ಅನಂತ್ ನಾಗ್ ಗೆ ಕತಾರ್ ಕನ್ನಡಿಗರಿಂದ 'ಕಲಾಭಿನವ ರತ್ನ' ಬಿರುದು
ದೋಹಾ ಕತಾರ್ ನ ಸಾಂಸ್ಕೃತಿಕ ಸಂಘಗಳಲ್ಲಿ ಒಂದಾದ ಕರ್ನಾಟಕ ಸಂಘ ಕತಾರ್, ಈ ಬಾರಿಯ ವಸಂತೋತ್ಸವ ಕಾರ್ಯಕ್ರಮವನ್ನು ಏಪ್ರಿಲ್ 27ರಂದು ಅದ್ದೂರಿಯಾಗಿ ಡಿಪಿಎಸ್ ಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು.
ಈ ಬಾರಿಯ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಕತಾರ್ ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಮೂರನೇ ವಾಣಿಜ್ಯ ಕಾರ್ಯದರ್ಶಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಶೃತಿ ಪುರುಷೋತ್ತಮ್ ಅವರು ಆಗಮಿಸಿದ್ದರು.
ಕಾರ್ಯಕ್ರಮಕ್ಕೆ ಮೆರಗು ನೀಡಲು, ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ಹಾಗೂ ಭಾರತೀಯ ಚಿತ್ರರಂಗ ಖ್ಯಾತಿಯ ಸಪ್ತ ಭಾಷಾ ತಾರೆ, ತಮ್ಮ ಸರಳತೆ ಹಾಗೂ ನಟನೆಗೆ ಹೆಸರುವಾಸಿಯಾಗಿರುವ, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಮಾಜಿ ಮಂತ್ರಿ ಆಗಿದ್ದ ಅನಂತ್ ನಾಗ್ ಹಾಗೂ ಖ್ಯಾತ ನಟಿ, ಅವರ ಧರ್ಮಪತ್ನಿ ಗಾಯತ್ರಿ ಅನಂತ್ ನಾಗ್ ಅವರು ಪಾಲ್ಗೊಂಡಿದ್ದರು.

ತಮ್ಮ ಭಾಷಣದ ವೇಳೆ ಅನಂತ್ ನಾಗ್ ಅವರು ಕತಾರ್ ಬಗ್ಗೆ ಅವರಿಗೆ ಇದ್ದ ಮಾಹಿತಿ, ಸಂಘದ ಕನ್ನಡ ಶಾಲೆಗೆ ಭೇಟಿ ಹಾಗೂ ಮೆಚ್ಚುಗೆ, ಅವರ ಕನ್ನಡ ಬಗೆಗಿನ ಅಭಿಮಾನ, ತಾವು ಚಿತ್ರರಂಗದಲ್ಲಿ ನಡೆದು ಬಂದ ದಾರಿ ಹಾಗೂ ಅವರ ಮುಂಬರುವ ಚಿತ್ರಗಳ ಬಗ್ಗೆ, ಹಾಗೂ ಕನ್ನಡ ಬಗ್ಗೆ ಬೇಕಾಗಿರುವ ಜಾಗೃತಿ, ಇವೆಲ್ಲವುಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಅವರ ಚಿತ್ರರಂಗ, ನಾಟಕರಂಗ ಹಾಗೂ ಕನ್ನಡ ಸೇವೆಯನ್ನು ಗೌರವಿಸಿ, ಕರ್ನಾಟಕ ಸಂಘ ಕತಾರ್ ಅವರಿಗೆ "ಕಾಲಾಭಿನವ ರತ್ನ" ಬಿರುದನ್ನು ನೀಡಿ ಗೌರವಿಸಿತು.
ಕಾರ್ಯಕ್ರಮದ ರಸ ಸಂಜೆಗೆ ಮೆರಗು ನೀಡಲು, ಕರ್ನಾಟಕದ ಖ್ಯಾತ ಹಿನ್ನೆಲೆ ಗಾಯಕಿ, ಬಹು ಭಾಷಾ ನಟಿ, ಫಿಲ್ಮ್ ಫೇರ್ ಪ್ರಶಸ್ತಿ ವಿಜೇತೆ ಅನನ್ಯ ಭಟ್ ಅವರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರ ಜೊತೆಗೆ, ಅಂತಾರಾಷ್ಟ್ರೀಯ ಖ್ಯಾತಿಯ ಕಲಾ ತಂಡ ಗಣೇಶ್ ಗೋವಿಂದಸ್ವಾಮಿ ಸಾರಥ್ಯದ "ಬೀಟ್ ಗುರುಸ್" ಅವರು ಭಾರತೀಯ, ಆಫ್ರಿಕಾ ಹಾಗೂ ವಿವಿಧ ದೇಶಗಳ ವಿಶಿಷ್ಟ ವಾದ್ಯ ಗೋಷ್ಠಿ ನಡೆಸಿ ಸಭಾಂಗಣದಲ್ಲಿ ನೆರೆದಿದ್ದ ಕನ್ನಡ ಅಭಿಮಾನಿಗಳನ್ನು ರಂಜಿಸಿದರು. ಇವೆಲ್ಲದರ ಜೊತೆಗೆ ಸಂಘದ ಸದಸ್ಯರು ಅನಂತ್ ನಾಗ್ ಅವರ ಚಲನಚಿತ್ರದ ಹಾಡುಗಳನ್ನು ಪೋಣಿಸಿ ನೃತ್ಯದ ಮೂಲಕ ಅವರಿಗೆ ಗೌರವ ಸಲ್ಲಿಸಿದರು.

ಕರ್ನಾಟಕ ಸಂಘ ಕತಾರ್ ನ ಅಧ್ಯಕ್ಷರಾದ ವೆಂಕಟ ರಾವ್ ಅವರು ಸ್ವಾಗತ ಭಾಷಣದ ಮೂಲಕ ಸಭೆಯಲ್ಲಿ ನೆರೆದಿದ್ದ ಎಲ್ಲರಿಗೂ ಸ್ವಾಗತ ಕೋರಿದರು. ಕಾರ್ಯಕ್ರಮಕ್ಕೆ ಮುಖ್ಯ ನಿರೂಪಕರಾಗಿ ಭಾರತದ ಕಡಲ ತೀರಿದ ನಗರಿ ಉಳ್ಳಾಲ್ ದಿಂದ ಆಗಮಿಸಿದ ಅರುಣ್ ಉಳ್ಳಾಲ್ ಅವರು ತಮ್ಮ ಕನ್ನಡ ನಿರೂಪಣೆಗೆ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದರು.

ಕಾರ್ಯಕ್ರಮದಲ್ಲಿ ಕತಾರ್ ನ ಹಲವಾರು ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಪಾಲ್ಗೊಂಡಿದ್ದು ವಿಶೇಷ. ಇದೆ ರೀತಿ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲು ಕರ್ನಾಟಕ ಸಂಘ ಯೋಚಿಸುತ್ತಿದೆ ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications