ದೋಹಾದಲ್ಲಿ ಶ್ವೇತಾ ಶ್ರೀವಾತ್ಸವ್, ರಂಜಿಸಿದ ಸುಗಮ ಸಂಗೀತ
ಕತಾರ್ನ ದೋಹಾದಲ್ಲಿ ಕರ್ನಾಟಕ ಸಂಘ ಆಯೋಜಿಸಿದ್ದ ವನಿತಾ ಮತ್ತು ಮಕ್ಕಳ ಪ್ರತಿಭಾನ್ವೇಷಣಾ ಕಾರ್ಯಕ್ರಮದಲ್ಲಿ ನಟಿ ಶ್ವೇತಾ ಶ್ರೀವಾತ್ಸವ್, ಸುಗಮ ಸಂಗೀತ ಕಲಾಕಾರರಾದ ಪಂಚಮ್ ಹಳಬಂಡಿ, ರತ್ನಮಾಲಾ ಪ್ರಕಾಶ್, ವಾಣಿ ವಿಶ್ವನಾಥ್ ಭಾಗವಹಿಸಿದ್ದರು.
ಕರ್ನಾಟಕ ಸಂಘವು ಇತ್ತೀಚೆಗೆ ದೋಹಾದಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಶೋಕ ಸಭಾಂಗಣದಲ್ಲಿ ವನಿತಾ ಪ್ರತಿಭಾ ಸಂಭ್ರಮ ಹಾಗು ಮಕ್ಕಳ ಪ್ರತಿಭಾನೇಷ್ವಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಈ ಕಾರ್ಯಕ್ರಮದ ಗೌರವಾನ್ವಿತ ಅತಿಥಿಯಾಗಿ 'ಸಿಂಪಲ್ಲಾಗಿ ಒಂದು ಲವ್ ಸ್ಟೋರಿ' ಖ್ಯಾತಿಯ ಚಿತ್ರತಾರೆ ಶ್ವೇತಾ ಶ್ರೀವಾತ್ಸವ್ ಆಗಮಿಸಿದ್ದರು. ಜನಪ್ರಿಯ ಗಾಯಕರಾದ ರತ್ನಮಾಲಾ ಪ್ರಕಾಶ್, ಇಂದು ವಿಶ್ವನಾಥ್ ಹಾಗೂ ಪಂಚಮ್ ಹಳಿಬಂಡಿಯವರಿಂದ ಮಧುರಗೀತೆಗಳ ಭಾವಸಂಗಮದಲ್ಲಿ ಹೃದಯಂಗಮದ ಭಾವಗೀತೆಗಳು, ಜನಪ್ರಿಯ ಕನ್ನಡ ಮತ್ತು ಹಿಂದಿ ಚಲನಚಿತ್ರಗೀತೆಗಳು ಮನ ತಣಿಸಿದವು. [ವಿಮರ್ಶಕರ ಪ್ರಕಾರ 'ಗಯ್ಯಾಳಿಗಳು' ಗೆದ್ದುಬಿಟ್ಟರು ಕಣ್ರೀ.!]

ವನಿತೆಯರಿಗಾಗಿ ನಡೆದ ಫ್ಯಾಷನ್ ಶೋಗೆ ಹಿರಿಯ ಮಹಿಳೆಯೊಬ್ಬರು ವೇದಿಕೆ ಮೇಲೆ ನಡೆದು ಸಂಚಲನ ಮೂಡಿಸಿದರು. ನಂತರ ಅನೇಕ ವನಿತೆಯರು ವರ್ಣಮಯ ಸೀರೆ, ಉಡುಗೆ-ತೊಡುಗೆಗಳಲ್ಲಿ ವೇದಿಕೆಯಲ್ಲಿ ಹೆಜ್ಜೆ ಹಾಕಿ ಭರ್ತಿ ಚಪ್ಪಾಳೆ ಗಿಟ್ಟಿಸಿದರು.
ಕಿಕ್ಕಿರಿದ ಜನಸ್ತೋಮದೆದುರು ಶ್ವೇತಾ ಶ್ರೀವಾತ್ಸವ್, ರತ್ನಮಾಲಾ ಪ್ರಕಾಶ್, ಇಂದು ವಿಶ್ವನಾಥ್ ಹಾಗೂ ಪಂಚಮ್ ಹಳಿಬಂಡಿಯವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಸನ್ಮಾನದ ನಂತರ, ಶ್ವೇತಾ ಮಾತನಾಡಿ ಸಂಘದ ಕೆಲಸವನ್ನು ಹೊಗಳಿದರು. ವನಿತೆಯರಿಗೆ ಕೆಲವು ಕಿವಿ ಮಾತನ್ನೂ ಹೇಳಿದರು. [ಕತಾರ್ ರಾಜ್ಯೋತ್ಸವಕ್ಕೆ ರಂಗು ತಂದ ರಂಗೇಗೌಡ, ಶಿವಣ್ಣ]

ಸಮಾರಂಭದ ಮುಖ್ಯ ಅತಿಥಿಗಳಾಗಿದ್ದ ಕತಾರಿನ ಎಂ.ಈ.ಎಸ್ ಭಾರತೀಯ ಶಾಲೆಯ ಉಪ ಪ್ರಾಂಶುಪಾಲರಾದ ಹಮೀದ ಖಾದರ್ ಅವರು ನಾರಿಯರು ಶಕ್ತಿಯುತವಾಗಲು ಕರೆ ನೀಡಿದರು. ಸದಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ವಯಸ್ಸು ಅಡ್ಡಬರಬಾರದೆಂದರು.

ಮಕ್ಕಳಿಗೆ ಮತ್ತು ವನಿತೆಯರಿಗೆ ಏರ್ಪಡಿಸಿದ್ದ ಅನೇಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೇ , ಶೈಕ್ಷಣಿಕವಾಗಿ ಹಾಗು ಪಠ್ಯೇತರ ವಿಭಾಗದಲ್ಲಿ ಅತ್ಯುನ್ನತ ಸಾಧನೆಗೈದ ಏಳು ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. [ಕತಾರ್ ಸಾಂಸ್ಕೃತಿಕ ಸಂಭ್ರಮದಲ್ಲಿ ತಾರೆ ಸುಧಾರಾಣಿ]

ಸಂಘದ ಅಧ್ಯಕ್ಷ, ಎಚ್.ಕೆ.ಮಧು ಪ್ರಾಸ್ತಾವಿಕ ಭಾಷಣದೊಂದಿಗೆ ಸ್ವಾಗತಿಸಿದರು. ಡಾ. ರೋಹಿಣಿ ದೊರೆ ಕಾರ್ಯಕ್ರಮವನ್ನು ನಿರೂಪಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ, ಶಿಲ್ಪಾ ಶೆಟ್ಟಿ ವಂದಿಸಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications