ಸಮ್ಮೇಳನದ ಯಶಸ್ಸಿಗೆ ಕಾರಣವಾದ ಸ್ವಯಂ ಸೇವಕ ತಂಡ
ಕೊನೆಯದಾಗಿ ಆದರೆ ಅತಿ ಮುಖ್ಯವಾಗಿ, ಸುಮಾರು ಒಂದು ವರ್ಷದಿಂದಲೂ ರೂಪುಗೊಳ್ಳುತ್ತಲಿದ್ದ ಈ ಸಾಹಿತ್ಯೋತ್ಸವವನ್ನು ಎರಡು ದಿನಗಳ ಕಾಲ ಕಾರ್ಯರೂಪಕ್ಕಿಳಿಸಲು ದುಡಿದ ಸಂಗಮದ ಹಾಗು ಕನ್ನಡ ಸಾಹಿತ್ಯ ರಂಗದ ಸ್ವಯಂಸೇವಕರನ್ನು ಸಭೆಗೆ ಪರಿಚಯಿಸಲಾಯಿತು.
ಇಂಥ ಒಂದು ಸಮ್ಮೇಳನವನ್ನು ನಡೆಸುವುದು ಸುಲಭದ ಮಾತಲ್ಲ, ಇದಕ್ಕೆ ಹಣ ಅದನ್ನು ಕೊಡುವ ಉದಾರ ದಾನಿಗಳು, ತೆರೆಯ ಹಿಂದಿದ್ದು ಮುಂದೆ ಬರುವ ಪ್ರತಿಯೊಂದು ಹೆಜ್ಜೆಯ ವಿವರಗಳನ್ನೂ ಮುಂದಾಲೋಚಿಸಿ ಕಾರ್ಯಕ್ರಮಗಳನ್ನು ಯೋಜಿಸುವ ಸಂಚಾಲಕರಿರಬೇಕು. ಸಾಹಿತ್ಯ ರಂಗದ ಸದಸ್ಯರು ದೇಶದ ವಿವಿಧ ಮೂಲೆಗಳಲ್ಲಿ ಹಂಚಿಹೋಗಿರುವುದರಿಂದ ಅವರ ಆಶಯಗಳನ್ನು ಕಾರ್ಯರೂಪಕ್ಕಿಳಿಸುವ ರೂವಾರಿಗಳಿರಬೇಕು.
ಸಂಗಮದ 2014ನೆಯ ಸಾಲಿನ ಅಧ್ಯಕ್ಷೆ ಜ್ಯೋತಿ ಅನಂತ್ ಮತ್ತು 2015 ಅವಧಿಯ ಅಧ್ಯಕ್ಷೆ ಶುಭಾ ಭಾಸ್ಕರ್ ಮತ್ತು ಅವರ ಕುಟುಂಬದವರಿಗೆ ಸಾಹಿತ್ಯ ರಂಗದ ಮನಃಪೂರ್ವಕ ನಮನಗಳು. ಅವರ ಹಿಂದೆ ನಿಂತು ಸಹಕರಿಸಿದವರ ಹೆಸರುಗಳನ್ನು ಪಟ್ಟಿಮಾಡಿದರೆ ತುಂಬಾ ಉದ್ದವಾಗುತ್ತದೆ, ಆದರೆ ಅವರೆಲ್ಲರೂ ನಮ್ಮ ಮನಸ್ಸಿನಲ್ಲಿ ಸದಾ ಇರುತ್ತಾರೆ ಮತ್ತು ನಮ್ಮ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಕಸಾರಂ ನಡೆಸುವ ಕಾರ್ಯಕ್ರಮಗಳು ಕಾಲಕ್ಕೆ ಸರಿಯಾಗಿ ಪ್ರಾರಂಭವಾಗಿ ಶಿಸ್ತಿನಿಂದ ನಡೆಯುತ್ತವೆ.
ಈ ಬಾರಿ ಸಮಯಪಾಲನೆಯ ನಿರ್ವಹಣೆ ಶ್ರೀವತ್ಸ ಜೋಶಿ ಮತ್ತು ಭಾಸ್ಕರ ಸುಬ್ಬರಾವ್ ಅವರ ನೇತೃತ್ವದಲ್ಲಿ ಅತ್ಯಂತ ಸಮರ್ಪಕವಾಗಿ ನಡೆಯಿತು. ಸಭಾಸದರೆಲ್ಲರೂ ಚಿಕಾಗೋ ಕನ್ನಡ ಕೂಟದ ಹಾಡುಗಾರರ ನಾಯಕತ್ವದಲ್ಲಿ ನಾಡಗೀತೆಯನ್ನು ಹಾಡುವುದರ ಮೂಲಕ ಏಳನೆಯ ಕನ್ನಡ ಸಾಹಿತ್ಯೋತ್ಸವಕ್ಕೆ ಮಂಗಳ ಹಾಡಲಾಯಿತು. ಎಂಟನೆಯ ಉತ್ಸವಕ್ಕೆ ಇನ್ನೂ ಎರಡು ವರ್ಷ ಕಾಯಬೇಕು!
ಸಮ್ಮೇಳನದ ಎಲ್ಲಾ ಚಿತ್ರಗಳನ್ನು ಕನ್ನಡ ಸಾಹಿತ್ಯ ರಂಗದ ಫೇಸ್ ಬುಕ್ ಪುಟದಲ್ಲಿ ನೋಡಬಹುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral













Click it and Unblock the Notifications