ಅನುವಾದದ ಆಗು-ಹೋಗು : ವಿದ್ವತ್ಪೂರ್ಣ ಭಾಷಣ
ಸುಮಾರು ಒಂದು ಗಂಟೆಗೂ ಮೀರಿದ "ಅನುವಾದದ ಆಗು-ಹೋಗುಗಳು" ಎಂಬ ವಿಷಯವನ್ನು ಕುರಿತು ಪ್ರಧಾನ್ ಗುರುದತ್ತರು ವಿದ್ವತ್ಪೂರ್ಣವಾದ ಪ್ರಾಸ್ತಾವಿಕ ಭಾಷಣವನ್ನು ಮಾಡಿ ಸಭಾಸದರಿಗೆ ಅನುವಾದದ ಒಳನೋಟವನ್ನು ಕಾಣಿಸಿ, ರಸದೌತಣವನ್ನೇ ಬಡಿಸಿದರು. ಅಷ್ಟೇ ಅಲ್ಲ, ರಂಗ ಈವರೆಗೆ ಪ್ರಕಟಿಸಿದ ಮತ್ತು ಅಮೆರಿಕದಲ್ಲಿರುವ ಹಲವಾರು ಲೇಖಕರು ಪ್ರಕಟಿಸುತ್ತಾ ಬಂದಿರುವ ಅನೇಕ ಪುಸ್ತಕಗಳ ಬಗ್ಗೆ ಸಹ ಮೆಚ್ಚುಗೆಯ ಮಾತುಗಳನ್ನಾಡಿದರು.
ಭಾಷಣ ವಿದ್ವತ್ಪೂರ್ಣವಾಗಿರುವುದರ ಜೊತೆಗೆ ವಿನೋದಪೂರ್ಣವೂ ಅಗಿದ್ದುದರಿಂದ ಸಭಾಸದರೆಲ್ಲರೂ ಏಕರೀತಿಯಲ್ಲಿ ಆಸ್ವಾದಿಸಿ ಸಂತಸಪಟ್ಟರು. ಮುಖ್ಯ ಅತಿಥಿಗಳ ಹುಟ್ಟುಹಬ್ಬ ಅಂದೇ ಎಂದು ತಿಳಿದು ಪ್ರಾಸ್ತಾವಿಕ ಭಾಷಣ ಮುಗಿದ ಕೂಡಲೇ ಅವರಿಗೆ "ಹ್ಯಾಪ್ಪಿ ಬರ್ತ್ ಡೇ" ಹಾಡುವುದರ ಜೊತೆ ಅವರಿಗೂ ಮತ್ತು ರಂಗದ ಆಡಳಿತ ಮಂಡಲಿ ಅಧ್ಯಕ್ಷ ನಾಗ ಐತಾಳರ 55ನೇ ಮದುವೆಯ ವಾರ್ಷಿಕೋತ್ಸವದ ಸಲುವಾಗಿಯೂ ಎರಡು ವಿಭಿನ್ನ ರುಚಿಕರವಾದ ಕೇಕ್ ಗಳನ್ನು ಕತ್ತರಿಸಿದ್ದು ಅಂದಿನ ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ಕೊಟ್ಟಿತು.

ಸಾಹಿತ್ಯ ಗೋಷ್ಠಿ : ಮಧ್ಯಾಹ್ನ ನಡೆದ ಸಾಹಿತ್ಯ ಗೋಷ್ಠಿ ಸುಮಾರು ಒಂದೂವರೆ ಗಂಟೆಗಳ ಕಾಲ ನೆರೆದವರಿಗೆಲ್ಲ ರಸದೌತಣವನ್ನು ಉಣಬಡಿಸಿತು. ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳ ಪಟ್ಟಿ ಬೆಳೆದಿದ್ದರಿಂದ ಹಲವಾರು ಪದಾಧಿಕಾರಿಗಳು ಮತ್ತು ಇತರರು ತಾವು ಮಾಡಬೇಕೆಂದಿದ್ದ ಪ್ರಸ್ತುತಿಯನ್ನು ಹಿಂದೆಗೆದುಕೊಂಡರು- ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ. ಒಟ್ಟು ಹದಿನಾಲ್ಕು ಜನರು ಭಾಗವಹಿಸಿದ್ದರು.
ಅನಿಲ್ ದೇಶಪಾಂಡೆ, ಲತಾ, ವಿಶ್ವನಾಥ್, ಕಾವ್ಯಾ ಕಡಮೆ ನಾಗರಕಟ್ಟೆ, ಶ್ರೀನಿವಾಸ ರಾವ್ ಮತ್ತು ಮೈ ಶ್ರೀ ನಟರಾಜ ಅವರು ಮೂಲ ಕೃತಿ ಮತ್ತು ಅದರ ಅನುವಾದವನ್ನು ಪ್ರಸ್ತುತ ಪಡಿಸಿದರು. ಶಂಕರ ಶಾಸ್ತ್ರಿ ಮತ್ತು ತ್ರಿವೇಣಿ ಶ್ರೀನಿವಾಸ ರಾವ್ ತಮ್ಮ ತಿಳಿ ಹಾಸ್ಯಭರಿತ ಪ್ರಬಂಧವನ್ನು ಓದಿದರು. ನಾಗಭೂಷಣ ಮೂಲ್ಕಿ, ಪಿ ಎಸ್ ಮೈಯ, ಸವಿತಾ ರವಿಶಂಕರ್ ಮತ್ತು ಶಂಕರ ಹೆಗ್ಡೆ ಅವರು ಕವನಗಳನ್ನು ವಾಚಿಸಿದರು. ಸಾಹಿತ್ಯ ಗೋಷ್ಠಿಯನ್ನು ನಿರ್ವಹಿಸಿದ ನಳಿನಿ ಮೈಯ ಮತ್ತು ವೈಶಾಲಿ ಹೆಗಡೆ ಅವರನ್ನು ಹಲವಾರು ಜನರು ನಂತರ ಭೇಟಿಯಾಗಿ ಅಭಿನಂದನೆಗಳ ಸುರಿಮಳೆಯನ್ನೇ ಸುರಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications