ಕವಿ ಕಯ್ಯಾರ ನೂರು : ದುಬೈನಲ್ಲಿ ಕವಿಗೋಷ್ಠಿ

ಕಾಸರಗೋಡಿನ ಕನ್ನಡಿಗರು ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆಂಬ ಆಶಯವನ್ನು ಹೊಂದಿದ್ದು, ಹಲವು ದಶಕಗಳಿಂದ ಹೋರಾಟ ನಡೆಸಿದರೂ ಕರ್ನಾಟಕದ ಜನತೆಯ ಅಸಹಕಾರದಿಂದ ಮತ್ತು ನಮ್ಮ ರಾಜ್ಯದ ರಾಜಕಾರಣಿಗಳ ಇಚ್ಛಾ ಶಕ್ತಿಯ ಕೊರತೆಯಿಂದ ಗಡಿ ವಿವಾದ ಮುಗಿದುಹೋದ ಅಧ್ಯಾಯವೆ ಆದಂತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಕಾಸರಗೋಡಿನಲ್ಲಿ ಸತತವಾಗಿ ಚಳವಳಿಯ ಮುಂಚೂಣಿಯಲಿದ್ದು ಹೋರಾಟ ನಡೆಸುತ್ತಾ ಬಂದ ಹಿರಿಯ ಚೇತನ ಕಯ್ಯಾರ ಕಿಞ್ಞಣ್ಣ ರೈ ಅವರಿಗೆ ಜೂನ್ 8, 2014ರಂದು ನೂರು ವರ್ಷ ತುಂಬುತ್ತಿರುವಾಗ ಅವರಿಗೆ ಗೌರವ ಸಲ್ಲಿಸುವುದು ಕನ್ನಡಿಗರೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ವಿದೇಶಿ ನೆಲದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಂದಿನ ಯೋಜನೆಯನ್ನು ವಿವರಿಸಿದರು.
ಗೋಷ್ಠಿಯಲ್ಲಿ ಕವಿಗಳಾದ ಇರ್ಶಾದ್ ಮೂಡುಬಿದ್ರಿ, ಇರಣ್ಣ ಮೂಲಿಮನಿ, ಗೋಪಿನಾಥ್ ರಾವ್, ಮಧುಸೂದನ್, ಅರ್ಶದ್ ಹುಸೇನ್ ಮತ್ತು ಪ್ರಕಾಶ್ ರಾವ್ ಪಯ್ಯಾರ್ ತಮ್ಮ ಕವನ ವಾಚಿಸಿದರು. ಗಣೇಶ್ ರೈ ಅವರು ಕಯ್ಯಾರರ ಜೀವನ ಮತ್ತು ಕಾವ್ಯದ ಬಗ್ಗೆ ವಿವರಣೆ ನೀಡಿದರು.
ಇದೆ ಸಂದರ್ಭದಲ್ಲಿ ಹಲವಾರು ವರ್ಷಗಳಿಂದ ಧ್ವನಿ ಪ್ರತಿಷ್ಠಾನದ ಸದಸ್ಯರಾಗಿ, ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿ ತಾಯಿನಾಡಿಗೆ ಮರಳುತ್ತಿರುವ ಮಧುಸೂದನ ಹಾಗೂ ಜಯಶ್ರೀ ಮಧುಸೂದನ್ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಚಿಲ್ಲಿ ವಿಲ್ಲಿ ಫ಼ೂಡ್ ಪ್ರೊಡಕ್ಟ್ ಸಂಸ್ಥೆಯ ಆಡಳಿತ ನಿರ್ದೇಶಕ ಸತೀಶ್ ವೆಂಕಟರಮಣ, ರಿಲೈಬಲ್ ಫ್ಯಾಬ್ರಿಕೆಟರ್ಸ್ ಎಲ್.ಎಲ್.ಸಿ.ನ ಆಡಳಿತ ನಿರ್ದೇಶಕ ಜೇಮ್ಸ್ ಮೆಂಡೊನ್ಸಾ, ರೇಡಿಯೊ ಸ್ಪಯ್ಸ್ ನ ಆಡಳಿತ ನಿರ್ದೇಶಕ ಹರ್ಮನ್ ಲೂಯಿಸ್ ಅವರು ಮುಖ್ಯ ಆತಿಥಿಗಳಾಗಿ ಉಪಸ್ಥಿತರಿದ್ದರು. ಯು.ಎ.ಇ.ಯ ಎಲ್ಲಾ ಕನ್ನಡ ಪರ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸೋನಿಯಾ ಗೌತಮ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮ ಜಯಂತ್ ಶೆಟ್ಟಿಯವರ ವಂದನೆಯೊಂದಿಗೆ ಮುಕ್ತಾಯವಾಯಿತು. ಕಾರ್ಯಕ್ರಮದ ನಿರ್ವಹಣೆಯ ಹೊಣೆಯನ್ನು ಸುದರ್ಶನ ಹೆಗ್ದೆ ಅವರು ವಹಿಸಿದ್ದರು. ಪದ್ಮರಾಜ್ ಎಕ್ಕಾರ್, ಸಂಪತ್ ಶೆಟ್ಟಿ, ಸಂತೋಷ್ ಪೂಜಾರಿ, ಗಣೇಶ್ ಕುಲಾಲ್ ಮುಂತಾದವರು ಸಹಕರಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications