ಕೊಡಗಿಗೆ ದೇಣಿಗೆ ನೀಡಿ ಹೃದಯವಂತಿಕೆ ಮೆರೆದ ಕತಾರ್ ಭಾರತೀಯರು
ಪ್ರವಾಹದಿಂದ ಇನ್ನೂ ಸಂಪೂರ್ಣವಾಗಿ ಹೊರಬರದ ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯ ಪ್ರವಾಹ ಪೀಡಿತರಿಗೆ ಧನ ಸಂಗ್ರಹಣೆ ಮಾಡಿ ದೇಣಿಗೆ ನೀಡುವ ಮೂಲಕ ಕತಾರ್ ದೇಶದಲ್ಲಿರುವ ಭಾರತದ ರಾಜ್ಯಗಳ ಸಂಘ ಸಂಸ್ಥೆಗಳು ಹೃದಯವಂತಿಕೆ ಮೆರೆದಿದ್ದಾರೆ.
ಭಾರತೀಯ ದೂತಾವಾಸದಡಿಯಲ್ಲಿ ಕಾರ್ಯವಹಿಸುತ್ತಿರುವ ಭಾರತೀಯ ಸಮುದಾಯದ ಸೇವಾ ಸಂಸ್ಥೆಯ ಅಡಿಯಲ್ಲಿ (ಇಂಡಿಯನ್ ಕಮ್ಯೂನಿಟಿ ಬೇನೆವೋಲೆಂಟ್ ಫೋರಮ್-ICBF) ಈ ದೇಣಿಗೆಯನ್ನು ಸಂಗ್ರಹಿಸಲಾಗಿದೆ.
ಭಾರತೀಯ ರಾಯಭಾರಿಯಾದ ಪಿ.ಕುಮಾರನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಒಂದು ಅಭಿಯಾನಕ್ಕೆ ಭಾರತದ ನಾಗರೀಕರೆಲ್ಲ ಉದಾರವಾಗಿ ಸಹಾಯ ಹಸ್ತ ಚಾಚಿದ್ದಾರೆ.

ನವೆಂಬರ್ 24ನೇ ತಾರೀಖಿನಂದು ಕತಾರ್ ದೇಶದಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರತಿನಿಧಿಗಳು ಕರ್ನಾಟಕದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಹದಿನೈದು ಲಕ್ಷ ರುಪಾಯಿಗಳ ಚೆಕ್ಕನ್ನು ಮುಖ್್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.
ICBF ಕಾರ್ಯದರ್ಶಿಯಾದ ಮಹೇಶಗೌಡ ಅವರ ಮುಂದಾಳತ್ವದಲ್ಲಿ, ಮಿಲನ್ ಅರುಣ್, ಅಧ್ಯಕ್ಷರು ಭಾರತೀಯ ಸಾಂಸ್ಕೃತಿಕ ಸಂಸ್ಥೆ, ICBF ಮತ್ತು ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರೂ ಆದ ಅರವಿಂದ್ ಪಾಟೀಲ್, ಕರ್ನಾಟಕ ಸಂಘದ ಉಪಾಧ್ಯಕ್ಷರಾದ ರವಿ ಶೆಟ್ಟಿ ಹಾಗೂ ಕರ್ನಾಟಕ ಸಂಘ ಕತಾರ್ ಮಾಜಿ ಉಪಾಧ್ಯಕ್ಷರೂ ಹಾಗೂ ಕತಾರ್ ದಲ್ಲಿ ಕನ್ನಡ ಚಲನಚಿತ್ರಗಳ ವಿತರಕರಾದ ಸುಬ್ರಮಣ್ಯ ಹೆಬ್ಬಾಗಿಲು ಮುಂತಾದವರು ಭಾಗಿಯಾಗಿದ್ದರು.
ದೇಣಿಗೆಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕತಾರ್ ಭಾರತೀಯರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತ, ಅವರು ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಅಲ್ಲದೆ ಕರ್ನಾಟಕದಲ್ಲಿ ಆದ ಮೂರು ದುರ್ಘಟನೆಗಳ ಕಾರಣದಿಂದಾಗಿ ನಿಗದಿತ ಸಮಯದಲ್ಲಿ ಭೇಟಿಯಾಗಲು ಸಾಧ್ಯವಾಗದಕ್ಕೆ ವಿಷಾದ ವ್ಯಕ್ತಪಡಿಸಿದರು.

ಕತಾರ್ ಪ್ರತಿನಿಧಿಗಳು ಮಾಜಿ ಸಚಿವ ಹಾಗೂ ಜನಪ್ರಿಯ ನಟ ಅಂಬರೀಷ್ ಅವರ ಅಕಾಲಿಕ ಮರಣ, ಬಸ್ ದುರ್ಘಟನೆ ಮತ್ತು ಹಿರಿಯ ನಾಯಕ ಜಾಫರ್ ಷರೀಫ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications