ಏಳನೆಯ ವಸಂತ ಸಾಹಿತ್ಯೋತ್ಸವ, ಒಂದು ವರದಿ
ಸೈಂಟ್ ಲೂಯಿಸ್ ನಗರದ ಕನ್ನಡ ಸಂಸ್ಥೆ "ಸಂಗಮ"ದ ಆಶ್ರಯದಲ್ಲಿ ಹಾಗು ಮಧ್ಯಪಶ್ಚಿಮ ವಲಯದ ಇತರ ಕನ್ನಡ ಸಂಘಗಳ ಸಹಕಾರದೊಂದಿಗೆ ಕನ್ನಡ ಸಾಹಿತ್ಯ ರಂಗದ ಏಳನೆಯ ವಸಂತ ಸಾಹಿತ್ಯೋತ್ಸವ ಮೇ 30, 31, 2015 ರಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲ್ಪಟ್ಟಿತು.
ಈ ಬಾರಿ ರಂಗ "ಅನುವಾದ ಸಾಹಿತ್ಯ"ವನ್ನು ಚರ್ಚೆಯ ಮುಖ್ಯ ವಿಷಯವಾಗಿ ಆಯ್ದುಕೊಂಡು, ಕರ್ನಾಟಕದ ಪ್ರಸಿದ್ಧ ಭಾಷಾಂತರಕಾರರಲ್ಲೊಬ್ಬರಾದ ಪ್ರೊ. ಪ್ರಧಾನ್ ಗುರುದತ್ತರನ್ನು ಮುಖ್ಯ ಅತಿಥಿಗಳಾಗಿ ಬರಮಾಡಿಕೊಂಡಿತ್ತು. ಅವರೊಡನೆ, ಅಮೆರಿಕದವರೇ ಆದ ಪ್ರೊ.ಎಸ್.ಎನ್. ಶ್ರೀಧರ್ ಮತ್ತು ಪ್ರೊ. ನಾರಾಯಣ ಹೆಗ್ಡೆ ಅವರುಗಳು ವಿಶೇಷ ಅತಿಥಿಗಳಾಗಿ ಬಂದಿದ್ದರು.

ಕಾರ್ಯಕ್ರಮದ ಆರಂಭದ ವೇಳೆಗೆ ಸಭಾಂಗಣ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು. ಬೇರೆ ಬೇರೆ ಊರುಗಳಿಂದ ಬಂದು ಸೇರಿದ್ದ ಸಾಹಿತ್ಯಾಸಕ್ತರು ಒಂದು ಕಡೆ ನೋಂದಣಿ ಮಾಡಿಕೊಳ್ಳುತ್ತ ಪರಸ್ಪರ ಕುಶಲವನ್ನು ವಿಚಾರಿಸುತ್ತಿದ್ದರೆ, ಮತ್ತೆ ಬೇರೆಡೆಯಲ್ಲಿ ಸುಂದರವಾದ ಸೀರೆಗಳನ್ನುಟ್ಟು ನಗುಮೊಗದೊಂದಿಗೆ ಓಡಾಡುತ್ತಿದ್ದ ಸಂಗಮದ ಕಾರ್ಯಕರ್ತೆಯರು ಇಡೀ ಒಳಾಂಗಣಕ್ಕೆ ಹಬ್ಬದ ವಾತಾವರಣವನ್ನುಂಟು ಮಾಡಿದ್ದರು!
ಮಧ್ಯಾಹ್ನ ಒಂದು ಗಂಟೆಗೆ ಸರಿಯಾಗಿ ಅತಿಥಿಗಳು ದೀಪ ಬೆಳಗುವ ಮೂಲಕ ಸಮ್ಮೇಳನದ ಉದ್ಘಾಟನೆ ಮಾಡಿದರು. ಸಂಗಮ' ತಂಡದ ಗಾಯಕರ ಸುಶ್ರಾವ್ಯ ಸ್ವಾಗತ ಗೀತೆಯೊಂದಿಗೆ ಎರಡು ದಿನಗಳ ಸಾಹಿತ್ಯೋತ್ಸವ ಆರಂಭವಾಯಿತು. ಸಾಹಿತ್ಯ ರಂಗದ ಆಡಳಿತ ಮಂಡಲಿಯ ಅಧ್ಯಕ್ಷರಾದ ನಾಗ ಐತಾಳ ಮತ್ತು ಕಾರ್ಯಕಾರೀ ಸಮಿತಿಯ ಅಧ್ಯಕ್ಷ ಮೈ.ಶ್ರೀ. ನಟರಾಜ ಅವರು ಎಲ್ಲರನ್ನೂ ಸ್ವಾಗತಿಸಿ ಸಮ್ಮೇಳನಕ್ಕೆ ಚಾಲನೆ ಕೊಟ್ಟರು. ನಂತರ ಕಾವ್ಯಾ ಕಡಮೆ, ಮಾನಸಾ ವೆಂಕಟ ಸುಬ್ಬಯ್ಯ ಮತ್ತು ಸುಮತಿ ಮುದ್ದೇನಹಳ್ಳಿ ಅವರುಗಳು ಅತಿಥಿಗಳನ್ನು ಕ್ರಮವಾಗಿ, ಚಿಕ್ಕದಾಗಿ ಚೊಕ್ಕವಾಗಿ ಸಭೆಗೆ ಪರಿಚಯಿಸಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications