ್ತು ವಿಷಮ ಸ್ಥಿತಿಯಲ್ಲಿ ಎದುರಿಸಬೇಕಾದ ವಿಪರೀತ ಪರಿಸ್ಥಿತಿಗಳನ್ನು ಸಮರ್ಥವಾಗಿ ಬಿಂಬಿಸುವ 13 ಕಥೆಗಳನ್ನು ಒಳಗೊಂಡ ಸಂಕಲನವನ್ನು ಕನ್ನಡದ ಖ್ಯಾತ ಕವಿ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಅವರು ಬಿಡುಗಡೆ ಮಾಡಿದರು.
ಸ್ಪ್ರಿಂಗ್ ಸಿಂಗಪುರ ಸಭಾಂಗಣದಲ್ಲಿ ಸಂಜೆ 5ರಿಂದ 9ರವರೆಗೆ ನಡೆದ ಗಾಯನ, ಹಾಸ್ಯ ಹಾಗೂ ಭಾವಗೀತೆಗಳ ಸಮ್ಮಿಲನ 'ಭಾವ ಸುಧೆ ದೀಪೋತ್ಸವ - 2013' ಕಾರ್ಯಕ್ರಮದಲ್ಲಿ ಈ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಖ್ಯಾತ ಚುಟುಕು ಕವಿ ದುಂಡಿರಾಜ್ ಮತ್ತು ಪ್ರೇಮ ಕವಿ ಬಿ.ಆರ್. ಲಕ್ಷ್ಮಣರಾವ್ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉಪಾಸನಾ ಮೋಹನ್ ಅವರ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗಿರೀಶ್ ಜಮದಗ್ನಿ ಕುರಿತು : ಮೂಲತಃ ಹಾಸನದವರಾಗಿರುವ ಗಿರೀಶ್ ಜಮದಗ್ನಿ ಅವರು ತೈಲ ಉದ್ಧರಣ ಮತ್ತು ಶುದ್ಧೀಕರಣ ಕ್ಷೇತ್ರದಲ್ಲಿ ಇನ್ಸ್ಟ್ರುಮೆಂಟೇಷನ್ ವಿಭಾಗದಲ್ಲಿ ಪರಿಣತಿಯನ್ನು ಪಡೆದಿದ್ದು, ಸಿಂಗಪುರದಲ್ಲಿ 2004ರಿಂದ ವಾಸಿಸುತ್ತಿದ್ದಾರೆ.
ಇನ್ಸ್ಟ್ರುಮೆಂಟೇಷನ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರುವ ಅವರು, ಮುಂಬೈನಲ್ಲಿ 8 ವರ್ಷಗಳ ಕಾಲ ದುಡಿದು, ನಂತರ ಬೆಂಗಳೂರಿನಲ್ಲಿ ಕೂಡ ಕೆಲ ಕಾಲ ಇದ್ದು, ಆಮೇಲೆ ಸೀಮೋಲ್ಲಂಘನ ಮಾಡಿ ಸಿಂಗಪುರಕ್ಕೆ ತೆರಳಿದರು.
ಕನ್ನಡ ಸಂಘ (ಸಿಂಗಪುರ)ದ ಮಾಸಪತ್ರಿಕೆ "ಸಿಂಚನ"ದ ರೂವಾರಿಗಳಲ್ಲೊಬ್ಬರಾದ ಇವರು ಪ್ರಸ್ತುತ ಅದರ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡ ಸಂಘ(ಸಿಂಗಪುರ) ಆಯೋಜಿಸುವ ಹಲವಾರು ಕನ್ನಡಪರ ಕಾರ್ಯಗಳಲ್ಲಿ ಸಕ್ರೀಯವಾಗಿ ತೊಡಗಿಸುಕೊಳ್ಳುತ್ತಾರೆ.
ಸಣ್ಣಕಥೆಗಳಲ್ಲದೆ, ಕವನ, ಪ್ರಹಸನ, ಭಕ್ತಿಗೀತೆ, ನಾಟಕ, ಲಘು ಲೇಖನಗಳನ್ನು ಗಿರೀಶ್ ಜಮದಗ್ನಿ ಬರೆದಿದ್ದಾರೆ. ಒನ್ಇಂಡಿಯಾ ಕನ್ನಡದಲ್ಲಿ ಗಿರೀಶ್ ಅವರ 'ಅಪಶಕುನಿಗಳು', 'ಹಂಡೆಯ ಹಗರಣ' ಹಾಸ್ಯ ಲೇಖನ ಸೇರಿದಂತೆ ಹಲವಾರು ಲೇಖನಗಳು ಪ್ರಕಟವಾಗಿವೆ. ಬರವಣಿಗೆಯ ಜೊತೆಗೆ ಫೋಟೋಗ್ರಫಿ, ಶಾಸ್ತ್ರೀಯ ಸಂಗೀತ, ನಾಟಕ ರಚನೆ, ನಟನೆ, ನಿರ್ದೇಶನದಲ್ಲಿಯೂ ತೊಡಗಿಕೊಂಡಿದ್ದಾರೆ.
ಪುಸ್ತಕ ಎಲ್ಲಿ ಲಭ್ಯ? : ಬೆಂಗಳೂರು ಜಯನಗರ 4ನೇ ಬಡಾವಣೆಯಲ್ಲಿರುವ 'ಟೋಟಲ್ ಕನ್ನಡ' ಪುಸ್ತಕ ಮಳಿಗೆಯಲ್ಲಿ 'ಕಣ್ಣೀರಜ್ಜ ಮತ್ತು ಇತರ ಕಥೆಗಳು' ಲಭ್ಯ. ವಿಳಾಸ : ನಂ.638, 31ನೇ ಅಡ್ಡರಸ್ತೆ, 10ನೇ ಬಿ ಮುಖ್ಯರಸ್ತೆ, ಜಯನಗರ 4ನೇ ಬಡಾವಣೆ, ಬೆಂಗಳೂರು - 560 011. ವೆಬ್ ಸೈಟ್ : www.totalkannada.com. ಇದರ ಬೆಲೆ ಕೇವಲ 125 ರು.ಗಳು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications