ಕನ್ನಡ ಸಾಹಿತ್ಯ ರಂಗದ 8ನೆಯ ವಸಂತ ಸಾಹಿತ್ಯೋತ್ಸವ!
ಕೇಳಿ ಕೇಳಿ, ಅಮೆರಿಕದ ಕನ್ನಡ ಸಾಹಿತ್ಯೋತ್ಸಾಹಿಗಳಿಗೆ ಸಂತಸದ ಸುದ್ದಿ! ಕನ್ನಡ ಸಾಹಿತ್ಯ ರಂಗದ (ಕಸಾರಂ) ಎಂಟನೆಯ ವಸಂತ ಸಾಹಿತ್ಯೋತ್ಸವದ ಸ್ಥಳ ಮತ್ತು ದಿನಾಂಕಗಳು ಇದೀಗ ನಿಶ್ಚಯಗೊಂಡಿವೆ.
2003ನೆಯ ಇಸವಿಯಿಂದ ಈವರೆಗೆ ಏಳು ವಸಂತ ಸಾಹಿತ್ಯೋತ್ಸವಗಳನ್ನು ಕ್ರಮಬದ್ಧವಾಗಿ ನಡೆಸಿ ಫಿಲಡೆಲ್ಫಿಯ, ಲಾಸ್ ಏಂಜಲೀಸ್, ಶಿಕಾಗೋ, ವಾಷಿಂಗ್ಟನ್ ಡಿ.ಸಿ. ಸ್ಯಾನ್ ಹೋಸೆ, ಹ್ಯೂಸ್ಟನ್ ಮತ್ತು ಸೇಂಟ್ ಲೂಯಿಸ್ ನಗರಗಳ ಸುತ್ತಮುತ್ತಲ ಕನ್ನಡಿಗರಿಗೆ ಶ್ರೀಮಂತ ಕನ್ನಡ ಸಾಹಿತ್ಯದ ವಿವಿಧ ಮುಖಗಳನ್ನು ಪರಿಚಯಮಾಡಿಕೊಟ್ಟು, ವಿವಿಧ ಮೂಲವಸ್ತುಗಳನ್ನೊಳಗೊಂಡ ಹಲವು ಹತ್ತು ಪುಸ್ತಕಗಳನ್ನು ಪ್ರಕಟಿಸಿ, ಕರ್ನಾಟಕದ ಹತ್ತಾರು ಹೆಸರಾಂತ ಲೇಖಕರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಿ ಅಮೆರಿಕದ ಕನ್ನಡ ಬರಹಗಾರರನ್ನು ಕನ್ನಡ ಸಾಹಿತ್ಯ ರಂಗ ಪ್ರೋತ್ಸಾಹಿಸುತ್ತಾ ಬಂದಿದೆ.
ನ್ಯೂ ಇಂಗ್ಲೆಂಡ್ ಕನ್ನಡ ಕೂಟ "ಮಂದಾರ"ದ ಆಶ್ರಯದಲ್ಲಿ ಮುಂದಿನ ವಸಂತ ಸಾಹಿತ್ಯೋತ್ಸವ ನಡೆಯಲಿದೆ. ಸೆಪ್ಟೆಂಬರ್ 17ರಂದು ಮಂದಾರದ ಸದಸ್ಯರು ಆಚರಿಸಿದ ಗಣೇಶೋತ್ಸವದ ಶುಭ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ರಂಗದ ಕಾರ್ಯಕಾರೀ ಸಮಿತಿಯ ಅಧ್ಯಕ್ಷರಾದ ಡಾ. ಮೈ. ಶ್ರೀ. ನಟರಾಜರು ಭಾಗವಹಿಸಿ, ಸಂಸ್ಥೆಯ ಮೂಲೋದ್ದೇಶಗಳು ಮತ್ತು ಅದರ ಹದಿಮೂರು ವರ್ಷಗಳ ಇತಿಹಾಸವನ್ನು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ನ್ಯೂ ಇಂಗ್ಲೆಂಡ್ ಕನ್ನಡಿಗರಿಗೆ ಪರಿಚಯ ಮಾಡಿಕೊಟ್ಟರು. [ಏಳನೆಯ ವಸಂತ ಸಾಹಿತ್ಯೋತ್ಸವ, ಒಂದು ವರದಿ]

ಮುಂದಿನ ವಸಂತ ಸಾಹಿತ್ಯೋತ್ಸವ ನಡೆಸುವ ಬಗ್ಗೆ ಕಸಾರಂ ಮತ್ತು ಮಂದಾರ ಸಂಸ್ಥೆಗಳು ಪರಸ್ಪರ ಮಾಡಿಕೊಂಡ ಒಪ್ಪಂದಕ್ಕೆ ಮೈ.ಶ್ರೀ. ನಟರಾಜ ಮತ್ತು ಮಂದಾರದ ಅಧ್ಯಕ್ಷ ಡಾ. ಸುಧಾಕರ ರಾವ್ ಅವರುಗಳು ಸಭಿಕರ ಸಮ್ಮುಖದಲ್ಲಿ ಸಹಿ ಹಾಕುವುದರ ಮೂಲಕ ಎಂಟನೆಯ ಸಮ್ಮೇಳನದ ತಯಾರಿಗೆ ಔಪಚಾರಿಕ ಪ್ರಾರಂಭವನ್ನು ಮಾಡಿದರು.
ಬಾಸ್ಟನ್ ಪ್ರದೇಶದಲ್ಲಿ 2017ರ ಏಪ್ರಿಲ್ ಕೊನೆಯ ವಾರಾಂತ್ಯದಲ್ಲಿ (29 ಮತ್ತು 30ನೆಯ ತಾರೀಖು) ನಡೆಯಲಿರುವ ಈ ಬಾರಿಯ ಸಮ್ಮೇಳನದ ಮೂಲ ವಸ್ತು (ಥೀಮ್) "ಭಕ್ತಿ ಸಾಹಿತ್ಯ." ಇದೇ ವಿಷಯವನ್ನು ಕುರಿತು ಪ್ರಮುಖ ಭಾಷಣ ಮಾಡಲು ಕರ್ನಾಟಕದಿಂದ ಲಕ್ಷ್ಮೀಶ ತೋಲ್ಪಾಡಿಯವರು ಮುಖ್ಯ ಅತಿಥಿಗಳಾಗಿ ಬರಲು ಒಪ್ಪಿದ್ದಾರೆ. [ಅನುವಾದದ ಆಗು-ಹೋಗು : ವಿದ್ವತ್ಪೂರ್ಣ ಭಾಷಣ]
ಅಮೆರಿಕದ ಕನ್ನಡ ಸಾಹಿತ್ಯಪ್ರಿಯರೇ, ದಯವಿಟ್ಟು ದಿನಾಂಕ ಮತ್ತು ಸಾಹಿತ್ಯದ ಹಬ್ಬ ನಡೆಯುವ ಊರು ಇವೆರಡನ್ನೂ ಗುರುತು ಹಾಕಿಕೊಳ್ಳಿ. ಈಗಾಗಲೇ ಭಕ್ತಿಸಾಹಿತ್ಯದ ವಿವಿಧ ಮುಖಗಳನ್ನು ಪರಿಚಯಿಸುವ ಅಮೆರಿಕದ ಬರಹಗಾರರೇ ಬರೆದ ಲೇಖನಗಳ ಸಂಗ್ರಹದ ಪುಸ್ತಕವನ್ನು ಸಿದ್ಧಗೊಳಿಸಲು ಕಸಾರಂ ಸಂಪಾದಕ ಮಂಡಲಿ ಭರದಿಂದ ಕಾರ್ಯ ಪ್ರಾರಂಭಿಸಿದೆ.
ಎಂದಿನಂತೆ, ಕವಿಗೋಷ್ಠಿ, ಪ್ರಬಂಧಗಳ ಮಂಡನೆ, ಪುಸ್ತಕಗಳ ಲೋಕಾರ್ಪಣೆ ಮತ್ತು ಲೇಖಕರ ಪರಿಚಯ, ಪುಸ್ತಕಗಳ ಮಳಿಗೆ, ಅತಿಥಿಗಳೊಂದಿಗೆ ಪ್ರಶ್ನೋತ್ತರಗಳು, ಮಂದಾರ ಕಲಾವಿದರ ಉತ್ತಮ ಮಟ್ಟದ ಮನರಂಜನೆ, ಜೊತೆಗೆ ರಸದೌತಣ, ಇವನ್ನೆಲ್ಲ ತಪ್ಪಿಸಿಕೊಳ್ಳಬೇಡಿ, 2017, ಏಪ್ರಿಲ್ ತಿಂಗಳಿನ 29 ಮತ್ತು 30ರ ದಿನಗಳನ್ನು ಕಾದಿರಿಸಿಕೊಳ್ಳಿ.
ಹ್ಞಾ! ಮತ್ತೊಂದು ಬಹುಮುಖ್ಯ ವಿಷಯ. ಮಹಾಭಾರತ, ರಾಮಾಯಣ, ಭಾಗವತ, ಭಗವದ್ಗೀತೆ ಮತ್ತಿತರ ತಾತ್ವಿಕ ವಿಷಯಗಳ ಬಗ್ಗೆ ನಿರರ್ಗಳವಾಗಿ ಅಧಿಕಾರವಾಣಿಯಿಂದ ಮಾತಾಡಬಲ್ಲ ಶ್ರೀ ಲಕ್ಷ್ಮೀಶ ತೋಳ್ಪಾಡಿಯವರನ್ನು ನಿಮ್ಮೂರಿಗೆ ಕರೆಸಿಕೊಳ್ಳಬೇಕಾ? ಆಸಕ್ತಿಯಿದ್ದವರು ನಮ್ಮೊಡನೆ ತಕ್ಷಣ ಪ್ರಸ್ತಾಪಿಸಿದರೆ ಉಪಕಾರವಾದೀತು. [ಕಾವ್ಯಾನುವಾದ : ಇಫ್ ಐ ವರ್ ದ ಲಾರ್ಡ್ ಆಫ್ ಟಾರ್ಟರಿ]
ಕಸಾರಂ ಆಡಳಿತ ಮಂಡಲಿ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications