ಕ್ಯಾಲಿಫೋರ್ನಿಯಾದಲ್ಲಿ ಜೂ.27ರಂದು 'ಹರಿದಾಸ ದಿನ'
ದಾಸನಾಗು ವಿಶೇಷನಾಗು.. ಎನ್ನುತ್ತಾ ಭಕ್ತಿಲೋಕಕ್ಕೆ ಸಾವಿರಾರು ಪದ್ಯ, ಗದ್ಯಗಳ ಸಾಹಿತ್ಯ ಮತ್ತು ಸಂಗೀತ ರಚನೆಗಳನ್ನು ನೀಡಿದ ದಾಸವರೇಣ್ಯರನ್ನು ಸ್ಮರಿಸುವ ನಿಟ್ಟಿನಲ್ಲಿ ಹರಿದಾಸ-ದಿನ, ದಾಸ-ದಿನವನ್ನು ಕಳೆದ ಎರಡು ದಶಕಗಳಿಂದ ಅಮೆರಿಕಾದ ಹಲವಾರು ಕಡೆ ಏರ್ಪಡಿಸಲಾಗುತ್ತಿದೆ. ಅದೇ ರೀತಿ ಉತ್ತರ ಕ್ಯಾಲಿಫೋರ್ನಿಯಾದ ಬೇ ಏರಿಯಾದಲ್ಲೂ "ಹಾರಿದಾಸ ದಿನ" ಕಾರ್ಯಕ್ರಮ ಆಚರಿಸಲಾಗುತ್ತದೆ.
ಪ್ರತಿ ವರ್ಷವೂ ವಿಶಿಷ್ಟವಾಗಿ, ದಿನವಿಡೀ ಆಯೋಜಿಸಲಾಗುವ ಈ ಕಾರ್ಯಕ್ರಮದಲ್ಲಿ ಬೇ ಏರಿಯಾದ ಹಲವಾರು ಕಲಾವಿದರು, ಸಂಸ್ಥೆಗಳು ಪಾಲ್ಗೊಳ್ಳುತ್ತಾರೆ. ಗೀತ ವಿಮರ್ಶೆ, ಶಾಸ್ತ್ರೀಯ ಸಂಗೀತ, ನೃತ್ಯ ಮತ್ತು ಹಲವಾರು ಪಾಠ-ಪ್ರವಚನಗಳ ಮೂಲಕ ಭಕ್ತಿ ಜಗತ್ತಿಗೆ ಅಪಾರ ಕೊಡುಗೆ ನೀಡಿದ ಹರಿದಾಸರನ್ನ ಸ್ಮರಿಸಲಾಗುತ್ತದೆ. ಭಕ್ತಿ ಸಂಗೀತದ ಅನುಯಾಯಿಗಳಿಗೆ ಇದೊಂದು ಸಂಭ್ರಮದ ದಿನ.
ಇದೆ ಜೂನ್ ತಿಂಗಳ 27, ಶನಿವಾರದಂದು ಉತ್ತರ ಕ್ಯಾಲಿಫೋರ್ನಿಯಾ ಕನ್ನಡ ಕೂಟ (ಕೆ.ಕೆ.ಎನ್.ಸಿ) ಹಾಗೂ ಹಿಂದೂ ಕಮ್ಯೂನಿಟಿ ಮತ್ತು ಕಲ್ಚರಲ್ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ, ಲಿವರ್ಮೊರಿನ ಶಿವ-ವಿಷ್ಣು ದೇವಸ್ಥಾನದಲ್ಲಿ ನಡೆಯಲಿರುವ "ಹರಿದಾಸ ದಿನ" ಮಹೋತ್ಸವಕ್ಕೆ ಹೆಸರಾಂತ ಕರ್ನಾಟಕ ಸಂಗೀತದ ವಿದ್ವಾಂಸರಾದ ಆರ್. ಕೆ ಪದ್ಮನಾಭರವರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಗಾನ ಕಲಾಭೂಷಣರೆಂದು ಖ್ಯಾತಿ ಪಡೆದಿರುವ ಪದ್ಮನಾಭರವರು ಕಂಚಿನ ಕಂಠದ ಗಾಯಕರು, ಕರ್ನಾಟಕ ಸಂಗೀತದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದು, ಸುಮಾರು 300ಕ್ಕೂ ಹೆಚ್ಚು ಕೃತಿಗಳನ್ನ ರಚಿಸಿ ಅವುಗಳ ಸಂಗೀತ ಸಂಯೋಜನೆ ಮತ್ತು ನಾಟಕಕ್ಕೆ ರೂಪಾಂತರ ಮಾಡುವುದರ ಮೂಲಕ ಅಸಮಾನ್ಯ ಸಾಧನೆ ಗೈದಿದ್ದಾರೆ.
ಗುರು-ಶಿಷ್ಯ ಪರಂಪರೆಯನ್ನು ಮುಂದುವರೆಸುತ್ತ ಸಾವಿರಾರು ಸಂಗೀತ ವಿದ್ಯಾರ್ಥಿಗಳಿಗೆ ಸಂಗೀತ ಗುರುಗಳಾಗಿ, ದಾಸ ಸಾಹಿತ್ಯದ ಗಾರುಡಿಗರನ್ನು ತಯಾರಿ ಮಾಡುತ್ತಿರುವ ಹೆಗ್ಗಳಿಕೆ ಇವರದು. ಸಂಗೀತ ಮತ್ತು ದಾಸ ಸಾಹಿತ್ಯ ಕ್ಷೇತ್ರಕ್ಕೆ ಅಮೋಘವಾದ ಕೊಡುಗೆ ನೀಡಿದ ಪದ್ಮನಾಭರವರು ದಾಸ ಉತ್ಸವದಲ್ಲಿ ಭಾಗವಹಿಸುತ್ತಿರುವುದು ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿದಂತಾಗಿದೆ. ಈ ಕಾರ್ಯಕ್ರಮದ ಜೊತೆಗೆ ಸ್ಥಳೀಯ ಸಂಗೀತ ಆಸಕ್ತರಿಗೆ ಕಾರ್ಯಗಾರ ಕೂಡ ನಡೆಸಿಕೊಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಪುಷ್ಪ ಸುಬ್ಬರಾವ್ 6508041066, ಸುದತ್ತ ಗೌತಮ್ 8314282830
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications