ನ್ಯೂಜೆರ್ಸಿ ವೃಂದಾವನದಲ್ಲಿ ವಾರ್ಷಿಕೋತ್ಸವ, ರಾಯರ ವರ್ಧಂತಿ
ನ್ಯೂಜೆರ್ಸಿನಯ ಎಡಿಸನ್ ನಲ್ಲಿರುವ ಶ್ರೀ ಕೃಷ್ಣ ವೃಂದಾವನ ಸಂಸ್ಥೆಯ 17ನೇ ವಾರ್ಷಿಕೋತ್ಸವ ಮತ್ತು ಶ್ರೀ ರಾಘವೇಂದ್ರ ವರ್ಧಂತಿ (ಜನುಮದಿನ) ಉತ್ಸವವನ್ನು ಮಾರ್ಚ್ 16ರಂದು ಶನಿವಾರದಂದು ಆಚರಿಸಲು ನಿರ್ಧರಿಸಿದೆ.
ಉಡುಪಿಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ಈ ಕಾರ್ಯಕ್ರಮವನ್ನು ಶ್ರೀ ಕೃಷ್ಣ ವೃಂದಾವನ ಆಯೋಜಿಸಿದ್ದು, ವಾರ್ಷಿಕೋತ್ಸವದ ಅಂಗವಾಗಿ ಹಲವಾರು ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಅಂದು ಬೆಳಿಗ್ಗೆ 6.30 ಗಂಟೆಗೆ ಪುಣ್ಯಾಹ ವಚನ, ಪವಮಾನ ಹೋಮ, 108 ಕಳಶ ಪ್ರತಿಷ್ಠಾಪನೆ, ವೇದ ಪಾರಾಯಣ ನಡೆಯಲಿದೆ. 7.30ಕ್ಕೆ ಕೃಷ್ಣ ಮಂತ್ರ ಹೋಮ ಜರುಗಲಿದೆ. ನಂತರ ಪಂಚಾಮೃತ ಅಭಿಷೇಕ, ಮಹಾಪೂಜೆ ನಡೆಯಲಿದ್ದು, ಹನ್ನೆರಡು ಗಂಟೆಗೆ ರಾಘವೇಂದ್ರ ಅಷ್ಟೋತ್ತರ ಮತ್ತು ಮಹಾ ಮಂಗಳಾರತಿ ನೆರವೇರಲಿದೆ.

ಇವು ಮಧ್ಯಾಹ್ನದವರೆಗಿನ ಕಾರ್ಯಕ್ರಮಗಳಾದರೆ, ಸಂಜೆ 6 ಗಂಟೆಯಿಂದ ಒಂದೂವರೆ ಗಂಟೆಗಳ ಕಾಲ ಭಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಂತರ ರಂಗ ಪೂಜೆ, ಪಲ್ಲಕ್ಕಿ ಉತ್ಸವ, ರಥೋತ್ಸವ ಮತ್ತು ಅಷ್ಟಾವಧಾನ ಸೇವೆ ನಡೆಯಲಿದೆ. 8 ಗಂಟೆ ಪ್ರಸಾದವನ್ನು ವಿನಿಯೋಗಿಸಲಾಗುವುದು.
ಮಾರ್ಚ್ ತಿಂಗಳಲ್ಲಿ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಶ್ರೀ ಕೃಷ್ಣ ವೃಂದಾವನ ಹಮ್ಮಿಕೊಂಡಿದೆ. ಮಾರ್ಚ್ 17ರಂದು ಭಾನುವಾರ ಸಂಜೆ 6ರಿಂದ 7.30ರವರೆಗೆ 'ನಾದೋಪಾಸನ' ಕಾರ್ಯಕ್ರಮದಲ್ಲಿ ಅನಿರುದ್ಧ ಖಂಡ್ರಿಕಾ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ಇರಲಿದೆ.
ಅದರ ಮುಂದಿನ ಭಾನುವಾರ, ಮಾರ್ಚ್ 24ರಂದು 'ನಾದೋಪಾಸನ' ಕಾರ್ಯಕ್ರಮದಲ್ಲಿ ಅಭಿರಾಮ್ ತ್ಯಾಗರಾಜನ್ ಮತ್ತು ತಂಡದವರಿಂದ ವಯೋಲಿನ್ ಸಂಗೀತ ಸುಧೆ ಹರಿಯಲಿದೆ. ಮಾರ್ಚ್ 31ರಂದು ಭಾನುವಾರ 'ನಾದೋಪಾಸನ' ಕಾರ್ಯಕ್ರಮದಲ್ಲಿ ವೀಣಾ ಮೋಹನ್ ಮತ್ತು ತಂಡದಿಂದ ಹರಿಕಥೆ (ಗಜೇಂದ್ರ ಮೋಕ್ಷ) ಇರಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications