ಅನುವಾದದ ಆಗು-ಹೋಗು : ವಿದ್ವತ್ಪೂರ್ಣ ಭಾಷಣ
ಸುಮಾರು ಒಂದು ಗಂಟೆಗೂ ಮೀರಿದ "ಅನುವಾದದ ಆಗು-ಹೋಗುಗಳು" ಎಂಬ ವಿಷಯವನ್ನು ಕುರಿತು ಪ್ರಧಾನ್ ಗುರುದತ್ತರು ವಿದ್ವತ್ಪೂರ್ಣವಾದ ಪ್ರಾಸ್ತಾವಿಕ ಭಾಷಣವನ್ನು ಮಾಡಿ ಸಭಾಸದರಿಗೆ ಅನುವಾದದ ಒಳನೋಟವನ್ನು ಕಾಣಿಸಿ, ರಸದೌತಣವನ್ನೇ ಬಡಿಸಿದರು. ಅಷ್ಟೇ ಅಲ್ಲ, ರಂಗ ಈವರೆಗೆ ಪ್ರಕಟಿಸಿದ ಮತ್ತು ಅಮೆರಿಕದಲ್ಲಿರುವ ಹಲವಾರು ಲೇಖಕರು ಪ್ರಕಟಿಸುತ್ತಾ ಬಂದಿರುವ ಅನೇಕ ಪುಸ್ತಕಗಳ ಬಗ್ಗೆ ಸಹ ಮೆಚ್ಚುಗೆಯ ಮಾತುಗಳನ್ನಾಡಿದರು.
ಭಾಷಣ ವಿದ್ವತ್ಪೂರ್ಣವಾಗಿರುವುದರ ಜೊತೆಗೆ ವಿನೋದಪೂರ್ಣವೂ ಅಗಿದ್ದುದರಿಂದ ಸಭಾಸದರೆಲ್ಲರೂ ಏಕರೀತಿಯಲ್ಲಿ ಆಸ್ವಾದಿಸಿ ಸಂತಸಪಟ್ಟರು. ಮುಖ್ಯ ಅತಿಥಿಗಳ ಹುಟ್ಟುಹಬ್ಬ ಅಂದೇ ಎಂದು ತಿಳಿದು ಪ್ರಾಸ್ತಾವಿಕ ಭಾಷಣ ಮುಗಿದ ಕೂಡಲೇ ಅವರಿಗೆ "ಹ್ಯಾಪ್ಪಿ ಬರ್ತ್ ಡೇ" ಹಾಡುವುದರ ಜೊತೆ ಅವರಿಗೂ ಮತ್ತು ರಂಗದ ಆಡಳಿತ ಮಂಡಲಿ ಅಧ್ಯಕ್ಷ ನಾಗ ಐತಾಳರ 55ನೇ ಮದುವೆಯ ವಾರ್ಷಿಕೋತ್ಸವದ ಸಲುವಾಗಿಯೂ ಎರಡು ವಿಭಿನ್ನ ರುಚಿಕರವಾದ ಕೇಕ್ ಗಳನ್ನು ಕತ್ತರಿಸಿದ್ದು ಅಂದಿನ ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ಕೊಟ್ಟಿತು.

ಸಾಹಿತ್ಯ ಗೋಷ್ಠಿ : ಮಧ್ಯಾಹ್ನ ನಡೆದ ಸಾಹಿತ್ಯ ಗೋಷ್ಠಿ ಸುಮಾರು ಒಂದೂವರೆ ಗಂಟೆಗಳ ಕಾಲ ನೆರೆದವರಿಗೆಲ್ಲ ರಸದೌತಣವನ್ನು ಉಣಬಡಿಸಿತು. ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳ ಪಟ್ಟಿ ಬೆಳೆದಿದ್ದರಿಂದ ಹಲವಾರು ಪದಾಧಿಕಾರಿಗಳು ಮತ್ತು ಇತರರು ತಾವು ಮಾಡಬೇಕೆಂದಿದ್ದ ಪ್ರಸ್ತುತಿಯನ್ನು ಹಿಂದೆಗೆದುಕೊಂಡರು- ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ. ಒಟ್ಟು ಹದಿನಾಲ್ಕು ಜನರು ಭಾಗವಹಿಸಿದ್ದರು.
ಅನಿಲ್ ದೇಶಪಾಂಡೆ, ಲತಾ, ವಿಶ್ವನಾಥ್, ಕಾವ್ಯಾ ಕಡಮೆ ನಾಗರಕಟ್ಟೆ, ಶ್ರೀನಿವಾಸ ರಾವ್ ಮತ್ತು ಮೈ ಶ್ರೀ ನಟರಾಜ ಅವರು ಮೂಲ ಕೃತಿ ಮತ್ತು ಅದರ ಅನುವಾದವನ್ನು ಪ್ರಸ್ತುತ ಪಡಿಸಿದರು. ಶಂಕರ ಶಾಸ್ತ್ರಿ ಮತ್ತು ತ್ರಿವೇಣಿ ಶ್ರೀನಿವಾಸ ರಾವ್ ತಮ್ಮ ತಿಳಿ ಹಾಸ್ಯಭರಿತ ಪ್ರಬಂಧವನ್ನು ಓದಿದರು. ನಾಗಭೂಷಣ ಮೂಲ್ಕಿ, ಪಿ ಎಸ್ ಮೈಯ, ಸವಿತಾ ರವಿಶಂಕರ್ ಮತ್ತು ಶಂಕರ ಹೆಗ್ಡೆ ಅವರು ಕವನಗಳನ್ನು ವಾಚಿಸಿದರು. ಸಾಹಿತ್ಯ ಗೋಷ್ಠಿಯನ್ನು ನಿರ್ವಹಿಸಿದ ನಳಿನಿ ಮೈಯ ಮತ್ತು ವೈಶಾಲಿ ಹೆಗಡೆ ಅವರನ್ನು ಹಲವಾರು ಜನರು ನಂತರ ಭೇಟಿಯಾಗಿ ಅಭಿನಂದನೆಗಳ ಸುರಿಮಳೆಯನ್ನೇ ಸುರಿಸಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications