ಕಾವ್ಯಾನುವಾದ : ಇಫ್ ಐ ವರ್ ದ ಲಾರ್ಡ್ ಆಫ್ ಟಾರ್ಟರಿ
ಕವಿ ವಾಲ್ಟರ್ ಡಿಲಮೇರ್ ನ ಪದ್ಯ 'ಇಫ್ ಐ ವರ್ ದ ಲಾರ್ಡ್ ಆಫ್ ಟಾರ್ಟರಿ'ವನ್ನು ಐದು ಜನ ಕವಿಗಳು ಕನ್ನಡಕ್ಕೆ ಅನುವಾದ ಮಾಡಿ ವಾಚಿಸಿದರು. ಎಮ್ ಎಸ್ ನಟರಾಜರ ಅನುವಾದದಲ್ಲಿ ಟಾರ್ಟರಿ ಎಂಬ ಪ್ರಾಂತ್ಯ 'ನನ್ನ ಕನಸಿನ ರಾಜ್ಯ'ವಾದರೆ, ಪ್ರಕಾಶ ನಾಯಕರಿಗೆ 'ಅಖಂಡ ಭೂಮಂಡಲ'ವಾಯಿತು. ನಳಿನಿಯವರಿಗೆ ಅದನ್ನು 'ಟಾರ್ಟರಿ'ಯಾಗಿಯೇ ಉಳಿಸಿಕೊಳ್ಳುವ ಆಸೆ. ವೈಶಾಲಿ ಹೆಗಡೆಗೆ ಟಾರ್ಟರಿ ಸ್ವರ್ಗಪುರಿಯಾಯಿತು. ಮೀರಾ ರಾಜಗೋಪಾಲರವರಿಗೆ 'ಟಾರ್ಟರಿಯ ಲಾರ್ಡ್' ಹತ್ತೂರ ಒಡೆಯನಾಗಿ ರೂಪಾಂತರಗೊಂಡಿದ್ದ.
ನಟರಾಜರವರು ರಾಗವಾಗಿ ಮಕ್ಕಳಿಗೆ ಕವನ ಕಲಿಸುವ ರೀತಿಯಲ್ಲಿ ತಮ್ಮ ಕವನವನ್ನು ಹಾಡಿದ್ದು, ಪ್ರಕಾಶ ನಾಯಕರ ಅನುವಾದದಲ್ಲಿ ಟಾರ್ಟರಿ ಎಂಬ ಇದ್ದಿರಬಹುದಾದ ಒಂದು ಸಣ್ಣ ಪ್ರಾಂತ್ಯದ ಪಾಳಯಗಾರನಂತ ನಾಯಕ ಅಖಂಡ ಭೂಮಂಡಲಕ್ಕೆ ಒಡೆಯನಾದುದು, ನಳಿನಿ ಮಯ್ಯರವರು 'ಕುಣಿದಾವು ನವಿಲುಗಳು, ಸುಳಿದಾವು ಹುಲಿಗಳು' ಎಂದು ಭಾವಗೀತೆಯ ಆಪ್ತತೆಯನ್ನು ತಂದದ್ದು, ವೈಶಾಲಿಯವರು 'ಜಾಂಬಳಿ ಕಣಿವೆಯ ಜಂಬದ ಸಾಮ್ರಾಜ್ಯ' ಎಂಬ ಸಾಲನ್ನು ಓದಿದ್ದು, ಮೀರಾರವರು 'ಎಲ್ಲಾನು ನಂದೇಯ, ಎಲ್ಲಾವೂ ನಮ್ದೇಯ' ಎಂದು ಕವನವನ್ನು ಕನ್ನಡದ ಜನಪದ ಗೀತೆಯನ್ನಾಗಿ ರೂಪಾಂತರಗೊಳಿಸಿದ್ದು- ಅನುವಾದಕ್ಕಿರುವ ವಿವಿಧ ಆಯಾಮಗಳು ಮತ್ತು ಐದೂ ಬಗೆಯ ಅನುವಾದದ ಸಾಧ್ಯತೆಗಳನ್ನು ಸಾಕಾರಗೊಳಿಸುವ ನಮ್ಮ ಭಾಷೆಯ ಕಸುವು ಇಲ್ಲಿ ಪರಿಚಯವಾಯಿತು.

ಮುಂದಿನ ಭಾಗದಲ್ಲಿ ಎಸ್ ಎನ್ ಶ್ರೀಧರ್ ಮತ್ತು ನಾರಾಯಣ ಹೆಗಡೆಯವರು ಅನುವಾದದ ಸೂಕ್ಷ್ಮಗಳನ್ನು ತಮ್ಮದೇ ಅನುವಾದಗಳ ಪರಿಚಯ ಮಾಡಿಕೊಡುತ್ತಾ ವಿವರಿಸಿದರು. ನಾರಾಯಣ ಹೆಗಡೆಯವರು ಅನಂತಮೂರ್ತಿಯವರ 'ಸೂರ್ಯನ ಕುದುರೆ' ಕಥಾ ಸಂಕಲನವನ್ನು 'ಸ್ಟ್ಯಾಲಿಯನ್ ಆಫ್ ದ ಸನ್' ಎಂಬ ಹೆಸರಿನಲ್ಲಿ ಅನುವಾದ ಮಾಡಿದ್ದಾರಲ್ಲದೆ ಲಂಕೇಶ್, ತೇಜಸ್ವಿ, ಎ. ಕೆ, ರಾಮಾನುಜನ್ ಇನ್ನೂ ಇತರ ಕನ್ನಡದ ಸಾಹಿತಿಗಳ ಕತೆಗಳನ್ನು ಅಂಗ್ಲಭಾಷೆಗೆ ಮಾಡಿರುವ ಅನುವಾದಗಳು ಬಹಳ ಮಹತ್ವದ್ದಾಗಿವೆ.
ಶ್ರೀಧರ್ ರವರು ಅನುವಾದ ಕಮ್ಮಟದಲ್ಲಿ ತಮ್ಮ ಮಹತ್ವಾಕಾಂಕ್ಷಿ ಯೋಜನೆ ಕುಮಾರವ್ಯಾಸನ 'ಕರ್ನಾಟಕ ಕಥಾ ಮಂಜರಿ'ಯ ಇಂಗ್ಲಿಷ್ ಅನುವಾದದ ಬಗ್ಗೆ ಮಾತನಾಡಿದರು. ಇದೊಂದು ಭಾರತ, ಅಮೆರಿಕ ಮತ್ತು ಜರ್ಮನಿ ದೇಶಗಳ ವಿದ್ವಾಂಸರ ಹಾಗೂ ಅನುವಾದಗಳನ್ನೊಳಗೊಂಡ ಜಾಗತಿಕ ಯೋಜನೆ. ಕುಮಾರವ್ಯಾಸನ ಭಾರತವು ಹೋಮರನ 'ಒಡಿಸ್ಸಿ'ಯಂತೆ ಜಗತ್ತಿನ ಎಲ್ಲ ಓದುಗರಿಗೂ ಅದರ ಎಲ್ಲ ಕನ್ನಡ ಸೊಗಡಿನೊಂದಿಗೆ ಓದಲು ಸಿಗಬೇಕು ಎನ್ನುವುದು ಈ ತಂಡದ ಉದ್ದೇಶ. ಆ ಯೋಜನೆಯೆ ಬಗೆ ಸ್ಥೂಲವಾಗಿ ಮಾತಾಡಿದ ಶ್ರೀಧರ್ ರವರು ಅನುವಾದ ಕಮ್ಮಟದಲ್ಲಿ ಭಾಷಾಂತರಮಾಡಿದ ಐದೂ ಜನರ ಕವಿತೆಗಳ ವೈಶಿಷ್ಟ್ಯದ ಬಗ್ಗೆಯೂ ತಮ್ಮ ಅಭಿಪ್ರಾಯವನ್ನು ಕೊಟ್ಟರು.
ಒಟ್ಟಾರೆ ಒಂದೂವರೆ ಗಂಟೆ ನೆರೆದ ಸಭಿಕರ ಗಮನ, ಲಕ್ಷ್ಯವನ್ನು ಸೆಳೆಯಿತಲ್ಲದೇ ಮನರಂಜನೀಯವಾಗಿಯೂ ಇದ್ದದ್ದು ಈ ಕಾರ್ಯಕ್ರಮದ ಹೆಚ್ಚಳ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications