ಐರಿಶ್ ಕನ್ನಡಿಗರ ಸಂಗೀತ ಸಂಜೆ 'ಇಂಚರ'
ಬೆಂಗಳೂರಿನಿಂದ ಬಂದಿದ್ದ ಆ ಇಬ್ಬರು ಸಂಗೀತಗಾರರು ಒಂದಾದಮೇಲೊಂದಂತೆ ಕನ್ನಡ ಮತ್ತು ಹಿಂದಿ ಚಿತ್ರರಂಗದ ಅದ್ಭುತ ಗೀತೆಗಳನ್ನು ಹಾಡುತ್ತಿದ್ದರೆ, ಐರಿಶ್ ಕನ್ನಡಿಗರಲ್ಲಿ ಉತ್ಸಾಹದ ಬುಗ್ಗೆ ಉಕ್ಕಿ ಹರಿದಿತ್ತು. ಪ್ರತಿಯೊಂದು ಹಾಡಿಗೂ ಲಯಬದ್ಧವಾಗಿ ಕುಣಿಯುತ್ತಿದ್ದರು, ಜೊತೆಯಾಗಿ ಹಾಡುತ್ತಿದ್ದರು.
ಮೇ ತಿಂಗಳಲ್ಲಿ ಐರಿಶ್ ಕನ್ನಡಿಗರ ಸಂಘ ಆಯೋಜಿಸಿದ್ದ 'ಇಂಚರ' ಸಂಗೀತ ಕಾರ್ಯಕ್ರಮ ಕನ್ನಡಿಗರಲ್ಲಿ ನವೋತ್ಸಾಹ ತುಂಬಿತು. ರಿಪಬ್ಲಿಕ್ ಆಫ್ ಐರ್ಲೆಂಡ್ನ ಡಬ್ಲಿನ್ ನಲ್ಲಿರುವ ವಾಕಿನ್ಸ್ಟೌನ್ ಸ್ಪೋರ್ಟ್ಸ್ ಮತ್ತು ಅಥ್ಲೆಟಿಕ್ ಅಸೋಸಿಯೇಷನ್ ನ ಮೋರನ್ ಕಮ್ಯೂನಿಟಿ ಹಾಲ್ನಲ್ಲಿ 'ಇಂಚರ' ಯಶಸ್ಸಿನ ಹಾಡು ಹಾಡಿತು.

ಬೆಂಗಳೂರಿನಿಂದ ಬಂದಿದ್ದ ಸಂಗೀತಗಾರರಾದ ಸಂಗೀತಾ ರಾಜೀವ್ ಮತ್ತು ಸಾಗರ್ ಗುರುರಾಜ್ ಅವರು ಕೇಳುಗರನ್ನು ಮೋಡಿ ಮಾಡಿದರು. ಮಾಧುರ್ಯ ತುಂಬಿದ ಹೊಸ ಮತ್ತು ಹಳೆ ಹಾಡುಗಳು ಕೇಳುಗರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದವು, ದೈನಂದಿನ ಜೀವನವನ್ನು ಮರೆಸಿ ಹೊಸ ಲೋಕಕ್ಕೆ ಕೊಂಡೊಯ್ದವು.
ಡಬ್ಲಿನ್ ಮತ್ತು ಸುತ್ತಲಿನ ನಗರಗಳಿಂದ 100ಕ್ಕೂ ಹೆಚ್ಚು ಕನ್ನಡ ಕುಟುಂಬಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದವು. ಹಿರಿಯರು, ಮಧ್ಯ ವಯಸ್ಕರು, ಮಕ್ಕಳು ಸಖತ್ ಎಂಜಾಯ್ ಮಾಡಿದರು. ಕರ್ನಾಟಕದ ಸಂಸ್ಕೃತಿಯನ್ನು ಉಳಿಸುವ ಮತ್ತು ಯುವಜನತೆಯಲ್ಲಿ ಬಿತ್ತುವ ಉದ್ದೇಶದಿಂದ ಕಳೆದ 8 ವರ್ಷಗಳಿಂದ ಐರಿಶ್ ಕನ್ನಡಿಗರ ಸಂಘ ಪ್ರತಿವರ್ಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುತ್ತಿದೆ.

ಸಂಗೀತಾ ರಾಜೀವ್ ಮತ್ತು ಸಾಗರ್ ಗುರುರಾಜ್ ಅವರು ಡಬ್ಲಿನ್ ನಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಡುವ ಮುನ್ನ ಲಂಡನ್ ಮತ್ತು ಮ್ಯಾಂಚೆಸ್ಟರ್ ನಲ್ಲಿಯೂ ಸಂಗೀತ ಸುಧೆ ಹರಿಸಿದ್ದರು. ಅಂದ ಹಾಗೆ, ಈ ವರ್ಷದ ಸೂಪರ್ ಹಿಟ್ ಸಿನೆಮಾ ಎನಿಸಿರುವ, ಶ್ರೀಮುರುಳಿ ಅಭಿನಯಿಸಿರುವ 'ಉಗ್ರಂ' ಚಲನಚಿತ್ರ ಜೂನ್ 8ರಂದು ಡಬ್ಲಿನ್ ನಲ್ಲಿ ಪ್ರದರ್ಶಿಸಲಾಯಿತು.

-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications