40ರ ಸಂಭ್ರಮದ ಕೆಕೆಎನ್ಸಿಯಲ್ಲಿ 'ಕನ್ನಡೋತ್ಸವ'
ನಲವತ್ತು ವರ್ಷ ಪೂರೈಸಿರುವ ಕನ್ನಡ ಕೂಟ ಉತ್ತರ ಕ್ಯಾಲಿಫೋರ್ನಿಯಾ(ಕೆಕೆಎನ್ ಸಿ)ದಲ್ಲಿ ಶನಿವಾರ, ಸೆಪ್ಟೆಂಬರ್ 21ರಂದು 'ಕನ್ನಡೋತ್ಸವ'ದ ಸಂಭ್ರಮ. ಈ ಸುಸಂದರ್ಭದಲ್ಲಿ ಸುಮಾರು ನೆರೆಯ 40 ರಾಜ್ಯಗಳಲ್ಲಿರುವ ಸಂಸ್ಥೆಗಳು ಕೂಡ ಈ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಹಲವಾರು ಕಲಾವಿದರು ಪ್ರತಿಭಾ ಪ್ರದರ್ಶನ ನೀಡಲಿದ್ದಾರೆ.
ಪಾಲೋ ಆಲ್ಟೋದಲ್ಲಿರುವ ಗನ್ ಹೈಸ್ಕೂಲ್ ನಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿರುವ ಕನ್ನಡೋತ್ಸವ ಸಮಾರಂಭದಲ್ಲಿ ಭಾರತದಿಂದ ಆಗಮಿಸಿರುವ 6 ಯಕ್ಷಗಾನ ಕಲಾವಿದರು ಪ್ರಾಚೀನ ನೃತ್ಯಕಲೆಯ ರಸದೌತಣವನ್ನು ಕಲಾಪ್ರೇಮಿಗಳಿಗೆ ಬಡಿಸಲಿದ್ದಾರೆ. ನಟ, ನಿರ್ದೇಶಕ ಶ್ರೀನಾಥ್ ವಸಿಷ್ಠ ಅವರು ಅಣಕು ಗೀತೆಗಳನ್ನು ಹಾಡಿ ಅಮೆರಿಕನ್ನಡಿಗರನ್ನು ರಂಜಿಸಲಿದ್ದಾರೆ.

ಇದೆಲ್ಲದರ ಜೊತೆಗೆ, ಹಲವಾರು ಸ್ಥಳೀಯ ಕಲಾವಿದರು ಹಾಡು, ನರ್ತನ, ನಾಟಕ ಮುಂತಾದ ಸಾಂಸ್ಕೃತಿ ಕಾರ್ಯಕ್ರಮ ನೀಡಲಿದ್ದಾರೆ. ಪರಿವಾರದೊಂದಿಗೆ ಬಂದು ಈ ಸಡಗರದಲ್ಲಿ ಪಾಲ್ಗೊಳ್ಳಬೇಕು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಸ್ವಾದಿಸಿ, ಸ್ವಾದಿಷ್ಟಕರ ಭೋಜನ ಸ್ವೀಕರಿಸಿ, ಎಲ್ಲರೊಂದಿಗೆ ಹರಟೆ ಹೊಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೆಕೆಎನ್ ಸಿ ಕೋರಿದೆ.
ಪ್ರಮುಖ ಕಾರ್ಯಕ್ರಮಗಳು
3:00PM - ಸಂಧ್ಯಾ ಸುಬ್ಬರಾಮೂ ಮತ್ತು ತಂಡದಿಂದ ಪ್ರಾರ್ಥನೆ
3:15PM - ವೀಣಾ ಗಿರೀಶ ಮತ್ತು ತಂಡದಿಂದ ಜನಪದ ನೃತ್ಯ
3:25PM - ಮಮತಾ ಮಿತ್ರ ಮತ್ತು ತಂಡದಿಂದ ಸ್ಯಾಂಡಲ್ವುಡ್ ಮೆಡ್ಲೆ
3:40PM - ರಾಮಪ್ರಸಾದ್ ಕೆವಿ ಮತ್ತು ತಂಡದಿಂದ ಕನ್ನಡ ನಾಟಕ ಗಬ್ಬರ್ ಸಿಂಗ್ V2.0
4:15PM - ಶ್ರೀನಾಥ ವಸಿಷ್ಠ (ಭಾರತ) ಅವರಿಂದ ಅಣಕು ಗೀತೆಗಳು (ಹಾಸ್ಯ)
5:15PM - ಪೂರ್ಣಚಂದ್ರ ಯಕ್ಷಗಾನ ಪ್ರತಿಷ್ಠಾನ(ಭಾರತ)ದಿಂದ ಸುಧನ್ವಾರ್ಜುನ ಯಕ್ಷಗಾನ ಪ್ರಸಂಗ
6:15PM - ಊಟದ ಸಮಯ
6:50PM - ಯಕ್ಷಗಾನ ಮುಂದುವರಿಕೆ...
8:00PM - 'ಭಾಷಾ ತರಂಗ' ನೆರೆಯ ರಾಜ್ಯಗಳ ನೃತ್ಯ ಪ್ರದರ್ಶನ
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications