ಸೃಜನಶೀಲತೆಗೆ ಸಾಣೆ ಹಿಡಿಯಿರಿ, ಸ್ಪರ್ಧೆಗೆ ಕಥೆ ಬರೆಯಿರಿ
ಕನ್ನಡ ಕೂಟ ಉತ್ತರ ಕ್ಯಾಲಿಫೋರ್ನಿಯಾದ ಸ್ವರ್ಣಸೇತು 2015ರ ಸಮಿತಿಯು ಅಮೆರಿಕನ್ನಡಿಗರಿಗಾಗಿ ಕನ್ನಡ ಕಥಾಸ್ಪರ್ಧೆಯೊಂದನ್ನು ಆಯೋಜಿಸಿದೆ. ಸೃಜನಶೀಲತೆಗೆ ಕಥೆಯ ರೂಪ ಕೊಡಲು, ನಿಮ್ಮಲ್ಲಿನ ಕಥೆಗಾರನನ್ನು ಪ್ರೋತ್ಸಾಹಿಸಲು. ಕಥೆಯನ್ನು ಇಲ್ಲಿನ ಕನ್ನಡ ಮನೆಮನಗಳಿಗೆ ತಲುಪಿಸಲು ಇದೊಂದು ಸದವಕಾಶ. [ಅನಿವಾಸಿ ಭಾರತೀಯರ ಸಣ್ಣಕಥೆಗಳು]

ಸ್ಪರ್ಧೆಯ ನಿಯಮಗಳು
* ಕಥೆ ಎರಡು ಸಾವಿರ ಶಬ್ದಗಳನ್ನು ಮೀರದಿರಲಿ.
* ಕಥೆಗಳು ಬೇರೆಲ್ಲೂ (ಅಂತರ್ಜಾಲ ಮತ್ತು ಮುದ್ರಿತ ಮಾಧ್ಯಮ) ಪ್ರಕಟವಾಗಿರಬಾರದು.
* ಒಬ್ಬರು ಒಂದಕ್ಕಿಂತ ಹೆಚ್ಚು ಕಥೆ ಕಳುಹಿಸುವಂತಿಲ್ಲ.
* ಅಮೆರಿಕದ ಎಲ್ಲಾ ಕನ್ನಡಿಗರಿಗೂ ಭಾಗವಹಿಸುವ ಅವಕಾಶವಿದೆ.
* ಕಥೆಗಳು ಬರಹ, ನುಡಿ ಅಥವಾ ಯುನಿಕೋಡ್ ತಂತ್ರಾಂಶದಲ್ಲಿರಬೇಕು. ಕೈಬರಹದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.
* ಆಯ್ದ ಕಥೆಗಳಿಗೆ ಬಹುಮಾನವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮ.
* ಆಯ್ದ ಕಥೆಗಳನ್ನು ಸ್ವರ್ಣಸೇತು - 2015ರಲ್ಲಿ ಪ್ರಕಟಿಸಲಾಗುವುದು. ಪರಿಷ್ಕರಿಸಿ ಪ್ರಕಟಿಸುವ ಹಕ್ಕು ಸ್ವರ್ಣಸೇತು-2015ರ ಸಂಪಾದಕ ಸಮಿತಿಗೆ ಸೇರಿದ್ದು.
* ಕಥೆಯ ಜೊತೆಗೆ ಲೇಖಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ಮಿಂಚಂಚೆ ವಿಳಾಸ (email ID)ಕಳುಹಿಸಬೇಕು.
* ನಿಮ್ಮ ಕಥೆಗಳು ನಮಗೆ ತಲುಪಲು ಅಂತಿಮ ದಿನಾಂಕ ಆಗಸ್ಟ್ 31, 2015,
* ನಿಮ್ಮ ಕಥೆಗಳನ್ನು ಕಳುಹಿಸಬೇಕಾದ ವಿಳಾಸ - [email protected]
ಮಕ್ಕಳಿಗೂ ಕಥಾಸ್ಪರ್ಧೆ
ಇದರ ಜೊತೆ ಅಮೆರಿಕದಲ್ಲಿ ಕನ್ನಡ ಕಲಿಯುತ್ತಿರುವ ಮಕ್ಕಳಿಗಾಗಿಯೂ ಕಥಾ ಸ್ಪರ್ಧೆಯನ್ನು ಏರ್ಪಡಿಸಿದೆ. ಮಕ್ಕಳು ತಮ್ಮ ಅಪ್ಪಅಮ್ಮ, ಅಜ್ಜಅಜ್ಜಿಯಿಂದ ಕೇಳಿ ತಿಳಿದುಕೊಂಡ ಕಥೆಯನ್ನು ಸೃಜನಶೀಲವಾಗಿ ಕನ್ನಡ ಅಥವಾ ಇಂಗ್ಲಿಷ್ ನಲ್ಲಿ ಬರೆಯಬಹುದಾಗಿದೆ. ಇದಕ್ಕೆ ವಯೋಮಿತಿ 16 ವರ್ಷಗಳು ಮತ್ತು ಕ್ಯಾಲಿಫೋರ್ನಿಯಾ ಮಕ್ಕಳಿಗೆ ಮಾತ್ರ ಅವಕಾಶವಿದೆ. ಗಮನಿಸಿ, ಕಥೆ ಕಳಿಸಲು ಕೊನೆಯ ದಿನಾಂಕ ಆಗಸ್ಟ್ 31, 2015. ತ್ವರೆ ಮಾಡಿರಿ ಮಕ್ಕಳೆ.
ಇತರ ನಿಯಮಗಳಿಗಾಗಿ ಹೆಚ್ಚಿನ ವಿವರಗಳಿಗಾಗಿ ಕೆಕೆಎನ್ ಸಿ ವೆಬ್ ಸೈಟ್ ನೋಡಿರಿ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications