40ರ ಸಂಭ್ರಮದ ಕೆಕೆಎನ್ಸಿಯಲ್ಲಿ 'ಕನ್ನಡೋತ್ಸವ'
ನಲವತ್ತು ವರ್ಷ ಪೂರೈಸಿರುವ ಕನ್ನಡ ಕೂಟ ಉತ್ತರ ಕ್ಯಾಲಿಫೋರ್ನಿಯಾ(ಕೆಕೆಎನ್ ಸಿ)ದಲ್ಲಿ ಶನಿವಾರ, ಸೆಪ್ಟೆಂಬರ್ 21ರಂದು 'ಕನ್ನಡೋತ್ಸವ'ದ ಸಂಭ್ರಮ. ಈ ಸುಸಂದರ್ಭದಲ್ಲಿ ಸುಮಾರು ನೆರೆಯ 40 ರಾಜ್ಯಗಳಲ್ಲಿರುವ ಸಂಸ್ಥೆಗಳು ಕೂಡ ಈ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಹಲವಾರು ಕಲಾವಿದರು ಪ್ರತಿಭಾ ಪ್ರದರ್ಶನ ನೀಡಲಿದ್ದಾರೆ.
ಪಾಲೋ ಆಲ್ಟೋದಲ್ಲಿರುವ ಗನ್ ಹೈಸ್ಕೂಲ್ ನಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿರುವ ಕನ್ನಡೋತ್ಸವ ಸಮಾರಂಭದಲ್ಲಿ ಭಾರತದಿಂದ ಆಗಮಿಸಿರುವ 6 ಯಕ್ಷಗಾನ ಕಲಾವಿದರು ಪ್ರಾಚೀನ ನೃತ್ಯಕಲೆಯ ರಸದೌತಣವನ್ನು ಕಲಾಪ್ರೇಮಿಗಳಿಗೆ ಬಡಿಸಲಿದ್ದಾರೆ. ನಟ, ನಿರ್ದೇಶಕ ಶ್ರೀನಾಥ್ ವಸಿಷ್ಠ ಅವರು ಅಣಕು ಗೀತೆಗಳನ್ನು ಹಾಡಿ ಅಮೆರಿಕನ್ನಡಿಗರನ್ನು ರಂಜಿಸಲಿದ್ದಾರೆ.

ಇದೆಲ್ಲದರ ಜೊತೆಗೆ, ಹಲವಾರು ಸ್ಥಳೀಯ ಕಲಾವಿದರು ಹಾಡು, ನರ್ತನ, ನಾಟಕ ಮುಂತಾದ ಸಾಂಸ್ಕೃತಿ ಕಾರ್ಯಕ್ರಮ ನೀಡಲಿದ್ದಾರೆ. ಪರಿವಾರದೊಂದಿಗೆ ಬಂದು ಈ ಸಡಗರದಲ್ಲಿ ಪಾಲ್ಗೊಳ್ಳಬೇಕು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಸ್ವಾದಿಸಿ, ಸ್ವಾದಿಷ್ಟಕರ ಭೋಜನ ಸ್ವೀಕರಿಸಿ, ಎಲ್ಲರೊಂದಿಗೆ ಹರಟೆ ಹೊಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೆಕೆಎನ್ ಸಿ ಕೋರಿದೆ.
ಪ್ರಮುಖ ಕಾರ್ಯಕ್ರಮಗಳು
3:00PM - ಸಂಧ್ಯಾ ಸುಬ್ಬರಾಮೂ ಮತ್ತು ತಂಡದಿಂದ ಪ್ರಾರ್ಥನೆ
3:15PM - ವೀಣಾ ಗಿರೀಶ ಮತ್ತು ತಂಡದಿಂದ ಜನಪದ ನೃತ್ಯ
3:25PM - ಮಮತಾ ಮಿತ್ರ ಮತ್ತು ತಂಡದಿಂದ ಸ್ಯಾಂಡಲ್ವುಡ್ ಮೆಡ್ಲೆ
3:40PM - ರಾಮಪ್ರಸಾದ್ ಕೆವಿ ಮತ್ತು ತಂಡದಿಂದ ಕನ್ನಡ ನಾಟಕ ಗಬ್ಬರ್ ಸಿಂಗ್ V2.0
4:15PM - ಶ್ರೀನಾಥ ವಸಿಷ್ಠ (ಭಾರತ) ಅವರಿಂದ ಅಣಕು ಗೀತೆಗಳು (ಹಾಸ್ಯ)
5:15PM - ಪೂರ್ಣಚಂದ್ರ ಯಕ್ಷಗಾನ ಪ್ರತಿಷ್ಠಾನ(ಭಾರತ)ದಿಂದ ಸುಧನ್ವಾರ್ಜುನ ಯಕ್ಷಗಾನ ಪ್ರಸಂಗ
6:15PM - ಊಟದ ಸಮಯ
6:50PM - ಯಕ್ಷಗಾನ ಮುಂದುವರಿಕೆ...
8:00PM - 'ಭಾಷಾ ತರಂಗ' ನೆರೆಯ ರಾಜ್ಯಗಳ ನೃತ್ಯ ಪ್ರದರ್ಶನ
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications