ಸೃಜನಶೀಲತೆಗೆ ಸಾಣೆ ಹಿಡಿಯಿರಿ, ಸ್ಪರ್ಧೆಗೆ ಕಥೆ ಬರೆಯಿರಿ
ಕನ್ನಡ ಕೂಟ ಉತ್ತರ ಕ್ಯಾಲಿಫೋರ್ನಿಯಾದ ಸ್ವರ್ಣಸೇತು 2015ರ ಸಮಿತಿಯು ಅಮೆರಿಕನ್ನಡಿಗರಿಗಾಗಿ ಕನ್ನಡ ಕಥಾಸ್ಪರ್ಧೆಯೊಂದನ್ನು ಆಯೋಜಿಸಿದೆ. ಸೃಜನಶೀಲತೆಗೆ ಕಥೆಯ ರೂಪ ಕೊಡಲು, ನಿಮ್ಮಲ್ಲಿನ ಕಥೆಗಾರನನ್ನು ಪ್ರೋತ್ಸಾಹಿಸಲು. ಕಥೆಯನ್ನು ಇಲ್ಲಿನ ಕನ್ನಡ ಮನೆಮನಗಳಿಗೆ ತಲುಪಿಸಲು ಇದೊಂದು ಸದವಕಾಶ. [ಅನಿವಾಸಿ ಭಾರತೀಯರ ಸಣ್ಣಕಥೆಗಳು]

ಸ್ಪರ್ಧೆಯ ನಿಯಮಗಳು
* ಕಥೆ ಎರಡು ಸಾವಿರ ಶಬ್ದಗಳನ್ನು ಮೀರದಿರಲಿ.
* ಕಥೆಗಳು ಬೇರೆಲ್ಲೂ (ಅಂತರ್ಜಾಲ ಮತ್ತು ಮುದ್ರಿತ ಮಾಧ್ಯಮ) ಪ್ರಕಟವಾಗಿರಬಾರದು.
* ಒಬ್ಬರು ಒಂದಕ್ಕಿಂತ ಹೆಚ್ಚು ಕಥೆ ಕಳುಹಿಸುವಂತಿಲ್ಲ.
* ಅಮೆರಿಕದ ಎಲ್ಲಾ ಕನ್ನಡಿಗರಿಗೂ ಭಾಗವಹಿಸುವ ಅವಕಾಶವಿದೆ.
* ಕಥೆಗಳು ಬರಹ, ನುಡಿ ಅಥವಾ ಯುನಿಕೋಡ್ ತಂತ್ರಾಂಶದಲ್ಲಿರಬೇಕು. ಕೈಬರಹದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.
* ಆಯ್ದ ಕಥೆಗಳಿಗೆ ಬಹುಮಾನವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮ.
* ಆಯ್ದ ಕಥೆಗಳನ್ನು ಸ್ವರ್ಣಸೇತು - 2015ರಲ್ಲಿ ಪ್ರಕಟಿಸಲಾಗುವುದು. ಪರಿಷ್ಕರಿಸಿ ಪ್ರಕಟಿಸುವ ಹಕ್ಕು ಸ್ವರ್ಣಸೇತು-2015ರ ಸಂಪಾದಕ ಸಮಿತಿಗೆ ಸೇರಿದ್ದು.
* ಕಥೆಯ ಜೊತೆಗೆ ಲೇಖಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ಮಿಂಚಂಚೆ ವಿಳಾಸ (email ID)ಕಳುಹಿಸಬೇಕು.
* ನಿಮ್ಮ ಕಥೆಗಳು ನಮಗೆ ತಲುಪಲು ಅಂತಿಮ ದಿನಾಂಕ ಆಗಸ್ಟ್ 31, 2015,
* ನಿಮ್ಮ ಕಥೆಗಳನ್ನು ಕಳುಹಿಸಬೇಕಾದ ವಿಳಾಸ - [email protected]
ಮಕ್ಕಳಿಗೂ ಕಥಾಸ್ಪರ್ಧೆ
ಇದರ ಜೊತೆ ಅಮೆರಿಕದಲ್ಲಿ ಕನ್ನಡ ಕಲಿಯುತ್ತಿರುವ ಮಕ್ಕಳಿಗಾಗಿಯೂ ಕಥಾ ಸ್ಪರ್ಧೆಯನ್ನು ಏರ್ಪಡಿಸಿದೆ. ಮಕ್ಕಳು ತಮ್ಮ ಅಪ್ಪಅಮ್ಮ, ಅಜ್ಜಅಜ್ಜಿಯಿಂದ ಕೇಳಿ ತಿಳಿದುಕೊಂಡ ಕಥೆಯನ್ನು ಸೃಜನಶೀಲವಾಗಿ ಕನ್ನಡ ಅಥವಾ ಇಂಗ್ಲಿಷ್ ನಲ್ಲಿ ಬರೆಯಬಹುದಾಗಿದೆ. ಇದಕ್ಕೆ ವಯೋಮಿತಿ 16 ವರ್ಷಗಳು ಮತ್ತು ಕ್ಯಾಲಿಫೋರ್ನಿಯಾ ಮಕ್ಕಳಿಗೆ ಮಾತ್ರ ಅವಕಾಶವಿದೆ. ಗಮನಿಸಿ, ಕಥೆ ಕಳಿಸಲು ಕೊನೆಯ ದಿನಾಂಕ ಆಗಸ್ಟ್ 31, 2015. ತ್ವರೆ ಮಾಡಿರಿ ಮಕ್ಕಳೆ.
ಇತರ ನಿಯಮಗಳಿಗಾಗಿ ಹೆಚ್ಚಿನ ವಿವರಗಳಿಗಾಗಿ ಕೆಕೆಎನ್ ಸಿ ವೆಬ್ ಸೈಟ್ ನೋಡಿರಿ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications