'ಕರ್ನಾಟಕ ಸಂಘ ಕತಾರ್' ಕಾರ್ಯಕಾರಿ ಸಮಿತಿಯ ಸಂಪೂರ್ಣ ವಿವರ
ಭಾರತದ ರಾಯಭಾರಿ ಕಚೇರಿಯ ಬೆಂಬಲ ಹಾಗೂ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತದ ಸಾಂಸ್ಕೃತಿಕ ಕೇಂದ್ರದ ಸಂಯೋಜಿತ ಸಂಸ್ಥೆ 'ಕರ್ನಾಟಕ ಸಂಘ ಕತಾರ್'ಗೆ 2018-19ನೇ ಸಾಲಿಗೆ ಹೊಸ ಕಾರ್ಯಕಾರಿ ಸಮಿತಿ ರಚಿಸಲು ಇತ್ತೀಚೆಗೆ ಚುನಾವಣೆ ನಡೆಸಿತು.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಭಾರತದ ರಾಯಭಾರಿ ಕಚೇರಿಯು ರಚಿಸಿ, ಅಂತಿಮಗೊಳಿಸಿದ ನೂತನ ಸಂವಿಧಾನದ ಅನುಗುಣವಾಗಿ ಈ ಪ್ರಕ್ರಿಯೆ ನಡೆಸಲಾಯಿತು. ಅಂದಹಾಗೆ ಭಾರತದ ಸಾಂಸ್ಕೃತಿಕ ಕೇಂದ್ರದ ಸಹಸಂಸ್ಥೆಗಳ ಪೈಕಿ ಈ ನೂತನ ಸಂವಿಧಾನವನ್ನು ಅಳವಡಿಸಿಕೊಂಡ ಪ್ರಪ್ರಥಮ ಸಂಸ್ಥೆ 'ಕರ್ನಾಟಕ ಸಂಘ ಕತಾರ್'.

ಚುನಾವಣೆಯಲ್ಲಿ ವೆಂಕಟ ರಾವ್ ನೂತನ ಅಧ್ಯಕ್ಷರಾಗಿ ಆಯ್ಕೆ ಆದರು. ಅಧ್ಯಕ್ಷರೊಂದಿಗೆ ಹತ್ತು ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಕೂಡ ಆಯ್ಕೆ ಮಾಡಲಾಯಿತು. ವೆಂಕಟ ರಾವ್ ಅವರು ಹಿಂದಿನ ಕಾರ್ಯಕಾರಿ ಸಮಿತಿಯ ಅವಧಿಯಲ್ಲಿ ಹಿರಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಇವರು ಕತಾರಿನ ಖ್ಯಾತ ಸಂಸ್ಥೆಯೊಂದರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ಕಾರ್ಯ ನಿರ್ವಹಿಸುತ್ತಿದ್ದಾರೆ.
ವೆಂಕಟ ರಾವ್ ಅವರು ಚುನಾಯಿಸಿ ಬಂದ ಸದಸ್ಯರಲ್ಲಿ ವಿಭಿನ್ನ ಖಾತೆಗಳನ್ನು ಹಂಚಿದರು. ಸಂಘದ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷರಾಗಿ ರವಿಶೆಟ್ಟಿಯವರನ್ನು ನೇಮಿಸಲಾಯಿತು. ರವಿಶೆಟ್ಟಿಯವರು ಕತಾರಿನಲ್ಲಿ ನೆಲೆಸಿರುವ ಭಾರತದ ಸಮುದಾಯದ ಖ್ಯಾತ ನಾಯಕರಲ್ಲಿ ಒಬ್ಬರು. ನಿಕಟಪೂರ್ವ ಅಧ್ಯಕ್ಷರಾದ ಎಚ್.ಕೆ. ಮಧು ಅವರು ಸಲಹಾ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ನೂತನ ಸಮಿತಿಯ ಕಾರ್ಯಕಾರಿ ಹುದ್ದೆ ಪಡೆದವರ ಪಟ್ಟಿ ಇಂತಿದೆ:
ವೆಂಕಟ ರಾವ್- ಅಧ್ಯಕ್ಷ
ರವಿಶೆಟ್ಟಿ ಎಂ.- ಉಪಾಧ್ಯಕ್ಷ
ಸಂದೀಪ್ ಡಿ.ಎಸ್.- ಪ್ರಧಾನ ಕಾರ್ಯದರ್ಶಿ
ಮುರಳೀಧರ ರಾವ್- ಖಜಾಂಚಿ
ಎಚ್.ಕೆ. ಮಧು- ಸಲಹಾ ಮಂಡಳಿ ಅಧ್ಯಕ್ಷ
ಅಶ್ವಿನ್ ಪಿ ಕುಮಾರ್- ಸಾಂಸ್ಕೃತಿಕ ಕಾರ್ಯದರ್ಶಿ
ಅನಿಲ್ ಬೋಳೂರ್- ಕ್ರೀಡಾ ಕಾರ್ಯದರ್ಶಿ
ದಿನೇಶ್ ಗೌಡ- ಲಾಜಿಸ್ಟಿಕ್ಸ್ ಮತ್ತು ವಿಶಿಷ್ಟ ಅಗತ್ಯಗಳ ಸಂಯೋಜಕರು
ಯೋಗೀಶ್ ಪೈ- ಜಂಟಿ ಕಾರ್ಯದರ್ಶಿ ಹಾಗೂ ಸದಸ್ಯತ್ವದ ಸಂಯೋಜಕರು
ರಶ್ಮಿ ಜಯರಾಮ- ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ
ಆಶಾ ನಂಜಪ್ಪ- ಮಹಿಳಾ ಮತ್ತು ಮಕ್ಕಳ ವಿಭಾಗದ ಸಂಯೋಜಕರು
ಶಶಿಧರ ಹೆಬ್ಬಾಳ- ಪರಿಸರ ಹಾಗೂ ಕನ್ನಡ ಸಂಬಂಧಿತ ಸಂಯೋಜಕರು
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications