ಲಂಡನ್ನಿನ ಸ್ಲೌನಲ್ಲಿ ಮಧ್ವನವಮಿ, ಶ್ರೀಕೃಷ್ಣ ಗಾನಾಮೃತ
ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ "ಗ್ರೇಟ್ ಬ್ರಿಟನ್ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ್ (GB SRS ಬೃಂದಾವನ್)" ಸಂಸ್ಥೆಯು ಮಧ್ವನವಮಿ ಮತ್ತು ಶ್ರೀ ಕೃಷ್ಣ ಗಾನಾಮೃತ/ಉಯ್ಯಾಲೋತ್ಸವವನ್ನು ಆಚರಿಸುತ್ತಿದೆ.
ಲಂಡನ್ ಮಹಾನಗರದ ಸಮೀಪದಲ್ಲಿರುವ ಸ್ಲೌ (Slough) ನಗರದ ಹಿಂದೂ ದೇವಾಲಯದಲ್ಲಿ ಫೆಬ್ರವರಿ 20ರಂದು ಶನಿವಾರ ಮಧ್ವನವಮಿಯನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ನಡೆದಿವೆ. ದಿನಪೂರ್ತಿ ಹಲವಾರು ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಯುಕೆಯಲ್ಲಿ ಇದು ಮಧ್ವನವಮಿಯ 6ನೇ ವಾರ್ಷಿಕೋತ್ಸವ.
ಈ ಸಮಾರಂಭ ಉಚಿತವಾಗಿದ್ದು, ಎಲ್ಲ ಭಕ್ತಾದಿಗಳು ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಆಯೋಜಕರು ಕೋರಿದ್ದಾರೆ. ಸೇವೆಯ ವಿವರ, ಸ್ವಇಚ್ಛೆಯಿಂದ ದಾನ ಮಾಡುವವರಿಗಾಗಿ ವಿವರ ತಿಳಿಯಬಯಸುವವರು ಸಂಸ್ಥೆಯ ವೆಬ್ ಸೈಟ್ ನೋಡಬಹುದು. [ಲಂಡನ್ ನಲ್ಲಿ ರಾಘವೇಂದ್ರ ಸ್ವಾಮಿಯ 344ನೇ ಆರಾಧನೆ]

ಕಾರ್ಯಕ್ರಮಗಳ ವಿವರ ಕೆಳಗಿನಂತಿದೆ
8ರಿಂದ 9 : ದೇವರ ಪೂಜೆ
9ರಿಂದ 11 : ಶ್ರೀ ಹರಿವಾಯು ಸ್ತುತಿ ಮತ್ತು ಪಂಚಾಮೃತ ಅಭಿಷೇಕ
11ರಿಂದ 12 : ಭಜನೆ
12ರಿಂದ 12.30 : ಮಹಾ ಮಂಗಳಾರತಿ
12.30ರಿಂದ 14.30 : ತೀರ್ಥ ಪ್ರಸಾದ (ಊಟ)
15ರಿಂದ 17 : ಶ್ರೀ ಕೃಷ್ಣ ಗಾನಾಮೃತ (ಗ್ರೇಟ್ ಬ್ರಿಟನ್ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ)
17ರಿಂದ 18 : ಉಯ್ಯಾಲೋತ್ಸವ (ಶ್ರೀ ಕೃಷ್ಣನಿಗೆ ಉಯ್ಯಾಲೆ ಸೇವೆ)
ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ರಾಘವೇಂದ್ರ ಸ್ವಾಮಿಗಳ 344ನೇ ಆರಾಧನೆಯನ್ನು (6ನೇ ವಾರ್ಷಿಕೋತ್ಸವ) ಗ್ರೇಟ್ ಬ್ರಿಟನ್ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ್ ನಲ್ಲಿ ಆಯೋಜಿಸಲಾಗಿತ್ತು. 500ಕ್ಕೂ ಹೆಚ್ಚು ಭಕ್ತಾದಿಗಳು ಈ ಸಮಾವೇಶದಲ್ಲಿ ಪಾಲ್ಗೊಂಡು ರಾಯರ ಅನುಗ್ರಹಕ್ಕೆ ಪಾತ್ರರಾಗಿದ್ದರು.
ವಿಶ್ವದ ಭಕ್ತರು ವೆಬ್ ಸೈಟ್ www.gb-srsbrundavn.org ಮೂಲಕ ಮುಂದೆ ಬರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಬಹುದು ಹಾಗು ಇಮೇಲ್ [email protected] ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications