ಏಳನೆಯ ವಸಂತ ಸಾಹಿತ್ಯೋತ್ಸವ, ಒಂದು ವರದಿ
ಸೈಂಟ್ ಲೂಯಿಸ್ ನಗರದ ಕನ್ನಡ ಸಂಸ್ಥೆ "ಸಂಗಮ"ದ ಆಶ್ರಯದಲ್ಲಿ ಹಾಗು ಮಧ್ಯಪಶ್ಚಿಮ ವಲಯದ ಇತರ ಕನ್ನಡ ಸಂಘಗಳ ಸಹಕಾರದೊಂದಿಗೆ ಕನ್ನಡ ಸಾಹಿತ್ಯ ರಂಗದ ಏಳನೆಯ ವಸಂತ ಸಾಹಿತ್ಯೋತ್ಸವ ಮೇ 30, 31, 2015 ರಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲ್ಪಟ್ಟಿತು.
ಈ ಬಾರಿ ರಂಗ "ಅನುವಾದ ಸಾಹಿತ್ಯ"ವನ್ನು ಚರ್ಚೆಯ ಮುಖ್ಯ ವಿಷಯವಾಗಿ ಆಯ್ದುಕೊಂಡು, ಕರ್ನಾಟಕದ ಪ್ರಸಿದ್ಧ ಭಾಷಾಂತರಕಾರರಲ್ಲೊಬ್ಬರಾದ ಪ್ರೊ. ಪ್ರಧಾನ್ ಗುರುದತ್ತರನ್ನು ಮುಖ್ಯ ಅತಿಥಿಗಳಾಗಿ ಬರಮಾಡಿಕೊಂಡಿತ್ತು. ಅವರೊಡನೆ, ಅಮೆರಿಕದವರೇ ಆದ ಪ್ರೊ.ಎಸ್.ಎನ್. ಶ್ರೀಧರ್ ಮತ್ತು ಪ್ರೊ. ನಾರಾಯಣ ಹೆಗ್ಡೆ ಅವರುಗಳು ವಿಶೇಷ ಅತಿಥಿಗಳಾಗಿ ಬಂದಿದ್ದರು.

ಕಾರ್ಯಕ್ರಮದ ಆರಂಭದ ವೇಳೆಗೆ ಸಭಾಂಗಣ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು. ಬೇರೆ ಬೇರೆ ಊರುಗಳಿಂದ ಬಂದು ಸೇರಿದ್ದ ಸಾಹಿತ್ಯಾಸಕ್ತರು ಒಂದು ಕಡೆ ನೋಂದಣಿ ಮಾಡಿಕೊಳ್ಳುತ್ತ ಪರಸ್ಪರ ಕುಶಲವನ್ನು ವಿಚಾರಿಸುತ್ತಿದ್ದರೆ, ಮತ್ತೆ ಬೇರೆಡೆಯಲ್ಲಿ ಸುಂದರವಾದ ಸೀರೆಗಳನ್ನುಟ್ಟು ನಗುಮೊಗದೊಂದಿಗೆ ಓಡಾಡುತ್ತಿದ್ದ ಸಂಗಮದ ಕಾರ್ಯಕರ್ತೆಯರು ಇಡೀ ಒಳಾಂಗಣಕ್ಕೆ ಹಬ್ಬದ ವಾತಾವರಣವನ್ನುಂಟು ಮಾಡಿದ್ದರು!
ಮಧ್ಯಾಹ್ನ ಒಂದು ಗಂಟೆಗೆ ಸರಿಯಾಗಿ ಅತಿಥಿಗಳು ದೀಪ ಬೆಳಗುವ ಮೂಲಕ ಸಮ್ಮೇಳನದ ಉದ್ಘಾಟನೆ ಮಾಡಿದರು. ಸಂಗಮ' ತಂಡದ ಗಾಯಕರ ಸುಶ್ರಾವ್ಯ ಸ್ವಾಗತ ಗೀತೆಯೊಂದಿಗೆ ಎರಡು ದಿನಗಳ ಸಾಹಿತ್ಯೋತ್ಸವ ಆರಂಭವಾಯಿತು. ಸಾಹಿತ್ಯ ರಂಗದ ಆಡಳಿತ ಮಂಡಲಿಯ ಅಧ್ಯಕ್ಷರಾದ ನಾಗ ಐತಾಳ ಮತ್ತು ಕಾರ್ಯಕಾರೀ ಸಮಿತಿಯ ಅಧ್ಯಕ್ಷ ಮೈ.ಶ್ರೀ. ನಟರಾಜ ಅವರು ಎಲ್ಲರನ್ನೂ ಸ್ವಾಗತಿಸಿ ಸಮ್ಮೇಳನಕ್ಕೆ ಚಾಲನೆ ಕೊಟ್ಟರು. ನಂತರ ಕಾವ್ಯಾ ಕಡಮೆ, ಮಾನಸಾ ವೆಂಕಟ ಸುಬ್ಬಯ್ಯ ಮತ್ತು ಸುಮತಿ ಮುದ್ದೇನಹಳ್ಳಿ ಅವರುಗಳು ಅತಿಥಿಗಳನ್ನು ಕ್ರಮವಾಗಿ, ಚಿಕ್ಕದಾಗಿ ಚೊಕ್ಕವಾಗಿ ಸಭೆಗೆ ಪರಿಚಯಿಸಿದರು.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications