ಲಂಡನ್ನಿನ ಸ್ಲೌನಲ್ಲಿ ಮಧ್ವನವಮಿ, ಶ್ರೀಕೃಷ್ಣ ಗಾನಾಮೃತ
ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ "ಗ್ರೇಟ್ ಬ್ರಿಟನ್ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ್ (GB SRS ಬೃಂದಾವನ್)" ಸಂಸ್ಥೆಯು ಮಧ್ವನವಮಿ ಮತ್ತು ಶ್ರೀ ಕೃಷ್ಣ ಗಾನಾಮೃತ/ಉಯ್ಯಾಲೋತ್ಸವವನ್ನು ಆಚರಿಸುತ್ತಿದೆ.
ಲಂಡನ್ ಮಹಾನಗರದ ಸಮೀಪದಲ್ಲಿರುವ ಸ್ಲೌ (Slough) ನಗರದ ಹಿಂದೂ ದೇವಾಲಯದಲ್ಲಿ ಫೆಬ್ರವರಿ 20ರಂದು ಶನಿವಾರ ಮಧ್ವನವಮಿಯನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ನಡೆದಿವೆ. ದಿನಪೂರ್ತಿ ಹಲವಾರು ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಯುಕೆಯಲ್ಲಿ ಇದು ಮಧ್ವನವಮಿಯ 6ನೇ ವಾರ್ಷಿಕೋತ್ಸವ.
ಈ ಸಮಾರಂಭ ಉಚಿತವಾಗಿದ್ದು, ಎಲ್ಲ ಭಕ್ತಾದಿಗಳು ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಆಯೋಜಕರು ಕೋರಿದ್ದಾರೆ. ಸೇವೆಯ ವಿವರ, ಸ್ವಇಚ್ಛೆಯಿಂದ ದಾನ ಮಾಡುವವರಿಗಾಗಿ ವಿವರ ತಿಳಿಯಬಯಸುವವರು ಸಂಸ್ಥೆಯ ವೆಬ್ ಸೈಟ್ ನೋಡಬಹುದು. [ಲಂಡನ್ ನಲ್ಲಿ ರಾಘವೇಂದ್ರ ಸ್ವಾಮಿಯ 344ನೇ ಆರಾಧನೆ]

ಕಾರ್ಯಕ್ರಮಗಳ ವಿವರ ಕೆಳಗಿನಂತಿದೆ
8ರಿಂದ 9 : ದೇವರ ಪೂಜೆ
9ರಿಂದ 11 : ಶ್ರೀ ಹರಿವಾಯು ಸ್ತುತಿ ಮತ್ತು ಪಂಚಾಮೃತ ಅಭಿಷೇಕ
11ರಿಂದ 12 : ಭಜನೆ
12ರಿಂದ 12.30 : ಮಹಾ ಮಂಗಳಾರತಿ
12.30ರಿಂದ 14.30 : ತೀರ್ಥ ಪ್ರಸಾದ (ಊಟ)
15ರಿಂದ 17 : ಶ್ರೀ ಕೃಷ್ಣ ಗಾನಾಮೃತ (ಗ್ರೇಟ್ ಬ್ರಿಟನ್ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ)
17ರಿಂದ 18 : ಉಯ್ಯಾಲೋತ್ಸವ (ಶ್ರೀ ಕೃಷ್ಣನಿಗೆ ಉಯ್ಯಾಲೆ ಸೇವೆ)
ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ರಾಘವೇಂದ್ರ ಸ್ವಾಮಿಗಳ 344ನೇ ಆರಾಧನೆಯನ್ನು (6ನೇ ವಾರ್ಷಿಕೋತ್ಸವ) ಗ್ರೇಟ್ ಬ್ರಿಟನ್ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ್ ನಲ್ಲಿ ಆಯೋಜಿಸಲಾಗಿತ್ತು. 500ಕ್ಕೂ ಹೆಚ್ಚು ಭಕ್ತಾದಿಗಳು ಈ ಸಮಾವೇಶದಲ್ಲಿ ಪಾಲ್ಗೊಂಡು ರಾಯರ ಅನುಗ್ರಹಕ್ಕೆ ಪಾತ್ರರಾಗಿದ್ದರು.
ವಿಶ್ವದ ಭಕ್ತರು ವೆಬ್ ಸೈಟ್ www.gb-srsbrundavn.org ಮೂಲಕ ಮುಂದೆ ಬರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಬಹುದು ಹಾಗು ಇಮೇಲ್ [email protected] ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications