ಕುವೈತ್ ಕನ್ನಡ ರಾಜ್ಯೋತ್ಸವಕ್ಕೆ ಜಯಂತ್ ಕಾಯ್ಕಿಣಿ

ಈ ಸಲದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಖ್ಯಾತ ಕವಿ, ಕಥೆಗಾರ, ಟೀವಿ ಸಂದರ್ಶಕ ಹಾಗು ಕನ್ನಡ ಚಿತ್ರಗೀತ ಲೇಖಕರಾದ ಜಯಂತ ಕಾಯ್ಕಿಣಿ ಅವರು ಆಗಮಸಲಿದ್ದಾರೆ. 19ನೇ ವಯಸ್ಸಿನಲ್ಲೇ ತಮ್ಮ ಕವನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪಡೆದ ಇವರು, ತಮ್ಮ ಸಣ್ಣ ಕಥೆಗಳ ಸಂಕಲನಗಳಿಗೆ ಮತ್ತೆ ಮೂರು ಸಲ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಪಾತ್ರರಾದರು.
ಹಲವಾರು ಕವನ ಸಂಕಲನಗಳ, ಸಣ್ಣ ಕಥೆಗಳ ಸಂಗ್ರಹಗಳ ಹಾಗು ಲಘು ಬರಹಗಳ ಮೂಲಕ ಕಾಯ್ಕಿಣಿಯವರು ಕನ್ನಡಿಗರ ಮನ ಗೆದ್ದಿದ್ದಾರೆ. ಇತ್ತೀಚೆಗೆ ಟಿವಿ ಕಾರ್ಯಕ್ರಮಗಳಲ್ಲಿ ಕನ್ನಡದ ದಿಗ್ಗಜರುಗಳಾದ ಕುವೆಂಪು, ಶಿವರಾಮ್ ಕಾರಂತ ಹಾಗು ರಾಜಕುಮಾರರ ಜೀವನ ಸಾಧನೆಗಳನ್ನು ನವೀನ ರೀತಿಯಲ್ಲಿ ನಿರೂಪಿಸಿ ಕನ್ನಡಿಗರ ಮನ ಸೂರೆಗೊಂಡಿದ್ದಾರೆ. ಈ ಪ್ರತಿಭಾವಂತ ಸಾಹಿತಿಯ ಆಗಮನ ಕುವೈತಿನ ಕನ್ನಡಿಗರಿಗೆ ಅತ್ಯಂತ ಸಂತಸದ ಸುದ್ದಿಯಾಗಿದೆ.
ನಮ್ಮ ಕನ್ನಡ ನಾಡಿನ ಉದಯೋನ್ಮುಖ ಬಾಲಪ್ರತಿಭೆ ಕು||ಪೂರ್ವಿ ತನ್ನ ಕಲಾ ಪ್ರತಿಭೆಯನ್ನು ತೋರಿಸಲಿದ್ದಾಳೆ. ಕು||ಪೂರ್ವಿ ಕನ್ನಡ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ "ಡೀ ಜೂನಿಯರ್" ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಭಾಗವಹಿಸಿದ್ದಳು. ಕುವೈತ್ ಕನ್ನಡ ಕೂಟವು ಈ ಬಾಲ ಪ್ರತಿಭೆಗೆ ಮೊದಲ ಅಂತಾರಾಷ್ಟ್ರೀಯ ವೇದಿಕೆ ಕೊಡುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ.
ಈ ಸಲದ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಕೂಟದ ಸದಸ್ಯರುಗಳು, ಪ್ರತಿ ವರುಷದಂತೆ, ಮನರಂಜನೆಯ ಕಾರ್ಯಕ್ರಮವನ್ನು ನೀಡಲಿದ್ದಾರೆ. ಕರ್ನಾಟಕದ ಆಚರಣೆಗಳು ಹಾಗು ಸಂಸ್ಕೃತಿಗಳ ಆಧಾರಿತ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರೂಪಿಸಲು ಕೂಟದ ಸಾಂಸ್ಕೃತಿಕ ಸಮಿತಿ ಭರದಿಂದ ತಯಾರಿ ನಡೆಸುತ್ತಿದೆ.
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ದಿನೇಶ್, ವಿಜಯ ಕೈರಂಗಳ, ರಮೇಶ್ ಸಿ ಹಾಗು ರಮೇಶ್ ಪಿ ಕೂಟದ ಎಲ್ಲ ಚಟುವಟಿಕೆಗಳ ನಿರ್ವಹಣೆ ಹೊತ್ತು ಕುವೈತಿನ ಕನ್ನಡಿಗರಿಗೆ ಅವಿಸ್ಮರಣೀಯ ಅನುಭವ ನೀಡಲು ಸಿದ್ಧರಾಗಿದ್ದಾರೆ.
-
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications