ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗಿಗೆ ದೇಣಿಗೆ ನೀಡಿ ಹೃದಯವಂತಿಕೆ ಮೆರೆದ ಕತಾರ್ ಭಾರತೀಯರು

|
Google Oneindia Kannada News

ಪ್ರವಾಹದಿಂದ ಇನ್ನೂ ಸಂಪೂರ್ಣವಾಗಿ ಹೊರಬರದ ಕೇರಳ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯ ಪ್ರವಾಹ ಪೀಡಿತರಿಗೆ ಧನ ಸಂಗ್ರಹಣೆ ಮಾಡಿ ದೇಣಿಗೆ ನೀಡುವ ಮೂಲಕ ಕತಾರ್ ದೇಶದಲ್ಲಿರುವ ಭಾರತದ ರಾಜ್ಯಗಳ ಸಂಘ ಸಂಸ್ಥೆಗಳು ಹೃದಯವಂತಿಕೆ ಮೆರೆದಿದ್ದಾರೆ.

ಭಾರತೀಯ ದೂತಾವಾಸದಡಿಯಲ್ಲಿ ಕಾರ್ಯವಹಿಸುತ್ತಿರುವ ಭಾರತೀಯ ಸಮುದಾಯದ ಸೇವಾ ಸಂಸ್ಥೆಯ ಅಡಿಯಲ್ಲಿ (ಇಂಡಿಯನ್ ಕಮ್ಯೂನಿಟಿ ಬೇನೆವೋಲೆಂಟ್ ಫೋರಮ್-ICBF) ಈ ದೇಣಿಗೆಯನ್ನು ಸಂಗ್ರಹಿಸಲಾಗಿದೆ.

ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?

ಭಾರತೀಯ ರಾಯಭಾರಿಯಾದ ಪಿ.ಕುಮಾರನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಒಂದು ಅಭಿಯಾನಕ್ಕೆ ಭಾರತದ ನಾಗರೀಕರೆಲ್ಲ ಉದಾರವಾಗಿ ಸಹಾಯ ಹಸ್ತ ಚಾಚಿದ್ದಾರೆ.

Indians in Qatar handover Rs. 15 lakh to Kumaraswamy for Kodagu floods

ನವೆಂಬರ್ 24ನೇ ತಾರೀಖಿನಂದು ಕತಾರ್ ದೇಶದಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರತಿನಿಧಿಗಳು ಕರ್ನಾಟಕದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಹದಿನೈದು ಲಕ್ಷ ರುಪಾಯಿಗಳ ಚೆಕ್ಕನ್ನು ಮುಖ್್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

ICBF ಕಾರ್ಯದರ್ಶಿಯಾದ ಮಹೇಶಗೌಡ ಅವರ ಮುಂದಾಳತ್ವದಲ್ಲಿ, ಮಿಲನ್ ಅರುಣ್, ಅಧ್ಯಕ್ಷರು ಭಾರತೀಯ ಸಾಂಸ್ಕೃತಿಕ ಸಂಸ್ಥೆ, ICBF ಮತ್ತು ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರೂ ಆದ ಅರವಿಂದ್ ಪಾಟೀಲ್, ಕರ್ನಾಟಕ ಸಂಘದ ಉಪಾಧ್ಯಕ್ಷರಾದ ರವಿ ಶೆಟ್ಟಿ ಹಾಗೂ ಕರ್ನಾಟಕ ಸಂಘ ಕತಾರ್ ಮಾಜಿ ಉಪಾಧ್ಯಕ್ಷರೂ ಹಾಗೂ ಕತಾರ್ ದಲ್ಲಿ ಕನ್ನಡ ಚಲನಚಿತ್ರಗಳ ವಿತರಕರಾದ ಸುಬ್ರಮಣ್ಯ ಹೆಬ್ಬಾಗಿಲು ಮುಂತಾದವರು ಭಾಗಿಯಾಗಿದ್ದರು.

ಕರ್ನಾಟಕದಲ್ಲಿ ಪ್ರವಾಹದಿಂದ ನಷ್ಟ : 546 ಕೋಟಿ ಕೊಟ್ಟ ಕೇಂದ್ರ ಕರ್ನಾಟಕದಲ್ಲಿ ಪ್ರವಾಹದಿಂದ ನಷ್ಟ : 546 ಕೋಟಿ ಕೊಟ್ಟ ಕೇಂದ್ರ

ದೇಣಿಗೆಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕತಾರ್ ಭಾರತೀಯರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತ, ಅವರು ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಅಲ್ಲದೆ ಕರ್ನಾಟಕದಲ್ಲಿ ಆದ ಮೂರು ದುರ್ಘಟನೆಗಳ ಕಾರಣದಿಂದಾಗಿ ನಿಗದಿತ ಸಮಯದಲ್ಲಿ ಭೇಟಿಯಾಗಲು ಸಾಧ್ಯವಾಗದಕ್ಕೆ ವಿಷಾದ ವ್ಯಕ್ತಪಡಿಸಿದರು.

Indians in Qatar handover Rs. 15 lakh to Kumaraswamy for Kodagu floods

ಕತಾರ್ ಪ್ರತಿನಿಧಿಗಳು ಮಾಜಿ ಸಚಿವ ಹಾಗೂ ಜನಪ್ರಿಯ ನಟ ಅಂಬರೀಷ್ ಅವರ ಅಕಾಲಿಕ ಮರಣ, ಬಸ್ ದುರ್ಘಟನೆ ಮತ್ತು ಹಿರಿಯ ನಾಯಕ ಜಾಫರ್ ಷರೀಫ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದರು.

ಕೊಡಗು ಮಹಾಮಳೆ : 840 ಸಂತ್ರಸ್ತ ಕುಟುಂಬಗಳಿಗೆ ಮನೆ ಭಾಗ್ಯಕೊಡಗು ಮಹಾಮಳೆ : 840 ಸಂತ್ರಸ್ತ ಕುಟುಂಬಗಳಿಗೆ ಮನೆ ಭಾಗ್ಯ

English summary
Indians in Qatar handed over Rs. 15 lakh to chief minister of Karnataka H D Kumaraswamy for Kodagu floods. Qatar Indians paid homage to departed actor Ambareesh and Jafer Sharief.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X