ನಾವಿಕದಿಂದ ಬೆಂಗಳೂರಿನಲ್ಲಿ 'ನಮ್ಮ ವಿಶ್ವ ಕನ್ನಡ' ಉತ್ಸವ
ಬೆಂಗಳೂರು, ಜನವರಿ 04 : ನಾರ್ಥ್ ಅಮೆರಿಕ ವಿಶ್ವ ಕನ್ನಡ ಅಸೋಸಿಯೇಷನ್ (ನಾವಿಕ) ಸಂಘಟನೆಯು ನಮ್ಮ ವಿಶ್ವ ಕನ್ನಡ ಉತ್ಸವ ಹೆಸರಲ್ಲಿ ಬೆಂಗಳೂರಿನಲ್ಲಿ 2016ರ ಜುಲೈ ತಿಂಗಳಲ್ಲಿ ನಾವಿಕೋತ್ಸವ ಹಮ್ಮಿಕೊಳ್ಳಲಿದೆ.
ನಾವಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಮೆರಿಕದ ಫ್ಲಾರಿಡಾದ ಖ್ಯಾತ ಪ್ರಸೂತಿ ತಜ್ಞೆ ಡಾ.ರೇಣುಕಾ ರಾಮಪ್ಪ ಅವರಿಗೆ ಭಾನುವಾರ ಸನ್ಮಾನ ಸಮಾರಂಭ ಏರ್ಪಡಿಸಿದ್ದ ವೇಳೆ ಈ ವಿಷಯ ಪ್ರಕಟಿಸಿದರು.
ಇದೊಂದು ಬಹುದೊಡ್ಡ ಸಮಾವೇಶವಾಗಿರಲಿದ್ದು, ರಾಜ್ಯ ಸರ್ಕಾರ, ವಿವಿಧ ಸರ್ಕಾರಿ ಸಂಸ್ಥೆಗಳು, ಕನ್ನಡ ಸಂಘಟನೆಗಳು, ಸಾಹಿತಿಗಳ ಸಹಿತ ಹಲವರೊಂದಿಗೆ ಚರ್ಚಿಸಿ ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದು ಡಾ.ರೇಣುಕಾ ರಾಮಪ್ಪ ಹೇಳಿದರು. ['ನಾವಿಕ' ಸಮ್ಮೇಳನ ಹೈಲೈಟ್ಸ್ ಮತ್ತು ಸೈಡ್ ಲೈಟ್ಸ್]

ಅಮೆರಿಕದಲ್ಲಿ ಈ ಮೊದಲು ನಾವಿಕದ ವತಿಯಿಂದ ಹಲವಾರು ಕನ್ನಡ ಸಂಬಂಧಿತ ಸಮಾವೇಶಗಳು, ಕಾರ್ಯಕ್ರಮಗಳು ನಡೆದಿವೆ. ಇದೀಗ ನಾವಿಕವು ಬೆಂಗಳೂರು ನಗರದಲ್ಲಿ ಕನ್ನಡಿಗರ ವಿಶ್ವ ಸಮಾವೇಶ ಹಮ್ಮಿಕೊಳ್ಳುತ್ತಿದೆ ಎಂದು ಅವರು ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್.ಹನುಮಂತಯ್ಯ ಅವರು ಡಾ.ರೇಣುಕಾ ರಾಮಪ್ಪ ಅವರನ್ನು ಸನ್ಮಾನಿಸಿದರು. ಉದ್ದೇಶಿತ ವಿಶ್ವ ಕನ್ನಡ ಸಮಾವೇಶಕ್ಕೆ ಎಲ್ಲ ನೆರವು ನೀಡುವುದಾಗಿ ಹನುಮಂತಯ್ಯ ಅವರು ಭರವಸೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ರಂಗಕರ್ಮಿ ಬಿ.ವಿ.ರಾಜಾರಾಂ, ನಟ, ನಿರ್ದೇಶಕ ಯಶವಂತ ಸರ್ದೇಶಪಾಂಡೆ ಇತರರು ಇದ್ದರು.
ಮನವಿ : ಈ ಸಮಾವೇಶದಲ್ಲಿ ಭಾಗವಹಿಸುವ ಆಸಕ್ತಿ ಹೊಂದಿರುವ ಕನ್ನಡ ಸಂಘಟನೆಗಳು, ಸಾಹಿತಿಗಳು, ಬರಹಗಾರರು, ಕಲಾವಿದರು ತಮ್ಮನ್ನು ತಕ್ಷಣ ಸಂಪರ್ಕಿಸುವಂತೆ ಯಶವಂತ ಸರ್ದೇಶಪಾಂಡೆ ಅವರು ಮನವಿ ಮಾಡಿದ್ದಾರೆ. ಮಾಹಿತಿಗೆ [email protected] ಅಥವಾ 9845217869 ಸಂಪರ್ಕಿಸಬಹುದು.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications