ಅಬುಧಾಬಿಯಲ್ಲಿ ಸಡಗರದ ಕನ್ನಡ ರಾಜ್ಯೋತ್ಸವ
ಅಬುಧಾಬಿ, ನ. 15 : ಕರ್ನಾಟಕ ಸಂಘದ ವತಿಯಿಂದ 59ನೇ ಕನ್ನಡ ರಾಜ್ಯೋತ್ಸವವನ್ನು ಇಂಡಿಯ ಸೋಷಲ್ ಎಂಡ್ ಕಲ್ಚರಲ್ ಆಸೋಸಿಯೇಷನ್ ಸಭಾಂಗಣದಲ್ಲಿ ನ.7ರಂದು ಶುಕ್ರವಾರ ಅತ್ಯಂತ ಅದ್ಧೂರಿಯಾಗಿ ಅಚರಿಸಲಾಯಿತು.
ರಾಜ್ಯೋತ್ಸವದ ಅಂಗವಾಗಿ ನೀಡಲಾಗುತ್ತಿರುವ ವರಕವಿ ದ.ರಾ.ಬೇಂದ್ರೆ ಪ್ರಶಸ್ತಿಯನ್ನು ಧ್ವನಿ ಪ್ರತಿಷ್ಠಾನದ ಅಧ್ಯಕ್ಷ ಕವಿ ಹಾಗೂ ರಂಗ ನಿರ್ದೇಶಕ ಪ್ರಕಾಶ್ ರಾವ್ ಪಯ್ಯಾರ್ ಅವರಿಗೆ ಸಮಾರಂಭದ ಅಧ್ಯಕ್ಷತೆ ವಹಿಸಿದ ಅಬುಧಾಬಿಯ ಉದ್ಯಮಿ ಪದ್ಮಶ್ರೀ ಡಾ. ಬಿ.ಆರ್.ಶೆಟ್ಟಿ ಹಾಗೂ ಮುಖ್ಯ ಅತಿಥಿ ಯು.ಎ.ಇ.ಯಲ್ಲಿ ಭಾರತೀಯ ರಾಯಭಾರಿ ಟಿ.ಪಿ, ಸೀತಾರಾಮ್ ಅವರು ಪ್ರದಾನಗೈದರು. [ಅಬುಧಾಬಿಯಲ್ಲಿ ಬೆಂಗಳೂರು ಹುಡುಗಿಯ ಸಾಧನೆ]

ಕಳೆದ ಇಪ್ಪತೊಂಬತ್ತು ವರ್ಷಗಳಿಂದ ಹೊರನಾಡು ಹಾಗೂ ವಿದೇಶದಲ್ಲಿ ಕನ್ನಡ ರಂಗ ಮತ್ತು ಸಾಹಿತ್ಯಿಕ ಚಟುವಟಿಕೆಯನ್ನು ನಿರಂತರ ನಡೆಸಿ ಕೊಂಡು ಕನ್ನಡ ಸೇವೆ ಮಾಡುತ್ತಿರುವ ಪ್ರಕಾಶ್ ರಾವ್ ಪಯ್ಯಾರ್ ಅವರನ್ನು ಅತಿಥಿಗಳು ಶ್ಲಾಘಿಸಿದರು.
ವೇದಿಕೆಯಲ್ಲಿ ಸುಧೀರ್ ಕುಮಾರ್ ಶೆಟ್ಟಿ, ಶೇಖರ್ ಬಿ.ಶೆಟ್ಟಿ , ಡಿ,ನಟರಾಜನ್, ಸೀತಾರಾಮ್, ಡಾ. ಶ್ರೀಮತಿ ಬಿ.ಅರ್.ಶೆಟ್ಟಿ, ಸಂಘದ ಅದ್ಯಕ್ಷರಾದ ಸರ್ವೊತ್ತಮ ಶೆಟ್ಟಿ ಮುಂತಾದವರು ಉಪಸಿತ್ಥರಿದ್ದರು. [ಒಂದು ರಾತ್ರಿಗೆ 70 ಲಕ್ಷ ರು. ಪಾವತಿಸಿದ ಕುಬೇರ]
ಸಮಾರಂಭದಲ್ಲಿ ಪ್ರಕಾಶ್ ರಾವ್ ಪಯ್ಯಾರ್ ದಂಪತಿಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಮನೋಹರ್ ತೋನ್ಸೆ ಅವರು ಸನ್ಮಾನ ಪತ್ರವನ್ನು ವಾಚಿಸಿದರು, ಸರ್ವೊತ್ತಮ ಶೆಟ್ಟಿ ವಂದಿಸಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications