ಶಾರ್ಜಾ ಮಣ್ಣಿನಲ್ಲಿ ಕನ್ನಡ ಕಲರವ: ಅದ್ದೂರಿ ರಾಜ್ಯೋತ್ಸವ ವೈಭವ
ನವೆಂಬರ್ ತಿಂಗಳು ಬಂತೆಂದರೆ ಸಾಕು ತಿಂಗಳಿಡೀ ಯುಎಇಯಲ್ಲಿ ನೆಲೆಸಿರುವ ಕನ್ನಡಿಗರಿಗೆ ಹಬ್ಬ. ಕನ್ನಡದ ಹಬ್ಬ. ತಾಯಿ ಭುವನೇಶ್ವರಿಯ ನೆನೆಯುವ ಹಬ್ಬ. ಕನ್ನಡ ಕಲರವದ ಝೇಂಕಾರ. ಹೌದು ಇದಕ್ಕೆ ಸಾಕ್ಷಿಯಾದದ್ದು ಶುಕ್ರವಾರ (ನ17) ರಂದು ನಡೆದ ಶಾರ್ಜಾ ಕರ್ನಾಟಕ ಸಂಘದ 62ನೆಯ ರಾಜ್ಯೋತ್ಸವ ಕಾರ್ಯಕ್ರಮ ಹಾಗು 15ನೆಯ ವಾರ್ಷಿಕೋತ್ಸವ ಸಮಾರಂಭ.
ಶುಕ್ರವಾರ ಸಂಜೆ 4:00 ರಿಂದ ಶಾರ್ಜಾ ಇಂಡಿಯನ್ ಅಸೋಸಿಯೇಷನ್ ಭವ್ಯ ಸಭಾಂಗಣದಲ್ಲಿ ಕನ್ನಡಿಗರ ಚಿಲಿಪಿಲಿಯೊಂದಿಗೆ ಕರ್ನಾಟಕ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಗು ಸದಸ್ಯರೊಂದಿಗೆ ಮಹಾ ಪೋಷಕರಾದ ಮಾರ್ಕ್ ಡೆನಿಸ್ ಡಿಸೋಜಾ ಇವರು ಕನ್ನಡ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಂ ಈ ಮೂಳೂರು ಶುಭಾಶಯಗಳನ್ನು ಕೋರಿದರು.
ಸ್ವಾಗತ ನೃತ್ಯದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಂಡವು. ಊರಿನಿಂದ ಬಂದ ಗಾಯಕಿಯರು ಅನಿವಾಸಿ ಕನ್ನಡಿಗ ಗಾಯಕ ಗಾಯಕಿಯರು ತಮ್ಮ ಸುಶ್ರಾವ್ಯ ಕಂಠದಿಂದ ಅದ್ಭುತವಾಗಿ ಹಾಡಿ ಸಭಿಕರನ್ನು ರಂಜಿಸಿದರು .
ನಂತರ ನಡೆದ ನೃತ್ಯ ಸ್ಪರ್ಧೆಯು ಕನ್ನಡಿಗರಿಂದ ಕನ್ನಡಿಗರಿಗಾಗಿ ಎಂಬ ಧ್ಯೇಯ ವಾಕ್ಯಕ್ಕೆ ಸ್ಪೂರ್ತಿಯಾಗಿತ್ತು. ಅತ್ಯುತ್ತಮ ಸ್ಪರ್ಧೆ ನೀಡಿದ್ದ ಎಲ್ಲ ತಂಡಗಳು ಪ್ರೇಕ್ಷಕರನ್ನು ಮೂಖವಿಸ್ಮಿತರನ್ನಾಗಿ ಮಾಡಿದ್ದು ಮಾತ್ರವಲ್ಲ ನಿರ್ಣಾಯಕರನ್ನು ಪೇಚಿಗೆ ಸಿಲುಕಿಸಿದ್ದರು.
ಸಂಘದ ಅಧ್ಯಕ್ಷರಾದ ಸುಗಂಧರಾಜ ಬೇಕಲ್ ಭವ್ಯ ಮೆರವಣಿಗೆಯಲ್ಲಿ ಗಣ್ಯರನ್ನು ಬರಮಾಡಿಕೊಂಡು ವೇದಿಕೆಗೆ ಸ್ವಾಗತಿಸಿ ಸಭಾ ಕಾರ್ಯಕ್ರಮಕ್ಕೆ ಮುನ್ನುಡಿ ಇಟ್ಟರು. ಯುಎಇಯಲ್ಲಿ ಕನ್ನಡ ಭಾಷೆಗೆ ಗಣನೀಯ ಸೇವೆ ಸಲ್ಲಿಸಿರುವವರಿಗಾಗಿ ಪ್ರತಿ ವರುಷ ಈ ಸಂಘ ನೀಡುವ "ಮಯೂರ ಪ್ರಶಸ್ತಿ"ಯನ್ನು, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಇವರಿಗೆ ನೀಡಲಾಯಿತು.

ಅತಿಥಿಗಳಾಗಿ ಆಗಮಿಸಿದ್ದ ಮಾನ್ಯ ಸಚಿವರಾದ ಯು ಟಿ ಖಾದರ್
ಈ ಸಂದರ್ಭದಲ್ಲಿ ಊರಿನಿಂದ ಅತಿಥಿಗಳಾಗಿ ಆಗಮಿಸಿದ್ದ ಮಾನ್ಯ ಸಚಿವರಾದ ಯು ಟಿ ಖಾದರ್ ಹಾಗು ಮುಖ್ಯ ಅತಿಥಿಗಳಾಗಿ ಆಹ್ವಾನಿತರಾಗಿದ್ದ ಖ್ಯಾತ ಉದ್ಯಮಿ ಡಾ. ಬಿ. ಆರ್ ಶೆಟ್ಟಿ ಪ್ರಶಸ್ತಿಯನ್ನು ಸರ್ವೋತ್ತಮ ಶೆಟ್ಟಿಯವರಿಗೆ ಪ್ರಧಾನ ಮಾಡಿದರು. ಸಭಾಕಾರ್ಯಕ್ರಮದಲ್ಲಿ ಪೂರ್ವ ಮಯೂರ ಪ್ರಶಸ್ತಿ ಪುರಸ್ಕೃತರನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು ಹಾಗು ಅವರ ಸೇವೆಯನ್ನು ನೆನೆಯಲಾಯಿತು.

ಶೇಖರ್ ಶೆಟ್ಟಿಗಾರ್ ಕಿನ್ನಿಗೋಳಿ ಇವರಿಗೆ "ಯಕ್ಷ ಮಯೂರ" ಬಿರುದು
ಖ್ಯಾತ ಯಕ್ಷಗಾನ ಕಲಾವಿದರಾದ ಶೇಖರ್ ಡಿ. ಶೆಟ್ಟಿಗಾರ್ ಕಿನ್ನಿಗೋಳಿ ಇವರಿಗೆ "ಯಕ್ಷ ಮಯೂರ" ಬಿರುದನ್ನಿತ್ತು ಸನ್ಮಾನಿಸಲಾಯಿತು. ಈ ತಿಂಗಳು ಇವರಿಗೆ ಲಭಿಸುವ ಎರಡನೆಯ ಪ್ರಶಸ್ತಿಯು ಇದಾಗಿದೆ. ಈ ಮೊದಲು ನವೆಂಬರ್ 3ರಂದು ಅಬುಧಾಬಿ ಕರ್ನಾಟಕ ಸಂಘ ನೀಡುವ ಪ್ರತಿಷ್ಠಿತ "ದ.ರಾ,ಬೆಂದ್ರೆ " ಪ್ರಶಸ್ತಿ ನೀಡಿ ಗೌರವಿಸಿತ್ತು. ಮರಳುಗಾಡಿನಲ್ಲಿ ಇವರು ಯಕ್ಷಗಾನ ಸೇವೆಗೆ ಸಲ್ಲಿಸುವ ನಿಸ್ವಾರ್ಥ ಸೇವೆಗೆ ಲಭಿಸಿದ ಪ್ರಶಸ್ತಿಗಳಿವು.

ಮಹಾಪೋಷಕರನ್ನು, ಪ್ರಾಯೋಜಕರಿಗೆ ಸನ್ಮಾನ
ಇದೇ ಹೊತ್ತಿನಲ್ಲಿ ಈ ಕಾರ್ಯಕ್ರಮಕ್ಕೆ ನಿಂತ ಮಹಾಪೋಷಕರನ್ನು, ಪ್ರಾಯೋಜಕರನ್ನು, ಬೆಂಬಲವಾಗಿ ನಿಂತ ಮಹನೀಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದುದ್ದಕ್ಕೂ ದುಬೈಯಲ್ಲಿ ನೆಲೆಸಿರುವ ಕವಿ ಇರ್ಷಾದ್ ಮೂಡಬಿದಿರೆ ಇವರ ಚುಟುಕುಗಳನ್ನು ಓದಿ ವಾಚಿಸಿ ಗಣೇಶ್ ರೈ ಇವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

"ದಾಶರಥಿ ದರ್ಶನ" ಯಕ್ಷಗಾನ ಪ್ರದರ್ಶನ
ತದನಂತರ ಬಹುನಿರೀಕ್ಷೆಯ ಶೇಖರ್ ಡಿ. ಶೆಟ್ಟಿಗಾರ್ ಕಿನ್ನಿಗೋಳಿ ಇವರ ನಿರ್ದೇಶನದಲ್ಲಿ ಯಕ್ಷಮಿತ್ರರು ದುಬಾಯಿ ಇದರ ಬಾಲ ಕಲಾವಿದರು ನಡೆಸಿಕೊಟ್ಟ "ದಾಶರಥಿ ದರ್ಶನ" ಯಕ್ಷಗಾನ ಅತ್ಯದ್ಭುತವಾಗಿ ಪ್ರದರ್ಶಿಸಲ್ಪಟ್ಟಿತು. ಊರಿನಿಂದ ಏಳು ಕಡಲಾಚೆ ಇದ್ದರೂ ನಾವು ಸಹ ಯಕ್ಷಗಾನದಲ್ಲಿ ಕಡಿಮೆ ಏನಲ್ಲ ಎಂದು ಈ ಬಾಲಕಲಾವಿದರು ರಂಗದಲ್ಲಿ ತೋರಿಸಿಕೊಟ್ಟರು.

ಬಿ.ಆರ್ ಶೆಟ್ಟಿ ಹಾಗು ಯು. ಟಿ ಖಾದರ್ ಅವರಿಗೆ ನೆನಪಿನ ಕಾಣಿಕೆ
ಕಾರ್ಯಕ್ರಮದ ಕೊನೆಯ ಹಂತದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಡಾ. ಬಿ.ಆರ್ ಶೆಟ್ಟಿ ಹಾಗು ಯು. ಟಿ ಖಾದರ್ ಇವರನ್ನು ನೆನಪಿನ ಕಾಣಿಕೆಗಳನ್ನಿತ್ತು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ಕನ್ನಡ ಕಲಾವಿದರಿಗೆ ಸ್ಮರಣಿಕೆಗಳನ್ನು ನೀಡಲಾಯಿತು.ತದನಂತರ ನೃತ್ಯ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಅದ್ದೂರಿ ಅಮೋಘ ರಾಜ್ಯೋತ್ಸವ ಕಾರ್ಯಕ್ರಮ
ಕಾರ್ಯಕ್ರಮವನ್ನು ಆರತಿ ಅಡಿಗ ಹಾಗು ಊರಿನಿಂದ ಆಗಮಿಸಿದ್ದ ಯೋಗಿ ಮಿರ್ಜಾನ್ ಇವರು ಅಚ್ಚ ಕನ್ನಡದಲ್ಲಿ ಸುಲಲಿತ ಸುಂದರ ಪಂಕ್ತಿಗಳ ಕನ್ನಡ ಭಾಷೆಯ ಸ್ಪಷ್ಟ ಉಚ್ಛಾರದಲ್ಲಿ ಅದ್ಭುತವಾಗಿ ನಿರೂಪಿಸಿದರು. ಒಂದು ಅತ್ಯುತ್ತಮ ಸರಳ ಸುಂದರ ವಿಜೃಂಭಣೆಯ ಅದ್ದೂರಿ ಅಮೋಘ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಇನ್ನು ಒಂದು ವರುಷ ಕಾಯಬೇಕಿದೆ ಎಂದು ತುಂಬಿ ತುಳುಕುತ್ತಿದ್ದ ಪ್ರೇಕ್ಷಕರು ತಡರಾತ್ರಿಯವರೆಗೂ ನಡೆದ ಕಾರ್ಯಕ್ರಮದ ಝಲಕ್ ಅನ್ನು ಮನಸ್ಸಿನಲ್ಲೇ ಮೆಲ್ಲುತ್ತಾ ತಮ್ಮ ತಮ್ಮ ಮನೆಗೆ ನಡೆದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications